ಬಿಹಾರದಿಂದ ದೆಹಲಿ ದರ್ಬಾರ್‌ಗೆ: ಬಿಜೆಪಿಯ ನೂತನ ಸಾರಥಿ ನಿತಿನ್ ನಬಿನ್

Date:

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಾಂಸ್ಥಿಕ ರಚನೆಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಯುವ ಮುಖಂಡ ಹಾಗೂ ಬಿಹಾರದ ಪ್ರಬಲ ನಾಯಕ ನಿತಿನ್ ನಬಿನ್ ಅವರನ್ನು ಪಕ್ಷದ ‘ರಾಷ್ಟ್ರೀಯ ಕಾರ್ಯಾಧ್ಯಕ್ಷ’ರನ್ನಾಗಿ ನೇಮಕ ಮಾಡುವ ಮೂಲಕ ಹೈಕಮಾಂಡ್ ಪೀಳಿಗೆಯ ಬದಲಾವಣೆಗೆ ನಾಂದಿ ಹಾಡಿದೆ. ಕೇವಲ 45ನೇ ವಯಸ್ಸಿನಲ್ಲಿ ಈ ಉನ್ನತ ಹುದ್ದೆಗೇರಿರುವ ನಿತಿನ್, ಪಕ್ಷದ ಇತಿಹಾಸದಲ್ಲೇ ಅತ್ಯಂತ ಕಿರಿಯ ಕಾರ್ಯಾಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ರಾಜಕೀಯ ಹಿನ್ನೆಲೆ ಮತ್ತು ಆರಂಭ:

ನಿತಿನ್ ನಬಿನ್ ಅವರ ರಾಜಕೀಯ ಪ್ರವೇಶ ಆಕಸ್ಮಿಕವಾದರೂ, ಅವರಿಗೆ ರಾಜಕೀಯ ವಂಶಪಾರಂಪರಿಕವಾಗಿದೆ. ಇವರು ಬಿಹಾರ ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕರಾಗಿದ್ದ ದಿವಂಗತ ನಬಿನ್ ಕಿಶೋರ್ ಸಿನ್ಹಾ ಅವರ ಪುತ್ರ. 2006ರಲ್ಲಿ ತಂದೆಯ ನಿಧನದ ನಂತರ ತೆರವಾದ ಪಾಟ್ನಾ ಪಶ್ಚಿಮ ಕ್ಷೇತ್ರದಿಂದ (ನಂತರ ಬಂಕಿಪುರ ಕ್ಷೇತ್ರ) ಸ್ಪರ್ಧಿಸುವ ಮೂಲಕ ರಾಜಕೀಯಕ್ಕೆ ಬಂದರು. ಅಂದಿನಿಂದ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು, ತಮ್ಮ ಕ್ಷೇತ್ರದಲ್ಲಿ ಅಜೇಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಬಿಹಾರ ಸರ್ಕಾರದಲ್ಲಿ ರಸ್ತೆ ನಿರ್ಮಾಣ ಮತ್ತು ನಗರಾಭಿವೃದ್ಧಿ ಸಚಿವರಾಗಿಯೂ ಅವರು ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನಾ ಚತುರತೆ ಮತ್ತು ಛತ್ತೀಸ್‌ಗಢದ ಯಶಸ್ಸು:

ನಿತಿನ್ ನಬಿನ್ ಕೇವಲ ಜನಪ್ರತಿನಿಧಿಯಲ್ಲ, ಬದಲಿಗೆ ಪಕ್ಷದ ಸಂಘಟನೆಯಲ್ಲಿ ಪಳಗಿದ ನಾಯಕ. ಭಾರತೀಯ ಜನತಾ ಯುವ ಮೋರ್ಚಾದ (BJYM) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ಆದರೆ, ಹೈಕಮಾಂಡ್ ಕಣ್ಣಿಗೆ ಇವರು ಪ್ರಬಲವಾಗಿ ಕಂಡಿದ್ದು ಛತೀಸ್‌ಗಢ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ. ಛತ್ತೀಸ್‌ಗಢದ ಸಹ-ಉಸ್ತುವಾರಿಯಾಗಿ ನೇಮಕಗೊಂಡಿದ್ದ ನಿತಿನ್, ಅಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ತಂತ್ರ ರೂಪಿಸಿ, ಪಕ್ಷವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ತೆರೆಮರೆಯಲ್ಲಿ ನಿಂತು ಬೂತ್ ಮಟ್ಟದ ಕಾರ್ಯಕರ್ತರನ್ನು ಹುರಿದುಂಬಿಸುವ ಅವರ ಶೈಲಿ ಕೇಂದ್ರ ನಾಯಕತ್ವದ ಮೆಚ್ಚುಗೆ ಗಳಿಸಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ಯಾಲೆಟ್ ಪೇಪರ್’ ಬಂದರೆ ಎಲ್ಲವೂ ಸರಿಯಾಗುವುದೇ?

ಏಕೆ ಈ ಆಯ್ಕೆ?

ಜೆ.ಪಿ. ನಡ್ಡಾ ಅವರ ಉತ್ತರಾಧಿಕಾರಿಯಾಗಿ ಅಥವಾ ಪಕ್ಷದ ದೈನಂದಿನ ಚಟುವಟಿಕೆಗಳನ್ನು ಮುನ್ನಡೆಸಲು ಒಬ್ಬ ಕ್ರಿಯಾಶೀಲ ಹಾಗೂ ವಿವಾದರಹಿತ ನಾಯಕನ ಅಗತ್ಯವಿತ್ತು. ಆರ್‌ಎಸ್‌ಎಸ್ ಹಿನ್ನೆಲೆಯ ಕುಟುಂಬದಿಂದ ಬಂದಿರುವ ಇವರು, ಸೈದ್ಧಾಂತಿಕವಾಗಿ ಪಕ್ಷಕ್ಕೆ ನಿಷ್ಠರು. ಬಿಹಾರದ ಕಾಯಸ್ಥ ಸಮುದಾಯಕ್ಕೆ ಸೇರಿದವರಾದರೂ, ಹೆಚ್ಚಾಗಿ ಹಿಂದುತ್ವದ ಅಜೆಂಡಾವನ್ನು ನೆಚ್ಚಿಕೊಂಡವರು.

ಗುಜರಾತ್ ಮತ್ತು ಉತ್ತರ ಪ್ರದೇಶದ ಹೊರಗಿನ (ಬಿಹಾರದ) ನಾಯಕನೊಬ್ಬನಿಗೆ ಮಣೆ ಹಾಕುವ ಮೂಲಕ, ಬಿಜೆಪಿ ತನ್ನ ಸಾಂಪ್ರದಾಯಿಕ ಹಿಡಿತವನ್ನು ಮತ್ತು ನಾಯಕತ್ವವನ್ನು ವಿಸ್ತರಿಸುವ ತಂತ್ರಗಾರಿಕೆ ಅನುಸರಿಸಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ, ತಂದೆಯ ನೆರಳಿನಿಂದ ಹೊರಬಂದು, ಸಂಘಟನಾತ್ಮಕ ಸಾಮರ್ಥ್ಯದ ಮೂಲಕವೇ ದೆಹಲಿಯ ಪ್ರಬಲ ಪೀಠವೇರಿರುವ ನಿತಿನ್ ನಬಿನ್, ಮುಂಬರುವ ದಿನಗಳಲ್ಲಿ ಬಿಜೆಪಿಯ ಚಹರೆಯನ್ನು ಹೇಗೆ ಬದಲಿಸಲಿದ್ದಾರೆ ಎಂಬುದು ಕುತೂಹಲಕರ ಸಂಗತಿ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...