ಕಾಶ್ಮೀರ ದಾಳಿಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಮರೆತ ಬಿಜೆಪಿ ನಾಯಕರು; ಇಂದು ಜಮ್ಮು ಕಾಶ್ಮೀರ ಬಂದ್

Date:

ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಪ್ರವಾಸಿಗರ ಮೇಲೆ ಮಂಗಳವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 28 ಮಂದಿ ಮೃತಪಟ್ಟಿದ್ದು, ಮೇಲ್ನೋಟಕ್ಕೆ ದಾಳಿಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಸೇರಿದಂತೆ ಹಲವು ಕಡೆ ಚರ್ಚೆಯಾಗುತ್ತಿದೆ.

ಉಗ್ರರ ದಾಳಿಗೆ ಕಣಿವೆ ರಾಜ್ಯದಲ್ಲಿ ಸೇನೆಯ ಕಡಿತ, ಗುಪ್ತಚರ ವೈಫಲ್ಯ ಹಾಗೂ ಭದ್ರತಾ ವೈಫಲ್ಯ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಕೇಂದ್ರ ಸರ್ಕಾರವು ಇತ್ತೀಚಿನ ಕೆಲವು ತಿಂಗಳುಗಳಿಂದ ಕಾಶ್ಮೀರದಲ್ಲಿ ಸೇನೆಯನ್ನು ಕಡಿತಗೊಳಿಸಿದೆ. ಆದರೆ ಇವೆಲ್ಲ ವೈಫಲ್ಯಗಳು ಸಮಸ್ಯೆಗಳನ್ನು ಬಿಜೆಪಿ ನಾಯಕರು ಚರ್ಚಿಸುತ್ತಿಲ್ಲ.

ಮಾಧ್ಯಮವೊಂದರಲ್ಲಿ ಮಾತನಾಡಿದ ನಿವೃತ್ತ ಮೇಜರ್ ಜನರಲ್ ಜಿ ಡಿ ಭಕ್ಷಿ, ಪಾಕಿಸ್ತಾನದಿಂದ ಅತ್ಯಂತ ಗಂಭೀರ ಮತ್ತು ಸ್ವೀಕಾರಾರ್ಹವಲ್ಲದ ಪ್ರಚೋದನೆ, ಮತ್ತೊಂದು ಸರ್ಜಿಕಲ್‌ ಸ್ಟ್ರೈಕ್‌ ಮಾಡುವ ಸಮಯ ಬಂದಿದೆ. ಪ್ರತೀಕಾರದ ಸಿದ್ಧಾಂತವನ್ನು ಅಳವಡಿಸಿಕೊಳ್ಳಬೇಕಿದೆ. ಇದು ಜೋರಾಗಿ ಮಾತನಾಡುವ ಸಮಯವಲ್ಲ. ಇದು ಕ್ರಮ ಕೈಗೊಳ್ಳುವ ಸಮಯ, ಆ ಮೂರ್ಖ ಕದನ ವಿರಾಮ ಇನ್ನೂ ಏಕೆ ಜಾರಿಯಲ್ಲಿದೆ?. ಕಣಿವೆಯಲ್ಲಿ ಸೇನೆಯನ್ನು ಹೆಚ್ಚಿಸಲಾಗಿಲ್ಲ. ಹೆಚ್ಚು ಆರ್ಥಿಕ ನೆರವನ್ನು ನೀಡಲಾಗಿಲ್ಲ. ಒಂದು ಲಕ್ಷಕ್ಕೂ ಅಧಿಕ ಸೇನೆಯನ್ನು ಕಡಿತಗೊಳಿಸಲಾಗಿದೆ. ನೆರವು ನೀಡುತ್ತಿರುವ ಹಣ ಎಲ್ಲಿ ಹೋಯಿತು. ಇಂತಹ ಹಲವಾರು ಕಾರಣಗಳಿಂದ ದಾಳಿ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ನಾಯಕರು ಈ ಕಾರಣಗಳನ್ನು ಮಾತ್ರ ಮುಖ್ಯವಾಹಿನಿಯಲ್ಲಿ ಚರ್ಚಿಸುತ್ತಿಲ್ಲ. ತಮ್ಮದೆ ಪ್ರಚೋದನಾಕಾರಿಯಾದ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೆಟ್ಟಿಗರು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಇಂದು ಜಮ್ಮು- ಕಾಶ್ಮೀರ ಬಂದ್ ಗೆ ಮೆಹಬೂಬಾ, ಮಿರ್ವೈಝ್ ಕರೆ

