ಜಿಎಸ್‌ಟಿ 2.0 | ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂ. ನಷ್ಟ ಸಾಧ್ಯತೆ: ಕೃಷ್ಣ ಬೈರೇಗೌಡ

Date:

ಸೋಮವಾರ ಜಾರಿಗೆ ಬಂದ ಜಿಎಸ್‌ಟಿ ಪರಿಷ್ಕೃತ ದರವನ್ನು ನಾವು ಬೆಂಬಲಿಸುತ್ತೇವೆ. ಆದರೆ, ಕೇಂದ್ರ ಸರ್ಕಾರವು ದರ ಕಡಿತದ ಎಲ್ಲ ಹೊರೆಯನ್ನೂ ರಾಜ್ಯಗಳ ಮೇಲೆ ಹಾಕಿದೆ. ಇದರಿಂದಾಗಿ, ರಾಜ್ಯಗಳಿಗೆ ಕನಿಷ್ಠ 1 ರಿಂದ 1.5 ಲಕ್ಷ ಕೋಟಿ ರೂ. ಆದಾಯ ನಷ್ಟ ಉಂಟಾಗುವ ಸಾಧ್ಯತೆಯಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

“ದರ ತರ್ಕಬದ್ಧಗೊಳಿಸುವಿಕೆ ಮತ್ತು ದರ ಕಡಿತದ ಪ್ರಸ್ತಾಪವನ್ನು ನಾವು ಬೆಂಬಲಿಸಿದ್ದೇವೆ. ಈ ವಿಷಯದಲ್ಲಿ ಯಾವುದೇ ಭಿನ್ನಾಭಿಪ್ರಾಯವಿರಲಿಲ್ಲ. ಆದರೆ, ಈ ದರ ಕಡಿತದ ಎಲ್ಲ ಹೊರೆಯನ್ನು ಕೇಂದ್ರವು ರಾಜ್ಯಗಳ ಮೇಲೆ ಹಾಕಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಕೇಂದ್ರದ ಈ ಧೋರಣೆಯಿಂದ ರಾಜ್ಯಗಳು 1 ರಿಂದ 1.5 ಲಕ್ಷ ಕೋಟಿ ರೂ. ಆದಾಯ ಕಳೆದುಕೊಳ್ಳುವ ಸಾಧ್ಯತೆಯಿದೆ. ಪರಿಣಾಮ, ರಾಜ್ಯಗಳ ಹಣಕಾಸಿನ ಸ್ಥಿರತೆಯ ಮೂಲವೇ ನಾಶವಾಗಲಿದೆ” ಎಂದು ಕೃಷ್ಣ ಬೈರೇಗೌಡ ಹೇಳಿರುವುದಾಗಿ ‘ಎನ್‌ಡಿ ಟಿವಿ’ ವರದಿ ಮಾಡಿದೆ.

“ಆದಾಯ ನಷ್ಟವು ರಾಜ್ಯಗಳು ಕೇಂದ್ರವನ್ನು ಅವಲಂಬಿಸುವಂತೆ ಮಾಡುತ್ತದೆ. ಕೇಂದ್ರವು ಒಕ್ಕೂಟ ವ್ಯವಸ್ಥೆಯ ಮೂಲವನ್ನೇ ಹೊಡೆಯುತ್ತಿದೆ. ಕೇಂದ್ರ ಸರ್ಕಾರದ ನೀತಿಯು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯಗಳು ಆದಾಯ ಕಳೆದುಕೊಳ್ಳುತ್ತಿರುವಾಗ, ಕೇಂದ್ರವು 50,000 ರಿಂದ 60,000 ಕೋಟಿ ರೂ. ಹೆಚ್ಚುವರಿ ಆದಾಯವನ್ನು ಗಳಿಸುವ ಸಾಧ್ಯತೆಗಳಿವೆ. ಹೊಸ ದರದಿಂದ ಕೇಂದ್ರವು ಪ್ರಯೋಜನ ಪಡೆದರೆ, ರಾಜ್ಯಗಳು ಆದಾಯ ಕಳೆದುಕೊಳ್ಳುತ್ತವೆ. ನಮ್ಮ ಏಕೈಕ ಕಾಳಜಿ – ರಾಜ್ಯಗಳು ಆದಾಯ ನಷ್ಟ ಅನುಭವಿಸದಂತೆ ನೋಡಿಕೊಳ್ಳಬೇಕು ಎಂಬುದಾಗಿತ್ತು. ಆದರೆ, ನಮ್ಮ ಬೇಡಿಕೆಯನ್ನು ಕೇಂದ್ರ ಕಡೆಗಣಿಸಿದೆ” ಎಂದು ಸಚಿವರು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಮತಗಳ್ಳತನ | ರಾಹುಲ್‌ ಗಾಂಧಿ ಗಂಭೀರ ಆರೋಪ, ಚು. ಆಯುಕ್ತರ ಲಜ್ಜೆಗೇಡಿ ಪ್ರತಿಕ್ರಿಯೆ ಮತ್ತು ತನಿಖೆಯ ತುರ್ತು

“ಕೇಂದ್ರ ಸರ್ಕಾರವು ‘ನನ್ನ ಅಭಿಪ್ರಾಯವನ್ನು ನಾನು ಹೇಳುತ್ತೇನೆ, ನಿಮ್ಮ ಅಭಿಪ್ರಾಯವನ್ನು ನೀವು ಹೇಳುತ್ತೀರಿ’ ಎಂಬ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರವು ರಾಜ್ಯಗಳಿಗೆ ಆದಾಯ ರಕ್ಷಣೆಯನ್ನು ಏಕೆ ಖಚಿತಪಡಿಸುವುದಿಲ್ಲ. ರಾಜ್ಯಗಳಿಗೆ ಆರ್ಥಿಕ ರಕ್ಷಣೆ ನೀಡಲು ಕೇಂದ್ರಕ್ಕೆ ಸಮಸ್ಯೆ ಏನು? ಕೇಂದ್ರವು ಮಾಡಬಹುದಾದ ಸುಲಭವಾದ ಕೆಲಸವೆಂದರೆ ಆದಾಯ ರಕ್ಷಣೆಗೆ ಒಪ್ಪಿಕೊಳ್ಳುವುದು” ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಹೊಸ ಜಿಎಸ್‌ಟಿ ದರವು ಸೋಮವಾರದಿಂದ ಜಾರಿಗೆ ಬಂದಿದೆ. ಹಲವಾರು ಗೃಹೋಪಯೋಗಿ ವಸ್ತುಗಳು, ಕಾರುಗಳು, ಬೈಕ್‌ಗಳು ಹಾಗೂ ಟಿವಿಗಳ ಮೇಲಿನ ಜಿಎಸ್‌ಟಿ ದರವು ಕಡಿಮೆಯಾಗಿದೆ. ಜಿಎಸ್‌ಟಿಯಲ್ಲಿ ಹಲವು ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ 5%ಗೆ ಇಳಿಕೆಯಾಗಿದ್ದರೆ, ಈ ಹಿಂದೆ, 28% ಜಿಎಸ್‌ಟಿ ಇದ್ದ ವಸ್ತುಗಳ ಮೇಲಿನ ಜಿಎಸ್‌ಟಿ ದರವು 18%ಗೆ ಕಡಿತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...