ಸನಾತನ ವಿರೋಧಿ ಘೋಷಣೆ ಕೂಗಲಾಗದು: ಕಾಂಗ್ರೆಸ್‌ ವಕ್ತಾರ ಗೌರವ್ ವಲ್ಲಭ್ ರಾಜೀನಾಮೆ

Date:

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಗುರುವಾರ ರಾಜೀನಾಮೆ ಸಲ್ಲಿಸಿದ್ದು, “ಸನಾತನ ವಿರೋಧಿ ಘೋಷಣೆ ಕೂಗಲಾಗದು” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ್ ವಲ್ಲಭ್, ಪಕ್ಷವು ದಿಕ್ಕಿಲ್ಲದೆ ಸಾಗುತ್ತಿದೆ ಎಂದು ಹೇಳಿದ್ದಾರೆ. ‘ಸನಾತನ ವಿರೋಧಿ’ ಘೋಷಣೆ, ಜಾತಿ ಗಣತಿಯಂತಹ ವಿಚಾರಗಳು ತಮ್ಮ ನಿರ್ಗಮನಕ್ಕೆ ಕಾರಣ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ?   ಜಾರ್ಖಂಡ್ ಬಿಜೆಪಿ ಶಾಸಕ ಜೈ ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಕಾಂಗ್ರೆಸ್ ಪಕ್ಷ ಮುನ್ನಡೆಯುತ್ತಿರುವ ದಿಕ್ಕು ತೋಚದ ರೀತಿಯಲ್ಲಿ ನನಗೆ ನೆಮ್ಮದಿ ಇಲ್ಲದಂತಾಗಿದೆ. ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದಾಗಲಿ, ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ನಿಂದಿಸುವುದಾಗಲಿ ನಾನು ಹಗಲಿರುಳು ಮಾಡಲಾರೆ. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳು ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಗೌರವ್ ವಲ್ಲಭ್ ಟ್ವೀಟ್ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಪ್ರಚಾರವನ್ನು ಗೌರವ್ ವಲ್ಲಭ್ ನಿರ್ವಹಿಸಿದ್ದರು. ಆರ್ಥಿಕ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿ ಧ್ವನಿ ಎತ್ತಿದ್ದರು. ಅವರು 2023 ರಲ್ಲಿ ಉದಯಪುರ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಪರಾವಭಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಯು 32,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಗೌರವ್ ವಲ್ಲಭ್ ಅವರು 2019 ರಲ್ಲಿ ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಪೂರ್ವದಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದಾರೆ. ಈ ಚುನಾವಣೆಯಲ್ಲಿ ಗೌರವ್ 18,000 ಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು ಆಗಿನ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ಸರಯು ರಾಯ್ ನಂತರ ಮೂರನೇ ಸ್ಥಾನದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...