‘ಮೇಡ್ ಇನ್ ಚೀನಾ’ ರೋಬೊಡಾಗ್ ವಿವಾದ: ಮಳಿಗೆ ತೆರವುಗೊಳಿಸುವಂತೆ ಗಲ್ಗೋಟಿಯಾಸ್ ವಿವಿಗೆ ಸೂಚನೆ

Date:

ನವದೆಹಲಿಯಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ’ಯಲ್ಲಿ ಚೀನಾ ಮೂಲದ ರೋಬೊಡಾಗ್ ಒಂದನ್ನು ತಮ್ಮದೇ ಸ್ವಂತ ಆವಿಷ್ಕಾರ ಎಂದು ಬಿಂಬಿಸಿ ತೀವ್ರ ಮುಖಭಂಗ ಅನುಭವಿಸಿದ ನೋಯ್ಡಾ ಮೂಲದ ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಎಕ್ಸ್‌ಪೋ ಮಳಿಗೆಯನ್ನು ತಕ್ಷಣವೇ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಶೃಂಗಸಭೆಯಲ್ಲಿ ವಿಶ್ವವಿದ್ಯಾಲಯದ ‘ಸೆಂಟರ್ ಆಫ್ ಎಕ್ಸಲೆನ್ಸ್’ ಪ್ರತಿನಿಧಿಯೊಬ್ಬರು ‘ಓರಿಯನ್’ ಹೆಸರಿನ ರೋಬೊಡಾಗ್ ಅನ್ನು ಪ್ರದರ್ಶಿಸುತ್ತಾ, ಇದು ತಮ್ಮ ತಂಡದ ಆಂತರಿಕ ಆವಿಷ್ಕಾರ ಎಂದು ವಿವರಿಸುವ ವಿಡಿಯೊವೊಂದು ವೈರಲ್ ಆದ ಬಳಿಕ ಈ ವಿವಾದ ಭುಗಿಲೆದ್ದಿತು. ವಿಡಿಯೊ ಹರಿದಾಡುತ್ತಿದ್ದಂತೆ ಎಚ್ಚೆತ್ತ ಆನ್‌ಲೈನ್ ತಜ್ಞರು, ಇದು ವಾಸ್ತವವಾಗಿ ಚೀನಾದ ‘ಯೂನಿಟ್ರೀ’ ಕಂಪನಿಯು ತಯಾರಿಸಿದ ‘Go2’ ಮಾದರಿಯ ರೋಬೊಡಾಗ್ ಎಂಬುದನ್ನು ಪತ್ತೆಹಚ್ಚಿದರು. ಈ ಯಂತ್ರವು ಮಾರುಕಟ್ಟೆಯಲ್ಲಿ ಸುಮಾರು 2.3 ಲಕ್ಷದಿಂದ 3 ಲಕ್ಷ ರೂ. ಗಳಿಗೆ ವಾಣಿಜ್ಯ ಉಪಯೋಗಕ್ಕಾಗಿ ಸುಲಭವಾಗಿ ಲಭ್ಯವಿದೆ ಎನ್ನುವ ಸತ್ಯವನ್ನು ಬಯಲು ಮಾಡಿದರು.

ವಿವಾದ ತಾರಕಕ್ಕೇರುತ್ತಿದ್ದಂತೆ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ ವಿಶ್ವವಿದ್ಯಾಲಯವು, ತಾನು ಈ ರೋಬೊಡಾಗ್ ಅನ್ನು ಸ್ವತಃ ತಯಾರಿಸಿದ್ದಾಗಿ ಎಲ್ಲಿಯೂ ಹೇಳಿಕೊಂಡಿಲ್ಲ ಎಂದು ಸಮರ್ಥಿಸಿಕೊಂಡಿತು. ವಿದ್ಯಾರ್ಥಿಗಳ ಕಲಿಕೆ, ಪ್ರಯೋಗ ಮತ್ತು ಎಐ ತಂತ್ರಜ್ಞಾನದ ಅಧ್ಯಯನಕ್ಕಾಗಿ ಇದನ್ನು ತರಿಸಲಾಗಿದ್ದು, ಇದೊಂದು ‘ಚಲಿಸುವ ತರಗತಿ’ ಆಗಿದೆಯೇ ಹೊರತು ತಮ್ಮ ಎಂಜಿನಿಯರಿಂಗ್ ಪ್ರದರ್ಶನವಲ್ಲ ಎಂದು ವಿವಿ ಹೇಳಿತು. ಆದರೆ, ವಿವಿಯ ಈ ಸಮರ್ಥನೆಯನ್ನು ಎಕ್ಸ್ ವೇದಿಕೆಯ ‘ಕಮ್ಯುನಿಟಿ ನೋಟ್’ ಸುಳ್ಳು ಎಂದು ಸಾಬೀತುಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಮದು ಮಾಡಿಕೊಂಡ ಯಂತ್ರಾಂಶವನ್ನು ತಮ್ಮದೇ ಸ್ವದೇಶಿ ತಂತ್ರಜ್ಞಾನ ಎಂದು ಬಿಂಬಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಎಐ ಶೃಂಗಸಭೆಯಿಂದ ಹೊರನಡೆಯುವಂತೆ ಸೂಚಿಸಿ ಮಳಿಗೆಯನ್ನು ಕಡ್ಡಾಯವಾಗಿ ತೆರವುಗೊಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...