‘ಬಿಜೆಪಿಗೆ ಮತ ಹಾಕದಿದ್ದರೆ ರಾಜ್ಯಕ್ಕೆ ಮೋದಿ ಆಶೀರ್ವಾದ ಸಿಗುವುದಿಲ್ಲ’ ಎಂಬ ಅರ್ಥ ಇದೇನಾ? ಅಕ್ಕಿ ಕಡಿತಕ್ಕೆ ಕಾಂಗ್ರೆಸ್ ಆಕ್ರೋಶ

Date:

ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್ಎಸ್) ಅಡಿಯಲ್ಲಿ ರಾಜ್ಯ ಸರ್ಕಾರಗಳಿಗೆ ಅಕ್ಕಿ ಮತ್ತು ಗೋಧಿ ಮಾರಾಟ ನಿಲ್ಲಿಸಿರುವ ಬಗ್ಗೆ ಕಾಂಗ್ರೆಸ್ ಗುರುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಟ್ವೀಟ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, “ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕಕ್ಕೆ ಮೋದಿಯವರ ಆಶೀರ್ವಾದ ಸಿಗುವುದಿಲ್ಲ’’ ಎಂದು ಬಿಜೆಪಿ ಅಧ್ಯಕ್ಷ ನಡ್ಡಾ ಅವರು ಹೇಳಿದ್ದಕ್ಕೆ ಅರ್ಥ ಇದೇನಾ ಎಂದು ಪ್ರಶ್ನಿಸಿದ್ದಾರೆ.

“ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ತಮ್ಮ “ಹತಾಶೆಯನ್ನು” ಹೊರಹಾಕುತ್ತಿದ್ದಾರೆ. ಈ ಮೂಲಕ ಸರಕಾರ ಸಮಾಜದ ಕಟ್ಟ ಕಡೆಯ ವರ್ಗಗಳಿಗೆ ನೋವುಂಟು ಮಾಡುತ್ತಿದೆ ಎಂದು ಜೈರಾಂ ರಮೇಶ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಕ್ತ ಮಾರುಕಟ್ಟೆ ಯೋಜನೆ ಮೂಲಕ ರಾಜ್ಯಗಳಿಗೆ ಗೋಧಿ ಮತ್ತು ಅಕ್ಕಿ ಮಾರಾಟವನ್ನು ನಿಲ್ಲಿಸುವಂತೆ ಭಾರತೀಯ ಆಹಾರ ನಿಗಮಕ್ಕೆ ಒತ್ತಾಯಿಸುವ ಮೂಲಕ, ಮೋದಿ ಸರ್ಕಾರವು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗಗಳನ್ನು ನೋವುಂಟು ಮಾಡುತ್ತಿದೆ. ಕರ್ನಾಟಕದಿಂದ ಚುನಾವಣೆಯಿಂದ ಆಗಿರುವ ನಷ್ಟದಿಂದ ಬಿಜೆಪಿ ಸರ್ಕಾರವು ತಮ್ಮ ಹತಾಶೆ ಹೊರಹಾಕಲು ಪ್ರಧಾನಿ ಈ ರೀತಿ ಎಷ್ಟು ಸಣ್ಣತನ ತೋರಬಾರದು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವಂತೆ ಅನ್ನಭಾಗ್ಯ ಖಾತ್ರಿಯನ್ನು ಜಾರಿಗೊಳಿಸಲು ಮತ್ತು ಬಡ ಕುಟುಂಬಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು” ಎಂದು ಜೈರಾಂ ರಮೇಶ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಪಠ್ಯಪುಸ್ತಕದಿಂದ ತಮ್ಮ ಹೆಸರನ್ನು ಕೈಬಿಡುವಂತೆ ಎನ್‌ಸಿಇಆರ್‌ಟಿಗೆ ದೇಶದ ಪ್ರತಿಷ್ಠಿತ 33 ವಿವಿ ಪ್ರಾಧ್ಯಾಪಕರ ಪತ್ರ

