ಪ್ರಾಯಶ್ಚಿತ್ತಕ್ಕಾಗಿ ಮೋದಿ ಕನ್ಯಾಕುಮಾರಿಗೆ ಹೋಗಬೇಕೆಂದುಕೊಂಡಿದ್ದರೆ ಒಳ್ಳೆಯದು: ಕಪಿಲ್ ಸಿಬಲ್

Date:

ಪ್ರಾಯಶ್ಚಿತ್ತಕ್ಕಾಗಿ ಪ್ರಧಾನಿಯವರು ಕನ್ಯಾಕುಮಾರಿಗೆ ಹೋಗಬೇಕೆಂದುಕೊಂಡಿದ್ದರೆ ಒಳ್ಳೆಯದು ಎಂದು ರಾಜ್ಯಸಭಾ ಸದಸ್ಯರಾದ ಕಪಿಲ್ ಸಿಬಲ್‌ ನರೇಂದ್ರ ಮೋದಿಯವರನ್ನು ಕುಟುಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವೇಕದ ಬಗ್ಗೆ ಅರ್ಥ ಗೊತ್ತಿಲ್ಲದ ವ್ಯಕ್ತಿ ಧ್ಯಾನ ಮಾಡಿದರೆ ಏನು ಪ್ರಯೋಜನ. ಪ್ರಾಯಶ್ಚಿತ್ತಕ್ಕಾಗಿ ಹೋಗುತ್ತಿದ್ದರೆ ಒಳ್ಳೆಯ ವಿಷಯ ಅಥವಾ ಸ್ವಾಮಿ ವಿವೇಕಾನಂದರ ಬರವಣಿಗೆಗಳು ಹಾಗೂ ಮಾತುಗಳಿಗಗಿ ಸ್ಪೂರ್ತಿ ಪಡೆಯಲು ಹೋಗಬೇಕೆಂದುಕೊಂಡಿದ್ದರೆ ಅದು ಕೂಡ ಒಳ್ಳೆಯದು” ಎಂದು ಕಪಿಲ್ ಸಿಬಲ್‌ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿಯ ಬಗ್ಗೆ ಏನು ಮಾತನಾಡಲಿಲ್ಲ. ಏಕೆಂದರೆ 10 ವರ್ಷಗಳ ದುರಾಡಳಿತದಿಂದ ಏನು ಸಾಧಿಸಲಿಲ್ಲ ಎಂದು ಕಪಿಲ್ ಸಿಬಲ್‌ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದ ಅವರ ಸ್ಮರಣಾರ್ಥವಾಗಿ ನಿರ್ಮಿಸಲಾಗಿರುವ ಶಿಲಾ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30ರಂದು ಮೂರು ದಿನಗಳ ಕಾಲ ಧ್ಯಾನಕ್ಕಾಗಿ ತೆರಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲಿಗೆ ಕಳಿಸುವ ಮೋದಿ ಗ್ಯಾರಂಟಿಯು ‘ಜನತಂತ್ರದ ಜನನಿ’ಯ ಅಣಕ ಅಲ್ಲವೇ? 

ಈ ನಡುವೆ ಪ್ರಧಾನಿಯ ಕನ್ಯಾಕುಮಾರಿ ಭೇಟಿಯನ್ನು ತಮಿಳುನಾಡು ಕಾಂಗ್ರೆಸ್ ವಿರೋಧಿಸಿದೆ. ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾದ ಕೆ ಸೆಲ್ವಪೆರುನಾಥಗೈ ಅವರು, ಮಾದರಿ ನೀತಿ ಸಂಹಿತಿ ಜಾರಿಯಲ್ಲಿರುವ ಕಾರಣ ಪ್ರಧಾನ ಮಂತ್ರಿಯವರ ಈ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಬಾರದು. ಇಂತಹ ನಡೆಯು ಪ್ರಚಾರದ ನಂತರವು ಪರೋಕ್ಷವಾಗಿ ಪ್ರಚಾರ ಮಾಡುವ ಪ್ರಯತ್ನವಾಗುತ್ತದೆ ಎಂದು ತಿಳಿಸಿದ್ದಾರೆ.

“ಚುನಾವಣೆಗೂ ಮುನ್ನ 48 ಗಂಟೆಗಳು ಮೌನ ಅವಧಿಯಾಗಿರುವ ಸಂದರ್ಭದಲ್ಲಿ ಮೋದಿಯವರು ಮಾಧ್ಯಮಗಳ ಮೂಲಕ ರಹಸ್ಯ ರೀತಿಯಲ್ಲಿ ಪ್ರಚಾರ ಮಾಡುತ್ತಿರುವುದು ಇದರಲ್ಲಿ ಸ್ಪಷ್ಟವಾಗಿದೆ” ಎಂದು ತಮಿಳುನಾಡು ಕಾಂಗ್ರೆಸ್ ಮುಖ್ಯಸ್ಥರು ತಿಳಿಸಿದ್ದಾರೆ.

“ಇದಕ್ಕೆ ಸಂಬಂಧಿಸಿದಂತೆ ನಾಳೆ ಚುನಾವಣಾ ಆಯೋಗಕ್ಕೆ ಪತ್ರವನ್ನು ನೀಡುತ್ತೇವೆ. ಅಗತ್ಯವೆನಿಸಿದರೆ ಗೌರವಾನ್ವಿತ ನ್ಯಾಯಾಲಯಕ್ಕೂ ಮನವಿ ಮಾಡುತ್ತೇವೆ” ಎಂದು ಕೆ ಸೆಲ್ವಪೆರುನಾಥಗೈ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...