ಪಹಲ್ಗಾಂವ್ ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಬುಧವಾರ ಜಮ್ಮು ಕಾಶ್ಮೀರದಲ್ಲಿ ಬಂದ್ ಆಚರಿಸುವಂತೆ ಪಿಡಿಪಿ ಮುಖ್ಯಸ್ಥೆ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಹುರಿಯತ್ ಮುಖಂಡ ಮಿರ್ವೈಝ್ ಉಮರ್ ಫಾರೂಕ್ ಅವರು ಪ್ರತ್ಯೇಕ ಕರೆ ನೀಡಿದ್ದಾರೆ.

ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಬಂದ್ ಆಚರಿಸುವಂತೆ ಮೆಹಬೂಬಾ ಮುಫ್ತಿ ಹಾಗೂ ಮಿರ್ವೈಝ್ ಕರೆ ನೀಡಿರುವುದು ಇದೇ ಮೊದಲು.”ಇದು ಕೇವಲ ಆಯ್ದ ಕೆಲವರ ವಿರುದ್ಧ ನಡೆದ ದಾಳಿಯಲ್ಲ. ಇದು ನಮ್ಮ ಮೇಲೆ ನಡೆದ ದಾಳಿಯೂ ಹೌದು. ಈ ಶೋಕ ಮತ್ತು ಸಂಕಷ್ಟದ ಸಂದರ್ಭದಲ್ಲಿ ನಾವು ಜತೆಗಿರುತ್ತೇವೆ ಎಂದು ಮೆಹಬೂಬಾ ಹೇಳಿದ್ದಾರೆ.

ಜಮ್ಮು ಚೇಂಬರ್ ಅಂಡ್ ಬಾರ್ ಅಸೋಸಿಯೇಶನ್ ನೀಡಿರುವ ಬಂದ್ ಕರೆಯ ಬೆನ್ನಲ್ಲೇ ಮೆಹಬೂಬಾ ಕೂಡ ಬಂದ್ ಗೆ ಕರೆ ನೀಡಿದ್ದಾರೆ.

“ಪಹಲ್ಗಾಂವ್ ನಲ್ಲಿ ಅಮಾಯಕರ ಮೇಲೆ ನಡೆದ ಘೋರ ಘಟನೆಯಲ್ಲಿ ಜೀವ ಕಳೆದುಕೊಂಡ ಅಮಾಯಕರ ಗೌರವಾರ್ಥವಾಗಿ ಬಂದ್ ಆಚರಿಸುವಂತೆ ನೀಡಿರುವ ಬಂದ್ ಕರೆಗೆ ಇಡೀ ಕಾಶ್ಮೀರ ಜನತೆ ಒಗ್ಗಟ್ಟಾಗಿ ಸ್ಪಂದಿಸಬೇಕು” ಎಂದು ಅವರು ಹೇಳಿದ್ದಾರೆ.
ಈ ಪೈಶಾಚಿಕ ಕೃತ್ಯದ ವಿರುದ್ಧ ನಾವು ಒಗ್ಗಟ್ಟಾಗಿ ಇದ್ದೇವೆ ಮತ್ತು ನಮ್ಮ ಮೌನವನ್ನು ನಾವು ಭಯೋತ್ಪಾದನೆ ಒಪ್ಪಿಕೊಂಡಿದ್ದೇವೆ ಎಂದು ತಪ್ಪಾಗಿ ಭಾವಿಸಬಾರದು ಎಂಬ ಸ್ಪಷ್ಟ ಸಂದೇಶವನ್ನು ನಾವು ರವಾನಿಸಬೇಕಿದೆ ಎಂದು ಪಕ್ಷದ ಮುಖ್ಯಸ್ಥ ಯಾಸಿರ್ ರಿಷಿ ಹೇಳಿಕೆ ನೀಡಿದ್ದಾರೆ.

ಈ ನಡುವೆ ಭಯೋತ್ಪಾದಕರು ಜಮ್ಮುವಿನ ಕಿಶ್ತವಾಢ ದಿಂದ, ಕೋಕರ್ನಾಗ್ ಮೂಲಕ ಬೈಸರನ್‌ಗೆ ಬಂದಿರ ಬಹುದು ಎಂದು ಅಧಿಕಾರಿಗಳು ಊಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...