ಲೋಕಸಭೆ ಚುನಾವಣೆ| ದೋಷಪೂರಿತ ಇವಿಎಂಗಳ ಡೇಟಾ ಬಿಡುಗಡೆ ಮಾಡಿ: ಇಸಿಗೆ ಕಾಂಗ್ರೆಸ್‌ ಸಂಸದ ಆಗ್ರಹ

Date:

ಲೋಕಸಭೆ ಚುನಾವಣೆಯಲ್ಲಿ ದೋಷ ಕಂಡುಬಂದಿರುವ ಇವಿಎಂಗಳ ಡೇಟಾವನ್ನು ಬಿಡುಗಡೆ ಮಾಡುವಂತೆ ಜೋರ್ಹತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಸಂಸದ ಗೌರವ್ ಗೊಗೊಯ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಇವಿಎಂಗಳನ್ನು ಹ್ಯಾಕ್ ಮಾಡಲಾಗುವ ಬಗ್ಗೆ ಮತ್ತು ಇವಿಎಂಗಳ ದೋಷಗಳ ಬಗ್ಗೆ ಲೋಕಸಭೆ ಚುನಾವಣೆಗೂ ಮುನ್ನವೇ ಹಲವಾರು ವಿಪಕ್ಷ ನಾಯಕರುಗಳು ಪ್ರಶ್ನೆ ಎತ್ತಿದ್ದರು. ಆದರೆ ಇತ್ತೀಚೆಗೆ ಟೆಸ್ಲಾ ಮುಖ್ಯಸ್ಥ, ವಿಶ್ವದ ಅತೀ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಿದೆ ಎಂದು ಎಕ್ಸ್ ಪೋಸ್ಟ್ ಮಾಡಿದ ಬಳಿಕ ಇವಿಎಂ ದೋಷಗಳ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿದ್ದ ಎಕ್ಸ್ (ಟ್ವಿಟ್ಟರ್) ಮಾಲೀಕ ಎಲಾನ್ ಮಸ್ಕ್, “ವಿದ್ಯುನ್ಮಾನ ಮತಯಂತ್ರಗಳ ಬಳಕೆಯನ್ನು ನಿಲ್ಲಿಸಬೇಕು. ಇವಿಎಂ ಮಾನವರು ಅಥವಾ ಎಐನಿಂದ ಹ್ಯಾಕ್ ಆಗುವ ಅಪಾಯ ಕಡಿಮೆಯಾಗಿದ್ದರೂ ಕೂಡಾ ಅಪಾಯ ಇನ್ನೂ ಹೆಚ್ಚಾಗಿದೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ಅದಾದ ಬಳಿಕ “ಇದು ಅಸಂಬದ್ಧ ಊಹಾಪೋಹ ಮತ್ತು ಭಾರತೀಯ ಚುನಾವಣೆಗಳ ವಿಶ್ವಾಸಾರ್ಹತೆಯನ್ನು ಕೆಡಿಸುವ ಪ್ರಯತ್ನವಾಗಿದೆ” ಎಂದು ಚುನಾವಣಾ ಆಯೋಗ ಆರೋಪಿಸಿದೆ.

“ನಾವು ನಿಮಗೆ ಸವಾಲು ಹಾಕುತ್ತೇವೆ, ಎಲಾನ್ ಮಸ್ಕ್ ಅವರೆ ಭಾರತಕ್ಕೆ ಬಂದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಮಹಾನ್ ಚುನಾವಣೆಯಲ್ಲಿ ಬಳಸಲಾದ ಇವಿಎಂಗಳ ಹ್ಯಾಕಿಂಗ್ ಹೇಗೆ ಆಗುತ್ತದೆ ಎಂದು ತೋರಿಸಿ” ಎಂದು ಚುನಾವಣಾ ಆಯೋಗ ಸವಾಲೆಸೆದಿದೆ.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಸೋಮವಾರ ಎಕ್ಸ್‌ ಪೋಸ್ಟ್ ಮಾಡಿರುವ ಸಂಸದ ಗೌರವ್ ಗೊಗೊಯ್, “ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ತಪ್ಪಾಗಲಾರದು ಎಂದು ಪರಿಗಣಿಸುವ ಮೊದಲು ಭಾರತದ ಚುನಾವಣಾ ಆಯೋಗವು ಚುನಾವಣೆಯ ಉದ್ದಕ್ಕೂ ಎಷ್ಟು ಎಲೆಕ್ಟ್ರಾನಿಕ್ ಮತಯಂತ್ರಗಳು ದೋಷಪೂರಿತವಾಗಿವೆ ಎಂಬ ಮಾಹಿತಿಯನ್ನು ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ?  ಹ್ಯಾಕ್ ಆಗುವ ಸಾಧ್ಯತೆ; ವಿದ್ಯುನ್ಮಾನ ಮತಯಂತ್ರವನ್ನು ನಿಷೇಧಿಸಬೇಕು ಎಂದ ಎಲಾನ್‌ ಮಸ್ಕ್‌

“ಎಷ್ಟು ಯಂತ್ರಗಳು ತಪ್ಪಾದ ಸಮಯ, ದಿನಾಂಕ, ಮತಗಳನ್ನು ನೋಂದಾಯಿಸಿವೆ ಎಂದು ತೋರಿಸಿವೆ? ಎಷ್ಟು ಇವಿಎಂಗಳ ಘಟಕಗಳನ್ನು ಅಂದರೆ ಎಣಿಕೆ ಘಟಕ, ಮತಯಂತ್ರ ಬದಲಾಯಿಸಲಾಗಿದೆ? ಅಣಕು ಮತದಾನದ ಸಮಯದಲ್ಲಿ ಎಷ್ಟು ಇವಿಎಂಗಳು ದೋಷಪೂರಿತವಾಗಿವೆ” ಎಂದು ಗೌರವ್ ಗೊಗೊಯ್ ಪ್ರಶ್ನಿಸಿದ್ದಾರೆ.

“ಚುನಾವಣೆಯಲ್ಲಿ ಸ್ಪರ್ಧಿಸಿದ ನಂತರ, ಈ ಯಂತ್ರಗಳು ತಪ್ಪಾದ ಫಲಿತಾಂಶಗಳನ್ನು ತೋರಿಸಿವೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಚುನಾವಣಾ ಆಯೋಗವು ಮೇಲ್ಕಂಡ ದತ್ತಾಂಶವನ್ನು ಹೊರತರುತ್ತದೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಸಾರ್ವಜನಿಕರಿಗೆ ತಿಳಿದುಕೊಳ್ಳುವ ಹಕ್ಕಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...