ಗುಜರಾತ್ | ಅಕಾಲಿಕ ಮಳೆಯಿಂದ ಸಿಡಿಲು ಬಡಿದು 20 ಮಂದಿ ಸಾವು

Date:

ಗುಜರಾತ್‌ನ 251 ತಾಲೂಕುಗಳ ಪೈಕಿ 230ಕ್ಕೂ ಹೆಚ್ಚು ತಾಲೂಕುಗಳಲ್ಲಿ ಗುಡುಗು ಸಹಿತ ಅಕಾಲಿಕ ಮಳೆಯಾಗಿದೆ. ಭಾನುವಾರ ಸಿಡಿಲು ಬಡಿದು ಅಪ್ರಾಪ್ತರು ಸೇರಿದಂತೆ ಸುಮಾರು 20 ಮಂದಿ ಸಾವನ್ನಪ್ಪಿದ್ದು, ಒಂಬತ್ತುಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆಯಲ್ಲಿ 22 ವರ್ಷದ ಯುವಕ ಬೈಕ್​​ನಲ್ಲಿ ಪ್ರಯಾಣಿಸುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇನ್ನು ಮೆಹ್ಸಾನಾ ಜಿಲ್ಲೆಯಲ್ಲಿ ಆಟೋರಿಕ್ಷಾ ಮೇಲೆ ಮರ ಬಿದ್ದು 29 ವರ್ಷದ ಯುವಕ ಮೃತಪಟ್ಟಿದ್ದಾನೆ. ದಹೋದ್‌ನಲ್ಲಿ ಮೂವರು ಮತ್ತು ಭರೂಚ್‌ನಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದರೆ, ಇದರ ಜತೆಗೆ ತಾಪಿ ಜಿಲ್ಲೆಯಲ್ಲಿ ಇಬ್ಬರು ಮತ್ತು ಸಬರ್ಕಾಂತ, ಅಹಮದಾಬಾದ್, ಮೆಹ್ಸಾನಾ, ಅಮ್ರೇಲಿ, ಬೊಟಾಡ್, ಪಂಚಮಹಲ್, ಖೇಡಾ, ಸೂರತ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕೆಲವು ಕಡೆ ಸಿಡಿಲಿನ ಅಬ್ಬರಕ್ಕೆ 40ಕ್ಕೂ ಹೆಚ್ಚು ದನ, ಕುರಿಗಳೂ ಸಾವನ್ನಪ್ಪಿವೆ. ಸೂರತ್ ಜಿಲ್ಲೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಈ ಎಲ್ಲ ಮೃತರು ತಮ್ಮ ಕೃಷಿ ಚಟುವಟಿಕೆಯಲ್ಲಿದ್ದಾಗ ಅಥವಾ ಹೊರಗೆ ಕೆಲಸದಲ್ಲಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭರೂಚ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಭೂರಿಬೆನ್ ರಾಥೋಡ್ (60) ಮತ್ತು ಮೊಮ್ಮಗ ಆಕಾಶ್ ರಾಥೋಡ್ (15) ಸಾವನ್ನಪ್ಪಿದ್ದಾರೆ. ಅಂಬೇಟಾ ಗ್ರಾಮದಲ್ಲಿ ತನ್ನ ಮಗಳ ಕುಟುಂಬದೊಂದಿಗೆ ಭೂರಿಬೆನ್ ವಾಸಿಸುತ್ತಿದ್ದರು. ತಮ್ಮ ಮೊಮ್ಮಗ ಆಕಾಶ್ ಜತೆಗೆ ಹನ್ಸೋಟ್ ತಾಲೂಕಿನ ಅಲಿಯಾ ಬೆಟ್ ದ್ವೀಪದಲ್ಲಿ ಮೀನುಗಾರಿಕೆಗೆ ತೆರಳಿದ್ದಾರೆ. ಈ ವೇಳೆ, ದಾರಿಯಲ್ಲಿದ್ದಾಗ ಮಳೆ ಆರಂಭವಾಗಿದೆ. ಬಳಿಕ ಸಮೀಪದಲ್ಲಿರುವ ಮರದ ಬಳಿ ಆಶ್ರಯ ಪಡೆದಿದ್ದಾರೆ. ಇದ್ದಕ್ಕಿದ್ದಂತೆ ಸಿಡಿಲು ಬಡಿದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆಲವು ಮೀನುಗಾರರು ಅವರನ್ನು ಕಂಡು ಭರೂಚ್ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.

