ಕುನಾಲ್ ಕಾಮ್ರಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಲು ಒಪ್ಪಿಗೆ ನೀಡಿದ ಮಹಾರಾಷ್ಟ್ರ ವಿಧಾನ ಪರಿಷತ್

Date:

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧದ ಹಾಸ್ಯ ಮಾಡಿದ್ದಕ್ಕಾಗಿ ಪೊಲೀಸ್ ಪ್ರಕರಣ ಎದುರಿಸುತ್ತಿರುವ ಹಾಸ್ಯ ಕಲಾವಿದ ಮತ್ತೊಂದು ತೊಂದರೆಯಲ್ಲಿ ಸಿಲುಕಿಕೊಂಡಿದ್ದು, ಅವರ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಲು ರಾಜ್ಯ ವಿಧಾನ ಪರಿಷತ್ ಒಪ್ಪಿಗೆ ನೀಡಿದೆ.

“ವಿಶ್ವಾಸದ್ರೋಹಿ” ಎಂಬ ಪದ ಬಳಕೆಗಾಗಿ ಕುನಾಲ್ ಕಾಮ್ರಾ ವಿರುದ್ಧದ ಹಕ್ಕುಚ್ಯುತಿ ನೋಟಿಸನ್ನು ವಿಧಾನ ಪರಿಷತ್‌ನ ವಿಶೇಷ ಹಕ್ಕುಗಳ ಸಮಿತಿ ಒಪ್ಪಿಕೊಂಡಿದೆ ಎಂದು ಸಭಾಪತಿ ರಾಮ್ ಶಿಂಧೆ ತಿಳಿಸಿದ್ದಾರೆ.

ಸಂಸತ್ ಸದಸ್ಯರು ಅಥವಾ ಶಾಸಕರು ತಮ್ಮ ಕಾರ್ತವ್ಯಗಳನ್ನು ನಿಭಾಯಿಸಲು ಅಗತ್ಯವಾಗಿ ಹೊಂದಿರುವ ವಿಶೇಷ ಹಕ್ಕುಗಳು ಮತ್ತು ರಕ್ಷಣೆಯನ್ನು ಕಡೆಗಣಿಸುವ ಮತ್ತು ಅಗೌರವಿಸುವ ವ್ಯಕ್ತಿಗಳ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆಘಾತಕಾರಿ ಘಟನೆ | ಮಹಿಳೆ ಮೇಲೆ 18 ಕಾಮುಕರಿಂದ 18 ತಿಂಗಳು ನಿರಂತರ ಸಾಮೂಹಿಕ ಅತ್ಯಾಚಾರ

ರಾಜ್ಯ ಪ್ರವಾಸೋದ್ಯಮ ಖಾತೆ ಸಚಿವ ಮತ್ತು ಶಿವಸೇನೆ ಮುಖಂಡ ಶಂಭುರಾಜ್ ದೇಸಾಯಿ ಈ ಬಗ್ಗೆ ಸುದ್ದಿಗಾರರಿಗೆ ಮಾತನಾಡಿ, ಕುನಾಲ್ ಕಾಮ್ರಾ ಅವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಜತೆಗೆ ಪಕ್ಷದ ಕಾರ್ಯಕರ್ತರ ತಾಳ್ಮೆ ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದರು.

ಎಲ್ಲರೂ ತಾಳ್ಮೆಯಿಂದ ಇರುವಂತೆ ಶಿಂಧೆ ತಾಕೀತು ಮಾಡಿದ್ದಾರೆ. ಆದ್ದರಿಂದ ನಾವು ಸುಮ್ಮನಿದ್ದೇವೆ. ಆತ ಎಲ್ಲೇ ಅಡಗಿಕೊಂಡಿದ್ದರೂ ಹೇಗೆ ಹೊರಗೆಳೆದು ತರಬೇಕು ಎನ್ನುವುದು ಶಿವಸೇನೆ ಕಾರ್ಯಕರ್ತರಿಗೆ ಗೊತ್ತು. ಆದರೆ ಸಚಿವರಾಗಿ ನಾವು ಕೆಲ ನಿರ್ಬಂಧಗಳನ್ನು ಹೊಂದಿದ್ದೇವೆ ಎಂದು ದೇಸಾಯಿ ತಿಳಿಸಿದ್ದಾರೆ.

“ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ. ಆತ ಎಲ್ಲೇ ಅಡಗಿದ್ದರೂ ಪತ್ತೆ ಮಾಡಿ ಆತನಿಗೆ “ಪ್ರಸಾದ ನೀಡಿ” ಎಂದು ಪೊಲೀಸರನ್ನು ದೇಸಾಯಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...