‘ಭಾರತದ ಮೇಲೂ ಸಂಭವಿಸಬಹುದು – ಅಮೆರಿಕಗೆ ಕೇಂದ್ರ ಹೆದರುತ್ತಿದೆ’: ವೆನೆಜುವೆಲಾ ಮೇಲಿನ ದಾಳಿಗೆ ಸರ್ಕಾರದ ಮೌನ; ಆಕ್ರೋಶ

Date:

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೋ ಅವರನ್ನು ಅಮೆರಿಕ ಸೆರೆ ಹಿಡಿದಿದ್ದು, ವೆನೆಜುವೆಲಾ ಮೇಲೆ ನಿರಂತರ ದಾಳಿ ನಡೆಸುತ್ತಿದೆ. ವೆನೆಜುವೆಲಾ ಮೇಲಿನ ದಾಳಿ ಮತ್ತು ಅಮೆರಿಕದ ಕ್ರೌರ್ಯದ ಕುರಿತು ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಯಾವುದೇ ನಿಲುವು ತೆಗೆದುಕೊಳ್ಳದೇ ಇರುವುದಕ್ಕೆ ಮೋದಿ ವಿರುದ್ಧ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಅಮೆರಿಕಗೆ ಹೆದರುತ್ತಿದೆ. ವೆನೆಜುವೆಲಾದಂತೆ ಭಾರತದ ಮೇಲೂ ಅಂತಹ ಘಟನೆ ಸಂಭವಿಸಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ವೆನೆಜುವೆಲಾದಲ್ಲಿ ಏನು ನಡೆಯುತ್ತಿದೆಯೋ, ಅದು ವಿಶ್ವಸಂಸ್ಥೆಯ ನಿಯಮಗಳಿಗೆ ವಿರುದ್ಧವಾಗಿದೆ. ಚುನಾಯಿತ ಅಧ್ಯಕ್ಷರನ್ನು ಅಪಹರಿಸಲಾಗಿದೆ. ನಾಳೆ ಬೇರೆ ಯಾವುದೇ ದೇಶದ ಮೇಲೂ ಇದೇ ರೀತಿ ಆಗಬಹುದು ಎಂಬುದು ಗಂಭೀರ ಕಳವಳಕಾರಿ. ನಾಳೆ, ಭಾರತಕ್ಕೂ ಇದು ಆಗಬಹುದು” ಎಂದು ಚವಾಣ್ ಹೇಳಿದ್ದಾರೆ.

“ವೆನೆಜುವೆಲಾ ವಿಷಯದ ಬಗ್ಗೆ ಭಾರತ ಮಾತನಾಡಿಲ್ಲ, ನಿಲುವು ತೆಗೆದುಕೊಂಡಿಲ್ಲ. ರಷ್ಯಾ ಮತ್ತು ಚೀನಾ ನಿಲುವು ತೆಗೆದುಕೊಂಡಿವೆ. ಅಮೆರಿಕದ ಕೃತ್ಯವನ್ನು ಟೀಕಿಸಿವೆ. ನಾವು ಉಕ್ರೇನ್ ಯುದ್ಧದಲ್ಲೂ ನಿಲುವು ತೆಗೆದುಕೊಳ್ಳಲಿಲ್ಲ, ಇಸ್ರೇಲ್-ಹಮಾಸ್ ವಿಷಯದಲ್ಲೂ ನಾವು ನಿಲುವು ತೆಗೆದುಕೊಳ್ಳಲಿಲ್ಲ, ಈಗ ನಾವು ಅಮೆರಿಕನ್ನರಿಗೆ ತುಂಬಾ ಹೆದರುತ್ತಿದ್ದೇವೆ, ಏನಾಯಿತು ಎಂಬುದನ್ನು ನಾವು ಟೀಕಿಸಲು ಸಹ ಪ್ರಯತ್ನಿಸುತ್ತಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಕ್ಯಾರಕಾಸ್‌ನಲ್ಲಿ ಸೆರೆಹಿಡಿದು, ನ್ಯೂಯಾರ್ಕ್‌ನಲ್ಲಿ ಇರಿಸಲಾಗಿದೆ. ಅಮೆರಿಕ ಗುಪ್ತಚರ ಸಂಸ್ಥೆಗಳು ಮತ್ತು ಯುಎಸ್ ಕಾನೂನು ಜಾರಿ ಸಂಸ್ಥೆಗಳು ಅವರನ್ನು ಸೆರೆಹಿಡಿದಿವೆ.

ಈ ನಡುವೆ, ವೆನೆಜುವೆಲಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವೆನೆಜುವೆಲಾದ ಜನರ ಸುರಕ್ಷತೆ ಮತ್ತು ಯೋಗಕ್ಷೇಮದ ವಿಚಾರದಲ್ಲಿ ಆ ದೇಶಕ್ಕೆ ಭಾರತದ ಬೆಂಬಲ ನೀಡುವುದಾಗಿ ಹೇಳಿದೆ. ಆದರೆ, ಅಮೆರಿಕದ ಕೃತ್ಯವನ್ನು ಖಂಡಿಸಿಲ್ಲ. “ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳು ತೀವ್ರ ಕಳವಳಕಾರಿಯಾಗಿವೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಲ್ಲಿ, ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಮಾತುಕತೆಯ ಮೂಲಕ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ನಾವು ಸಂಬಂಧಪಟ್ಟ ಎಲ್ಲರಿಗೂ ಕರೆ ನೀಡುತ್ತೇವೆ” ಎಂದಷ್ಟೇ ವಿದೇಶಾಂಗ ಸಚಿವಾಲಯ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...