‘ಕೇರಳ ಸ್ಟೋರಿ 2’ ಹೆಚ್ಚು ಜನ ನೋಡುತ್ತಿಲ್ಲ ಎಂಬುದೇ ಒಳ್ಳೆಯ ಸುದ್ದಿ: ರಾಹುಲ್ ಗಾಂಧಿ

Date:

ಕೇರಳ ಸ್ಟೋರಿ-2 ಸಿನಿಮಾವನ್ನು ಜನರು ಹೆಚ್ಚಾಗಿ ವೀಕ್ಷಿಸುತ್ತಿಲ್ಲ ಎಂಬುದು ಒಳ್ಳೆಯ ಸುದ್ದಿ. ಕೇರಳ ಸ್ಟೋರಿ ಖಾಲಿಯಾಗಿರುವಂತೆ ತೋರುತ್ತಿದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ಕೇರಳದ ಕುಟ್ಟಿಕ್ಕನಂನ ಮರಿಯನ್ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ರಾಹುಲ್, “ಕೇರಳ ಎಂದರೇನು, ಅದರ ಸಂಪ್ರದಾಯಗಳು ಮತ್ತು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳದ ಬಹುಪಾಲು ಜನರಿದ್ದಾರೆ ಎಂದು ಈ ಸಿನಿಮಾ ತೋರಿಸುತ್ತದೆ. ಸಿನಿಮಾಗಳನ್ನು ಆಯುಧಗಳಾಗಿ ಬಳಸಲಾಗುತ್ತಿದೆ. ಜನರನ್ನು ನಿಂದಿಸಲು, ಸಮಾಜದಲ್ಲಿ ವಿಭಜನೆಗಳನ್ನು ಸೃಷ್ಟಿಸಲು ಬಳಸಲಾಗುತ್ತಿದೆ ” ಎಂದರು.

ಇದನ್ನು ಓದಿದ್ದೀರಾ? ‘ದಿ ಕೇರಳ ಸ್ಟೋರಿ-2’ ಸಿನಿಮಾ ನಿರ್ಮಾಪಕರು, ಸಿಬಿಎಫ್‌ಸಿಗೆ ಹೈಕೋರ್ಟ್‌ ನೋಟಿಸ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಬೆಳವಣಿಗೆಗಳು ದೇಶಕ್ಕೆ ಅತ್ಯಂತ ಹಾನಿಕಾರಕ. ಈ ಕೆಟ್ಟ ಉದ್ದೇಶಕ್ಕಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡಲಾಗುತ್ತಿದೆ” ಎಂದು ಹೇಳಿದ ರಾಹುಲ್ ಈ ಸಂದರ್ಭದಲ್ಲೇ ತಾವು ಹೆಚ್ಚಾಗಿ ಓದುವುದಾಗಿ, ಸಿನಿಮಾ ನೋಡಲ್ಲ ಎಂದಿದ್ದಾರೆ.

“ಹವ್ಯಾಸವಾಗಿ, ನನಗೆ ಚೆಸ್ ಆಡುವುದು, ಇತರೆ ಕಲೆಗಳನ್ನು ಮಾಡುವುದು ಇಷ್ಟ. ಈಜುವುದು, ಓಡುವುದು ಮತ್ತು ಫಿಟ್ ಆಗಿರಲು ವ್ಯಾಯಾಮ ಮಾಡುತ್ತೇನೆ” ಎಂದೂ ತಿಳಿಸಿದ್ದಾರೆ.

“ಐದು ವರ್ಷಗಳ ಕಾಲ ಕೇರಳವನ್ನು ಸಂಸತ್ತಿನಲ್ಲಿ ಪ್ರತಿನಿಧಿಸಿದ್ದರೂ, ರಾಜ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಆದರೆ ವಯನಾಡಿನ ಜನರಿಂದ ಬಹಳಷ್ಟು ಕಲಿತಿದ್ದೇನೆ” ಎಂದೂ ಹೇಳಿದರು.

‘ದಿ ಕೇರಳ ಸ್ಟೋರಿ’ಯ ಎರಡನೇ ಭಾಗವಾದ ‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಚಿತ್ರದ ಟ್ರೇಲರ್ ಮತ್ತು ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ಗೆ ಗುರಿಯಾಗಿತ್ತು.

ಟ್ರೇಲರ್‌ನಲ್ಲಿ ಸೆರೆಯಲ್ಲಿದ್ದ ಮಹಿಳೆಯೊಬ್ಬಳು ತನಗೆ ನೀಡಿದ ಆಹಾರದ ತಟ್ಟೆಯನ್ನು ಕಾಲಿನಿಂದ ಒದೆಯುತ್ತಾ, “ಸತ್ತರೂ ಸಾಯುತ್ತೇನೆ ಆದರೆ ಬೀಫ್ ತಿನ್ನುವುದಿಲ್ಲ” ಎಂದು ಹೇಳುವ ದೃಶ್ಯವಿದೆ. ಆದರೆ ಕೇರಳದಲ್ಲಿ ಬೀಫ್ ತಿನ್ನುವುದು ಸಾಮಾನ್ಯವಾಗಿರುವ ಕಾರಣ ಕೇರಳದ ಜನರು ಸಾಮಾಜಿಕ ಜಾಲತಾಣಗಳಲ್ಲಿ ತಾವು ಬೀಫ್ ತಿನ್ನುತ್ತಿರುವ ವಿಡಿಯೋ ಹಾಗೂ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ‘ಬೀಫ್-ಪರೋಟ’ ಚಾಲೆಂಜ್‌ನೊಂದಿಗೆ ಸಿನಿಮಾವನ್ನು ಲೇವಡಿ ಮಾಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...