ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

Date:

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್ ಒಂದು 2.3 ಕೋಟಿ ರೂ. ದೋಚಿರುವ ಘಟನೆ ದೆಹಲಿಯ ವಿವೇಕ್ ವಿಹಾರ್‌ನಲ್ಲಿ ನಡೆದಿದೆ.

ಗಾಜಿಯಾಬಾದ್‌ನ ಇಂದಿರಾಪುರಂ ನಿವಾಸಿ, ಹಣಕಾಸು, ಆಸ್ತಿ ವ್ಯವಹಾರ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಮನ್‌ಪ್ರೀತ್ ಎಂಬ ಉದ್ಯಮಿ ಈ ಸಂಬಂಧ ದೂರು ನೀಡಿದ್ದಾರೆ. ಮನ್‌ಪ್ರೀತ್ ವಿವೇಕ್ ವಿಹಾರ್‌ನಲ್ಲಿರುವ ತಮ್ಮ ಕಟ್ಟಡದಲ್ಲಿದ್ದ 2.5 ಕೋಟಿ ರೂ. ಮೌಲ್ಯದ ಗಳಿಕೆಯನ್ನು ಇಟ್ಟುಕೊಂಡಿದ್ದರು ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಸಿಬಿಐ, ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಕೇಜ್ರಿವಾಲ್‌ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಗಸ್ಟ್ 19ರಂದು ಅವರು ತಮ್ಮ ಸ್ನೇಹಿತ ರವಿಶಂಕರ್ ಬಳಿ ತಮ್ಮ ಮನೆಯಿಂದ 1.10 ಕೋಟಿ ರೂ. ತೆಗೆದುಕೊಂಡು ಬರುವಂತೆ ತಿಳಿಸಿದ್ದಾರೆ. ಶಂಕರ್ ನಗದು ಚೀಲದೊಂದಿಗೆ ಕಟ್ಟಡದಿಂದ ಹೊರಬಂದ ತಕ್ಷಣ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಎರಡು ಕಾರುಗಳಲ್ಲಿ ಬಂದು ಅಡ್ಡಗಟ್ಟಿ ತಾವು ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡಿದ್ದಾರೆ. ಹಾಗೆಯೇ ಶಂಕರ್ ಅವರನ್ನು ಥಳಿಸಿ ಚೀಲವನ್ನು ಕಸಿದುಕೊಂಡಿದ್ದಾರೆ” ಎಂದು ದೂರಿನಲ್ಲಿ ತಿಳಿಸಿರುವುದಾಗಿ ಉಪ ಪೊಲೀಸ್ ಆಯುಕ್ತ (ಶಹದಾರ) ಪ್ರಶಾಂತ್ ಗೌತಮ್ ಹೇಳಿದರು.

ಹಾಗೆಯೇ ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡ ಆರೋಪಿಗಳು ಕಟ್ಟಡದ ಒಳಗೆ ಹೋಗಿ ಮನ್‌ಪ್ರೀತ್ ಅವರ ಉದ್ಯೋಗಿ ದೀಪಕ್ ಮಹೇಶ್ವರಿ ಅವರನ್ನು ಥಳಿಸಿ, ಅಲ್ಲಿ ಇರಿಸಲಾಗಿದ್ದ ಉಳಿದ ಹಣವನ್ನು ಕದ್ದೊಯ್ದಿದ್ದಾರೆ ಎಂದು ವರದಿಯಾಗಿದೆ.

ಹಾಗೆಯೇ ಶಂಕರ್ ಮತ್ತು ಮಹೇಶ್ವರಿ ಅವರನ್ನು ಸಿಬಿಐ ವಶಕ್ಕೆ ಪಡೆಯುತ್ತೇವೆ ಎಂದು ಹೇಳಿಕೊಂಡ ನಕಲಿ ಸಿಬಿಐ ಅಧಿಕಾರಿಗಳು, ಇಬ್ಬರನ್ನೂ ಕಾರಿನಲ್ಲಿ ಕೂರಿಸಿ, ಶಂಕರ್ ಅವರನ್ನು ಚಿಂತಾಮಣಿ ಅಂಡರ್‌ಪಾಸ್ ಬಳಿ ಮತ್ತು ಮಹೇಶ್ವರಿಯನ್ನು ನಿಗಮ್‌ಬೋಧ್ ಘಾಟ್‌ನಲ್ಲಿ ಬಿಟ್ಟಿದ್ದಾರೆ. ಹಾಗೆಯೇ ಈ ಘಟನೆಯನ್ನು ಯಾರಿಗೂ ತಿಳಿಸದ್ದಂತೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇನ್ನು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗಿದ್ದು, ತನಿಖೆಯ ಸಮಯದಲ್ಲಿ ವಾಹನಗಳನ್ನು ಸಾಕೇತ್ ಮೆಟ್ರೋ ನಿಲ್ದಾಣದ ಬಳಿ ಇರುವ ಎನ್‌ಜಿಒವೊಂದು ಬಾಡಿಗೆಗೆ ಪಡೆದಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಎನ್‌ಜಿಒ ಕಾರ್ಯದರ್ಶಿ ಮತ್ತು ಅಸ್ಸಾಂ ಮೂಲದ ಪಪೋರಿ ಬರುವಾ (31) ಮತ್ತು ತುಘಲಕಾಬಾದ್ ನಿವಾಸಿ ದೀಪಕ್ (32) ಎಂದು ಗುರುತಿಸಲಾದ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ.

“ಇಬ್ಬರ ಬಳಿಯಿಂದ 1.08 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಉಳಿದ ಶಂಕಿತರನ್ನು ಮತ್ತು ಹಣವನ್ನು ಪತ್ತೆಹಚ್ಚಲು ಕಾರ್ಯಾಚರಣೆ ನಡೆಯುತ್ತಿದೆ. ರೋಡೆ ಮತ್ತು ಕ್ರಿಮಿನಲ್ ಪಿತೂರಿಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...