ಅಮ್ರೇಲಿಯಲ್ಲಿ ಸಿಡಿಲು ಬಡಿದು 16 ವರ್ಷದ ಬಾಲಕ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಈತ ಜಫ್ರಾಬಾದ್ ತಾಲೂಕಿನ ರೋಹಿಸಾ ಗ್ರಾಮದ ನಿವಾಸಿ ಭವೇಶ್ ದರ್ಶನ್ ಭಾಯಿ ವಘೇಲಾ ಎಂದು ಪೊಲೀಸರು ಗುರುತಿಸಿದ್ದಾರೆ. ಬಾಲಕ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.

“ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಾಲಕನು ತನ್ನ ಹತ್ತಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಭಾರೀ ಮಳೆಯ ಸಮಯದಲ್ಲಿ ಸಿಡಿಲು ಬಡಿದು ಸಾವಾಗಿದೆ. ವಘೇಲಾ ಅವರು ಬೆಳೆ ಹಾನಿಯಾಗದಂತೆ ಬೆಳೆಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಸಿಡಿಲು ಬಡಿದಿದೆ. ಈ ಸಂಬಂಧ ನೈಸರ್ಗಿಕ ಅಪಘಾತ ಪ್ರಕರಣ ದಾಖಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಈಶಾನ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಚಂಡಮಾರುತ ಉಂಟಾದ ಪರಿಣಾಮ ಮಳೆ ಆರಂಭವಾಗಿದೆ. ಜತೆಗೆ, ದಕ್ಷಿಣ ಗುಜರಾತ್‌ನಿಂದ ಕೇರಳದವರೆಗೂ ಟ್ರಫ್ ವಿಸ್ತರಿಸುತ್ತಿದೆ. ಈ ಹವಾಮಾನ ವ್ಯವಸ್ಥೆಗಳ ಸಂಯೋಜನೆಯಿಂದ ಗುಜರಾತ್‌ನಲ್ಲಿ ಅಕಾಲಿಕ ಮಳೆ ಉಂಟಾಗಿದೆ” ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಾದೇಶಿಕ ನಿರ್ದೇಶಕಿ ಮನೋರಮಾ ಮೊಹಂತಿ ತಿಳಿಸಿದ್ದಾರೆ.

“ಸೂರತ್ ಮತ್ತು ನವಸಾರಿ ಕರಾವಳಿ ಜಿಲ್ಲೆಗಳಾದ ಜುನಾಗಢ್, ಗಿರ್ ಸೋಮನಾಥ್, ಭಾವನಗರ, ಅಮ್ರೇಲಿ, ರಾಜ್‌ಕೋಟ್ ಮತ್ತು ಬೊಟಾಡ್ ಸೋಮವಾರದವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅಹಮದಾಬಾದ್, ತಾಪಿ, ಡ್ಯಾಂಗ್, ಛೋಟಾ ಉದೇಪುರ್ ಮತ್ತು ದಾಹೋಡ್‌ನಲ್ಲಿ ಸೋಮವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸೋಮವಾರವೂ ಮಳೆಯಾಗಲಿದೆ. ಮಂಗಳವಾರದಿಂದ ರಾಜ್ಯವು ಶುಷ್ಕ ಹವಾಮಾನವನ್ನು ಅನುಭವಿಸುವ ನಿರೀಕ್ಷೆಯಿದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನ.27 ಮತ್ತು ನ.28 ರಂದು ಈ ಮಾರ್ಗದಲ್ಲಿ ಸಂಚಾರ ಬಂದ್; ಎಲ್ಲೆಲ್ಲಿ? ಇಲ್ಲಿದೆ ನೋಡಿ

ಭಾನುವಾರ ರಾತ್ರಿ 8 ಗಂಟೆಯವರೆಗೆ ಸುರೇಂದ್ರನಗರದ ಚುಡಾದಲ್ಲಿ ಅತಿ ಹೆಚ್ಚು 111 ಮಿಮೀ ಮಳೆ ದಾಖಲಾಗಿದೆ. ಸೂರತ್ ನಗರದಲ್ಲಿ 99 ಮಿಮೀ ಮತ್ತು ಸೂರತ್ ಜಿಲ್ಲೆಯ ಉಮರ್ಪಾದದಲ್ಲಿ 89 ಮಿಮೀ ಮಳೆಯಾಗಿದೆ. ಖೇಡಾದ ನಾಡಿಯಾಡ್‌ನಲ್ಲಿ 80 ಮಿಮೀ ಭಾರೀ ಮಳೆ ದಾಖಲಾಗಿದೆ.

ರಾಜ್‌ಕೋಟ್‌ನಲ್ಲಿ ಮಳೆ ಮತ್ತು ಆಲಿಕಲ್ಲು ಮಳೆಯಾದರೆ, ಸೂರತ್ ಗಾಂಧಿನಗರ ಮತ್ತು ಅಹಮದಾಬಾದ್‌ನಲ್ಲಿ ಬೆಳಿಗ್ಗೆ ತುಂತುರು ಮಳೆ ಸುರಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...