ಒಡಿಶಾ | ರಾತ್ರಿಯಿಡೀ ಕಾಲುನಡಿಗೆಯಲ್ಲೇ 28 ಕಿ.ಮೀ ಸಾಗಿ ವಧುವಿನ ಗ್ರಾಮ ತಲುಪಿದ ವರ

Date:

  • ರಾಯಗಢದ ವಧುವಿನ ಗ್ರಾಮದಲ್ಲಿ ನಿಗದಿಯಾಗಿದ್ದ ವಿವಾಹ
  • ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವ ಚಾಲಕರ ಸಂಘ

ಚಾಲಕರ ಮುಷ್ಕರದ ಹಿನ್ನೆಲೆ ಮರುದಿನ ವಿವಾಹವಾಗಬೇಕಿದ್ದ ವರ ಹಾಗೂ ಆತನ ಕುಟುಂಬ ರಾತ್ರಿಯಿಡೀ 28 ಕಿ.ಮೀ ಕಾಲು ನಡಿಗೆಯಲ್ಲೇ ವಧುವಿನ ಗ್ರಾಮ ಸೇರಿದ ಅಪರೂಪದ ಘಟನೆ ಒಡಿಶಾದಲ್ಲಿ ಶುಕ್ರವಾರ (ಮಾರ್ಚ್ 17) ವರದಿಯಾಗಿದೆ.

ರಾಯಗಢ ಜಿಲ್ಲೆಯಲ್ಲಿ ವಧುವಿನ ಗ್ರಾಮದಲ್ಲಿ ವಿವಾಹ ನಿಗದಿಯಾಗಿತ್ತು. ಗುರುವಾರ (ಮಾರ್ಚ್ 16) ಚಾಲಕರು ಮುಷ್ಕರ ಹೂಡಿದ್ದ ಕಾರಣ ವಧುವಿನ ಗ್ರಾಮಕ್ಕೆ ತೆರಳಲು ವರನ ಕುಟುಂಬದವರಿಗೆ ಯಾವ ವಾಹನ ಸೌಲಭ್ಯವೂ ದೊರೆಯಲಿಲ್ಲ. ವಿವಾಹ ಮಹೋತ್ಸವಕ್ಕೆ ತೆರಳಬೇಕಾದ ಅನಿವಾರ್ಯತೆ ಕಾರಣ ವರನ ಕುಟುಂಬ ಕಾಲುನಡಿಗೆ ಮೂಲಕ ತೆರಳಲು ನಿರ್ಧರಿಸಿತು.

ಕಲ್ಯಾಣ್‌ಸಿಂಗ್‌ಪುರದ ಬ್ಲಾಕ್‌ನ ಸುನಖಂಡಿ ಪಂಚಾಯತ್‌ನಿಂದ ದಿಬಲಪಾಡು ಗ್ರಾಮವನ್ನು ತಲುಪಲು ಕೆಲವು ಮಹಿಳೆಯರೂ ಸೇರಿದಂತೆ ವರ ಹಾಗೂ ಆತನ ಕುಟುಂಬ ಗುರುವಾರ ರಾತ್ರಿ ಇಡೀ ಕಾಲುನಡಿಗೆಯಲ್ಲಿ ಸಾಗಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಾಲಕರ ಮುಷ್ಕರದಿಂದಾಗಿ ಸಂಚಾರ ಸೌಲಭ್ಯ ಇರಲಿಲ್ಲ. ನಾವು ಇಡೀ ರಾತ್ರಿ ಕಾಲು ನಡಿಗೆಯ ಮೂಲಕ ಸಾಗಿ ವಧುವಿನ ಗ್ರಾಮ ತಲುಪಿದೆವು. ನಮ್ಮ ಬಳಿ ಬೇರೆ ಆಯ್ಕೆ ಇರಲಿಲ್ಲ” ಎಂದು ವರನ ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ. ಇಬ್ಬರ ವಿವಾಹ ಶುಕ್ರವಾರ ಬೆಳಿಗ್ಗೆ ಜರುಗಿದೆ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನದ ಯುವಕನಿಗೆ ಯಶಸ್ವಿ ತೋಳು ಕಸಿ ಶಸ್ತ್ರಚಿಕಿತ್ಸೆ; ಏಷ್ಯಾದಲ್ಲೇ ಮೊದಲೆಂಬ ಹೆಗ್ಗಳಿಕೆ

ವಿವಾಹದ ನಂತರ ತಮ್ಮ ಗ್ರಾಮಕ್ಕೆ ಹಿಂತಿರುಗಲು ಚಾಲಕರ ಸಂಘ ಮುಷ್ಕರ ಹಿಂಪಡೆಯುವುದನ್ನು ಕಾಯುತ್ತ ವಧುವಿನ ನಿವಾಸದಲ್ಲಿ ಉಳಿದಿದೆ.

ವಿಮೆ ಸೌಲಭ್ಯ, ನಿವೃತ್ತಿ ವೇತನ, ಕಲ್ಯಾಣ ಮಂಡಳಿ ರಚನೆ ಮೊದಲಾದ ಬೇಡಿಕೆಗಳಿಗೆ ಆಗ್ರಹಿಸಿ ಚಾಲಕ ಏಕತಾ ಮಹಾಸಂಘವು ಬುಧವಾರದಿಂದ (ಮಾರ್ಚ್ 15) ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಚಾಲಕರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...