ಗುಜರಾತ್ | ಪೇಟ ಮತ್ತು ಸನ್ ಗ್ಲಾಸ್ ಧರಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

Date:

ದೇಶಾದ್ಯಂತ ಜಾತಿ ದೌರ್ಜ್ಯನದ ಘಟನೆಗಳು ಹೆಚ್ಚುತ್ತಲೇ ಇವೆ. ಇತ್ತೀಚಿನ ಘಟನೆಯೊಂದರಲ್ಲಿ, ಪೇಟ ಮತ್ತು ಸನ್‌ ಗ್ಲಾಸ್‌ ಧರಿಸಿ, ಇನ್‌ಸ್ಟಾಗ್ರಾಂನಲ್ಲಿ ಫೋಟೋ ಅಪ್‌ಲೋಡ್‌ ಮಾಡಿದ್ದಕ್ಕೆ ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯ ಸಯೆಬಾಪುರ ಗ್ರಾಮದಲ್ಲಿ ಜುಲೈ 17ರಂದು ಘಟನೆ ನಡೆದಿದೆ. ಹಲ್ಲೆಗೊಳಗಾದ ದಲಿತ ಯುವಕ ಅಜಯ್ ಪರ್ಮಾರ್ ಅವರು ಹಿಮಂತ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ಪ್ರಬಲ ಜಾತಿಯ ಕ್ಷತ್ರಿಯರೆಂದು ಪರಿಗಣಿಸುವ ದರ್ಬಾರ್ ಸಮುದಾಯಕ್ಕೆ ಸೇರಿದ ನಾಲ್ವರು ತನ್ನನ್ನ ಥಳಿಸಿದ್ದಾರೆ. ಆರೋಪಿಗಳನ್ನು ನನ್ನನ್ನು ನವನಗರ ಬಸ್ ನಿಲ್ದಾಣದ ಬಳಿ, ಸುತ್ತುವರೆದು ದಾಳಿ ನಡೆಸಿದ್ದಾರೆ. ‘ದರ್ಬಾರ್ ಸಮುದಾಯದ ಜನರು ಮಾತ್ರ ಸಫಾ ಮತ್ತು ಸನ್‌ ಗ್ಲಾಸ್‌ ಧರಿಸಬೇಕು. ಬೇರೆ ಯಾರೂ ಅವುಗಳನ್ನು ಧರಿಸಬಾರದು’ ಎಂದು ಆರೋಪಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಪರ್ಮಾರ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಫ್‌ಐಆರ್‌ನಲ್ಲಿ ನಾಲ್ವರು ಆರೋಪಿಗಳನ್ನು ಹೆಸರಿಸಲಾಗಿದೆ – ಕಿರ್ಪಾಲ್‌ಸಿನ್ಹ್ ರಾಥೋಡ್, ಮನುಸಿನ್ ರಾಥೋಡ್ ಮತ್ತು ಅವರ ಪುತ್ರರಾದ ಹಿತೇಂದ್ರಸಿನ್ಹ್ ರಾಥೋಡ್ ಮತ್ತು ಶುಕಲ್‌ಸಿನ್ಹ್ ರಾಥೋಡ್ ಹಲ್ಲೆಗೈದಿರುವ ಆರೋಪಿಗಳು.

ಗುಜರಾತ್‌ನಲ್ಲಿ ಸನ್ ಗ್ಲಾಸ್ ಧರಿಸಿದ್ದಕ್ಕಾಗಿ ದಲಿತನೊಬ್ಬನನ್ನು ಥಳಿಸಿರುವುದು ಇದೇ ಮೊದಲಲ್ಲ. 2023ರ ಜೂನ್‌ನಲ್ಲಿ, ಪಾಲಂಪುರದ ಮೋಟಾ ಗ್ರಾಮದಲ್ಲಿ 21 ವರ್ಷ ವಯಸ್ಸಿನ ದಲಿತ ಯುವಕ ಮತ್ತು ಆತನ ಕುಟುಂಬದ ಮೇಲೆ ಪ್ರಬಲ ಜಾತಿ ರಜಪೂತ ಸಮುದಾಯದ ಗುಂಪೊಂದು ಸನ್‌ ಗ್ಲಾಸ್‌ ಮತ್ತು ಒಳ್ಳೆಯ ಬಟ್ಟೆ ಧರಿಸಿದ್ದಕ್ಕಾಗಿ ಹಲ್ಲೆ ಮಾಡಿತ್ತು.

2023ರ ನವೆಂಬರ್‌ನಲ್ಲಿ 21 ವರ್ಷದ ದಲಿತ ಯುವಕ ತನ್ನ ಉದ್ಯೋಗದಾತನ ಬಳಿ ತನ್ನ ಸಂಬಳ ಕೇಳಿದ್ದಕ್ಕಾಗಿ ಹಲ್ಲೆ ನಡೆಸಲಾಗಿತ್ತು. ಈ ವರ್ಷದ ಫೆಬ್ರವರಿಯಲ್ಲಿ, ಗಾಂಧಿನಗರ ಜಿಲ್ಲೆಯಲ್ಲಿ ವಧುವಿನ ಮನೆಗೆ ಕುದುರೆ ಮೇಲೆ ಸವಾರಿ ಮೂಲಕ ತೆರಳಿದ್ದಕ್ಕೆ, ದಲಿತ ವರನ ಮೇಲೆ ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...