ಎರಡು ದಿನಗಳಲ್ಲಿ ಶುಭ ಸುದ್ದಿ ನೀಡುತ್ತೇನೆ ಎಂದ ಕಮಲ್ ಹಾಸನ್

Date:

ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಮಕ್ಕಳ್ ನೀದಿ ಮೈಯಂ ಪಕ್ಷದ(ಎಂಎನ್‌ಎಂ) ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್ ಮೈತ್ರಿ ರಚಿಸಿಕೊಳ್ಳುವದರ ಬಗ್ಗೆ ಇನ್ನೆರೆಡು ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಸಂಸತ್ತಿನ ಚುನಾವಣೆಗಳನ್ನು ಉಲ್ಲೇಖಿಸಿ ಒಳ್ಳೆಯ ಅವಕಾಶಗಳನ್ನು ನಿರೀಕ್ಷಿಸಲಾಗುತ್ತಿದೆ. ಚುನಾವಣಾ ಕಾರ್ಯಗಳು ಕೂಡ ಚೆನ್ನಾಗಿ ನಡೆಯುತ್ತಿವೆ ಎಂದು ಹೇಳಿದರು.

“ಇನ್ನು ಎರಡು ದಿನಗಳಲ್ಲಿ ಶುಭ ಸುದ್ದಿಯೊಂದಿಗೆ ನಿಮ್ಮನ್ನು ಭೇಟಿ ಮಾಡುತ್ತೇನೆ. ಸಂಸತ್‌ ಚುನಾವಣಾ ಕಾರ್ಯಗಳು ಚೆನ್ನಾಗಿ ನಡೆಯುತ್ತಿವೆ. ಒಳ್ಳೆಯ ಅವಕಾಶಕ್ಕಾಗಿ ನಿರೀಕ್ಷಿಸಲಾಗುತ್ತಿದೆ. ಮೈತ್ರಿಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ನಾವು ನಿರ್ಧಾರ ಪ್ರಕಟಿಸುತ್ತೇವೆ” ಎಂದು ಕಮಲ್‌ ಹಾಸನ್‌ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿಗಳ ಅಸ್ತಿಭಾರದ ಮೇಲೆ ಕಟ್ಟಿದ ಅಹಿಂದ ಬಜೆಟ್

ತಮ್ಮ ಮುಂಬರುವ ಚಿತ್ರ ‘ಥಗ್‌ ಲೈಫ್’ ಪೂರ್ವ ಸಿದ್ಧತಾ ಕೆಲಸಗಳನ್ನು ಮುಗಿಸಿಕೊಂಡು ಅಮೆರಿಕದಿಂದ ಇಂದು ಮುಂಜಾನೆ ಚೆನ್ನೈಗೆ ಆಗಮಿಸಿದರು.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಡಿಎಂಕೆ ನಾಯಕ ಹಾಗೂ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ತಮ್ಮ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಮಲ್‌ ಹಾಸನ್‌ ಅವರ ಎಂಎನ್‌ಎಂ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಸುಳಿವು ನೀಡಿದ್ದರು.

ಕಮಲ್‌ ಹಾಸನ್‌ ಅವರು 2018ರಲ್ಲಿ ಎಂಎನ್‌ಎಂ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ 2019ರ ಲೋಕಸಭೆ ಹಾಗೂ 2021ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಪರಾಭವಗೊಂಡಿತ್ತು. ಇರೋಡ್‌ನಲ್ಲಿ ನಂತರದಲ್ಲಿ ನಡೆದ ಉಪಚುನಾವಣೆಯಲ್ಲಿಯೂ ಕೂಡ ಎಂಎನ್‌ಎಂ ಡಿಎಂಕೆ ಅಭ್ಯರ್ಥಿಗೆ ಬೆಂಬಲ ನೀಡಿತ್ತು.

ಕಮಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2022ರ ಡಿಸೆಂಬರ್‌ನಲ್ಲಿ ಕೈಗೊಂಡ ಭಾರತ್ ಜೋಡೋ ಯಾತ್ರೆಯಲ್ಲಿಯೂ ಕೂಡ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...