ಮೋದಿ ರೂಪದಲ್ಲಿ ದೇವರೇ ಅವತರಿಸಿದ್ದಾನೆ: ಅಂಬಾನಿ

Date:

ಭಾರತದ ಅಮೃತ ಘಳಿಗೆಯಲ್ಲಿ ಮೋದಿ ಅವರು ತಮ್ಮ ಜನ್ಮದಿನದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ಭಾರತವನ್ನು ಜಗತ್ತಿನ ಸರ್ವಶ್ರೇಷ್ಠ ರಾಷ್ಟ್ರವನ್ನಾಗಿಸಲು ಆ ದೇವರೇ ಮೋದಿ ಅವರ ರೂಪದಲ್ಲಿ ಅವತರಿಸಿದ್ದಾನೆ ಎಂದು ಉದ್ಯಮಿ, ಮೋದಿ ಅವರ ಅತ್ಯಾಪ್ತ ಮುಖೇಶ್ ಅಂಬಾನಿ ಹೇಳಿದ್ದಾರೆ.

ಮೋದಿ ಅವರ 75ನೇ ಜನ್ಮದಿನಕ್ಕೆ ಅಂಬಾನಿ ಶುಭಾಶಯ ಕೋರಿದ್ದಾರೆ. ಅವರ ವಿಡಿಯೋವನ್ನು ಎಎನ್‌ಐ ಪ್ರಕಟಿಸಿದೆ. ವಿಡಿಯೋದಲ್ಲಿ; “ಸ್ವತಂತ್ರ ಭಾರತವು 100 ವರ್ಷಗಳನ್ನು ಪೂರೈಸುವಾಗ ಮೋದಿ ಅವರು ಭಾರತಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಬೇಕು ಎಂಬುದು ನನ್ನ ಆಳವಾದ ಆಶಯ. ಪ್ರಧಾನಿಯವರ ಜನ್ಮದಿನವು ಎಲ್ಲಾ ಭಾರತೀಯರಿಗೆ ‘ಹಬ್ಬದ ದಿನ’ವಾಗಿದೆ” ಎಂದು ಅವರು ಹೇಳಿದ್ದಾರೆ.

“ಇಂದು 145 ಕೋಟಿ ಭಾರತೀಯರಿಗೆ ಹಬ್ಬದ ದಿನವಾಗಿದೆ. ಇದು ನಮ್ಮ ಅತ್ಯಂತ ಗೌರವಾನ್ವಿತ ಮತ್ತು ಪ್ರೀತಿಯ ಪ್ರಧಾನಿ ನರೇಂದ್ರಭಾಯಿ ಮೋದಿ ಜಿ ಅವರ 75ನೇ ಹುಟ್ಟುಹಬ್ಬ. ಭಾರತದ ಇಡೀ ವ್ಯಾಪಾರ ಸಮುದಾಯದ ಪರವಾಗಿ, ರಿಲಯನ್ಸ್ ಕುಟುಂಬ ಮತ್ತು ಅಂಬಾನಿ ಕುಟುಂಬದ ಪರವಾಗಿ, ನಾನು ಪ್ರಧಾನಿ ಮೋದಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಭಾರತದ ಅಮೃತ ಕಾಲದಲ್ಲಿ ಮೋದಿ ಜಿ ಅವರ ಅಮೃತ ಮಹೋತ್ಸವ ಬರುತ್ತಿರುವುದು ಕಾಕತಾಳೀಯವಲ್ಲ. ಅವರ ಜನ್ಮದಿನವನ್ನು ಭಾರತೀಯರು ಉತ್ಸವವಾಗಿ ಆಚರಿಸಬೇಕು” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಲ್ ಅಂಡ್‌ ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಮೈಕ್ರೋಸಾಫ್ಟ್‌ನ ಮಾಜಿ ಸಿಇಒ ಬಿಲ್ ಗೇಟ್ಸ್ ಕೂಡ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. “ಪ್ರಧಾನಿ ಮೋದಿ, ನಿಮ್ಮ 75ನೇ ಹುಟ್ಟುಹಬ್ಬದಂದು ನಿಮಗೆ ನನ್ನ ಶುಭಾಶಯಗಳು. ನೀವು ಭಾರತದ ಅದ್ಭುತ ಪ್ರಗತಿಯನ್ನು ಮುನ್ನಡೆಸುತ್ತಿದ್ದೀರಿ. ಜಾಗತಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವಾಗ ನಿಮಗೆ ಉತ್ತಮ ಆರೋಗ್ಯ ಮತ್ತು ನಿರಂತರ ಶಕ್ತಿ ದೊರೆಯಲಿ ಎಂದು ನಾನು ಬಯಸುತ್ತೇನೆ. ಭಾರತ ಸರ್ಕಾರದೊಂದಿಗಿನ ನಮ್ಮ ಪಾಲುದಾರಿಕೆಯನ್ನು ಗೇಟ್ಸ್ ಫೌಂಡೇಶನ್ ಗೌರವಿಸುತ್ತದೆ. ವಿಕ್ಷಿತ್ ಭಾರತ್ ಎಡೆಗೆ ಸಾಗುವ ಆಶಯವನ್ನು ನಾವು ಬೆಂಬಲಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...