ಭಾರತೀಯ ಆಹಾರ ನಿಗಮ ಇತ್ತೀಚೆಗೆ ಹೊರಡಿಸಿದ ಆದೇಶದ ಪ್ರಕಾರ, “ರಾಜ್ಯ ಸರ್ಕಾರಗಳಿಗೆ ಮುಕ್ತ ಮಾರುಕಟ್ಟೆ ಯೋಜನೆಯಡಿ ಗೋಧಿ ಮತ್ತು ಅಕ್ಕಿ ಮಾರಾಟವನ್ನು ನಿಲ್ಲಿಸಲಾಗಿದೆ. ಆದಾಗ್ಯೂ, ಈ ಯೋಜನೆ ಮೂಲಕ ಅಕ್ಕಿ ಮಾರಾಟವನ್ನು ಈಶಾನ್ಯ ರಾಜ್ಯಗಳು, ಗುಡ್ಡಗಾಡು ರಾಜ್ಯಗಳು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗಳು ಮತ್ತು ನೈಸರ್ಗಿಕ ವಿಕೋಪಗಳನ್ನು ಎದುರಿಸುತ್ತಿರುವ ರಾಜ್ಯಗಳಿಗೆ ಕ್ವಿಂಟಾಲ್‌ಗೆ 3,400 ರೂ.ಗಳ ದರದಲ್ಲಿ ಮುಂದುವರಿಸಲಾಗುವುದು ಎಂದು ನಿಗಮ ತಿಳಿಸಿದೆ.

“ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ತನ್ನ ‘ಅನ್ನಭಾಗ್ಯ ’ಯೋಜನೆಯನ್ನು ಜಾರಿಗೆ ತರಲು ರಾಜ್ಯಕ್ಕೆ ಅಗತ್ಯವಿರುವಷ್ಟು ಅಕ್ಕಿಯನ್ನು ಪಡೆಯದಂತೆ ನೋಡಿಕೊಳ್ಳುವ ಮೂಲಕ ಕಾಂಗ್ರೆಸ್ ಆಡಳಿತದ ಚುನಾವಣಾ ಭರವಸೆಯನ್ನು“ವಿಫಲಗೊಳಿಸಲು” ಸಂಚು ನಡೆಸುತ್ತಿದೆ. ಈ ಮೂಲಕ ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಬಡವರಿಗೆ ಅನುಕೂಲ ಮಾಡಿಕೊಡುವ ಯೋಜನೆಯನ್ನು ಹಾಳು ಮಾಡಲು ಯತ್ನಿಸುತ್ತಿರುವುದು ಬಡವರ ವಿರೋಧಿ ನೀತಿಯನ್ನು ತೋರಿಸುತ್ತಿದೆ. ಆದರೂ ತಮ್ಮ ಸರ್ಕಾರವು ಇತರ ಮೂಲಗಳಿಂದ ಅಕ್ಕಿಯನ್ನು ಪಡೆಯಲು ಮತ್ತು ಉತ್ಪಾದಿಸುವ ರಾಜ್ಯಗಳಿಂದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಭರವಸೆ ನೀಡಿದಂತೆ ಅಗತ್ಯವಿರುವವರಿಗೆ ಸೂಕ್ತ ಸಮಯಕ್ಕೆ ಸರಬರಾಜು ಮಾಡುವ ಗುರಿಯನ್ನು ಹೊಂದಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಂಗ್ರೆಸಿನ ಐದು ಚುನಾವಣಾ ಭರವಸೆಗಳನ್ನು ಅನುಷ್ಠಾನಗೊಳಿಸುವ ಭಾಗವಾಗಿ, ಸಿದ್ದರಾಮಯ್ಯ ಸರ್ಕಾರವು ಈ ತಿಂಗಳ ಆರಂಭದಲ್ಲಿ ‘ಅನ್ನ ಭಾಗ್ಯ’ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿತು. ಪ್ರತಿ ತಿಂಗಳು ಬಿಪಿಎಲ್‌ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಒಟ್ಟು 10 ಕೆಜಿ ಆಹಾರ ಧಾನ್ಯ ಗಳು/ಅಕ್ಕಿಯನ್ನು ಜುಲೈ 1ರಿಂದ ನೀಡಲಾಗುತ್ತದೆ. ಪ್ರಸ್ತುತ ಬಿಪಿಎಲ್‌ ಕುಟುಂಬದ ಸದಸ್ಯರಿಗೆ ಈಗಾಗಲೇ ಐದು ಕೆಜಿ ಅಕ್ಕಿ ನೀಡಲಾಗುತ್ತಿದ್ದು, ಇದೀಗ ಹೊಸ ಸರ್ಕಾರದಿಂದ ಅದನ್ನು ಮತ್ತೆ ಐದು ಕೆಜಿ ಹೆಚ್ಚಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...