ಅಣ್ಣನ ಜೊತೆ ಜಗಳ; ಕೋಪದಲ್ಲಿ ಮೊಬೈಲ್‌ ನುಂಗಿದ 15 ವರ್ಷದ ಬಾಲಕಿ!

Date:

ಸಹೋದರನ ಜೊತೆ ಜಗಳವಾಡಿದ ಬಾಲಕಿಯೊಬ್ಬಳು ಕೋಪದಲ್ಲಿ ಮೊಬೈಲ್‌ಅನ್ನು ನುಂಗಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.

ಮೊಬೈಲ್‌ ನುಂಗಿದ ಬಳಿಕ ವಿಪರೀತ ಹೊಟ್ಟೆ ನೋವು ಅನುಭವಿಸಿದ್ದ ಬಾಲಕಿಯನ್ನು ಗ್ವಾಲಿಯರ್‌ನ ಜಯಾರೋಗ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಬಾಲಕಿಯ ಹೊಟ್ಟೆಯಿಂದ ಫೋನ್ ಹೊರತೆಗೆದಿದ್ದಾರೆ.

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಅಮಯಾನ್ ಪ್ರದೇಶದ ನಿವಾಸಿಯಾಗಿರುವ ಬಾಲಕಿ ತನ್ನ ಅಣ್ಣನ ಜೊತೆ ಯಾವುದೋ ವಿಷಯಕ್ಕೆ ಜಗಳವಾಡಿದ್ದಳು. ಬಳಿಕ ಕೋಪಗೊಂಡು ತನ್ನ ಕೀಪ್ಯಾಡ್ ಮೊಬೈಲ್ ಫೋನ್ ನುಂಗಿದ್ದಾಳೆ. ಬಳಿಕ ವಿಪರೀತ ಹೊಟ್ಟೆನೋವಿನಿಂದ ಬಳಲಿದ ಬಾಲಕಿ, ಅತಿಯಾಗಿ ವಾಂತಿ ಮಾಡತೊಡಗಿದ್ದಳು. ಇದರಿಂದ ಆತಂಕಗೊಂಡ ಹೆತ್ತವರು ಬಾಲಕಿಯನ್ನು ಭಿಂಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಆದರೆ ವಿಷಯದ ಗಂಭೀರತೆಯನ್ನು ಅರಿತ ವೈದ್ಯರು, ತಕ್ಷಣವೇ ಗ್ವಾಲಿಯರ್‌ನ ಜಯಾರೋಗ್ಯ ಆಸ್ಪತ್ರೆಗೆ ಕರೆದೊಯ್ಯವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Girl swallowed a Chinese cell phone

ಈ ಸುದ್ದಿ ಓದಿದ್ದೀರಾ?: ಜೈಪುರ | ಹಿಂದೂ ಗುರುಗಳು ನೀಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚು: ಮೋಹನ್‌ ಭಾಗವತ್‌

ಜೆಎಎಚ್‌ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಬಾಲಕಿಯನ್ನು ಅಲ್ಟ್ರಾಸೌಂಡ್, ಎಕ್ಸ್-ರೇ  ಹಾಗೂ ಸಿಟಿ ಸ್ಕ್ಯಾನ್ ಸೇರಿದಂತೆ  ಹಲವು ರೀತಿಯ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ಹೊಟ್ಟೆಯಲ್ಲಿ ಮೊಬೈಲ್ ಸಿಕ್ಕಿಹಾಕಿಕೊಂಡಿರುವುದು ಪತ್ತೆಯಾಗಿದೆ. ಸುಮಾರು ಒಂದು ಗಂಟೆಯ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರು ಬಾಲಕಿಯ ಹೊಟ್ಟೆಯಿಂದ ಮೊಬೈಲ್ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮೊಬೈಲ್ ನುಂಗಿ ಆಸ್ಪತ್ರೆಗೆ ದಾಖಲಾದ ಮತ್ತು ಶಸ್ತ್ರಚಿಕಿತ್ಸೆ ಮಾಡಿ ಮೊಬೈಲ್ ಹೊರತೆಗೆದ ಮೊದಲ ಪ್ರಕರಣ ಇದಾಗಿದೆ ಎಂದು ಡಾ ನವೀನ್ ಕುಶ್ವಾಹಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...