ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಇಬ್ಬರು ಸಾವು, 10 ಮಂದಿಗೆ ಗಾಯ

Date:

ಹಲವು ತಿಂಗಳುಗಳ ನಂತರ ಮಣಿಪುರದದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಇಂಫಾಲ್ ಪಶ್ಚಿಮದ ಕೌತ್ರುಕ್ ಪ್ರದೇಶದಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸ್ ಸಿಬ್ಬಂದಿ, ಟಿವಿ ವರದಿಗಾರ ಸೇರಿದಂತೆ ಹತ್ತು ಜನರು ಗಾಯಗೊಂಡಿದ್ದಾರೆ.

ಕೌತ್ರುಕ್‌ನಲ್ಲಿ ನಡೆದ ದಾಳಿಯಲ್ಲಿ, ಕುಕಿ ಸಮುದಾಯಕ್ಕೆ ಸೇರಿದಂತೆ ಬಂಡುಕೋರರು ಡ್ರೋನ್‌ಗಳನ್ನು ಬಳಸಿಕೊಂಡು ಹಲವಾರು ಆರ್‌ಪಿಜಿಗಳನ್ನು (ರಾಕೆಟ್ ಚಾಲಿತ ಗ್ರೆನೇಡ್‌ಗಳು) ಪ್ರಯೋಗಿಸಿದ್ದಾರೆ ಎಂದು ಮಣಿಪುರ ಪೊಲೀಸರ ಅಧಿಕೃತ ಹೇಳಿಕೆ ತಿಳಿಸಿದೆ. ಹಳ್ಳಿಯನ್ನು ಗುರಿಯಾಗಿಸಲು ಏಳು ಸ್ಪೋಟಕಗಳನ್ನು ಬಳಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

“ಮಣಿಪುರದಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿದೆ. ಇನ್ನು ಆರು ತಿಂಗಳಲ್ಲೇ ಮಣಿಪುರದಲ್ಲಿ ಸಂಪೂರ್ಣ ಶಾಂತಿ ತರಲಾಗುವುದು. ಈ ವಿಚಾರದಲ್ಲಿ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಹೇಳಿಕೆ ಕೆಲವೇ ದಿನಗಳಲ್ಲಿ ಮತ್ತೆ ಹಿಂಸಾಚಾರ ನಡೆದು ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಮೊದಲ ಬಾರಿ ಸಿಎಂ ಬಿರೇನ್ ಸಿಂಗ್ ಭೇಟಿ ಮಾಡಿದ ಮೋದಿ

“ಯುದ್ಧಗಳಲ್ಲಿ ಡ್ರೋನ್ ಬಾಂಬ್‌ಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ. ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರನ್ನು ಗುರಿಯಾಗಿ ಡ್ರೋನ್‌ಗಳ ದಾಳಿ ಅಧಿಕವಾಗುತ್ತಿದೆ. ಪ್ರಾಯಶಃ ತಾಂತ್ರಿಕ ಪರಿಣತಿ ಮತ್ತು ಬೆಂಬಲದಿಂದ ಹೆಚ್ಚು ತರಬೇತಿ ಪಡೆದ ವೃತ್ತಿಪರರು ಇದನ್ನು ಮಾಡುತ್ತಿದ್ದಾರೆ ಎಂಬುದನ್ನು ನಾವು ತಳ್ಳಿಹಾಕಲಾಗದು” ಎಂದು ಮಣಿಪುರ ಪೊಲೀಸರ ಅಧಿಕೃತ ಹೇಳಿಕೆ ತಿಳಿಸಿದೆ.

ಭಾನುವಾರ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ಪ್ರಾರಂಭವಾಗಿದೆ. ರಾತ್ರಿ 7:30 ವೇಳೆಗೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗ್ರಾಮದಲ್ಲಿನ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಅದಾದ ಬಳಿಕ ಹೆಚ್ಚಿನ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...