ಗುಜರಾತ್ | ಹುಟ್ಟಿದ ನಾಲ್ಕೇ ದಿನಕ್ಕೆ ನಾಲ್ಕು ಮಂದಿಗೆ ಜೀವ ದಾನ ಮಾಡಿ ಸತ್ತ ಹಸುಗೂಸು!

Date:

ಹುಟ್ಟಿ ಕೇವಲ ನಾಲ್ಕು ದಿನ ಬದುಕಿದ್ದ ಹಸುಗೂಸೊಂದು ಅಂಗಾಂಗ ದಾನದ ಮೂಲಕ ನಾಲ್ಕು ಮಂದಿಯ ಬಾಳಿಗೆ ಬೆಳಕಾದ ಮನ ಕಲುಕುವ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ.

ಸೂರತ್‌ನ ಡೈಮಂಡ್ ಘಟಕದ ಯೋಜನಾ ವಿಭಾಗದಲ್ಲಿ ಉದ್ಯೋಗಿಯಾಗಿರುವ ಅನೂಪ್ ಠಾಕೂರ್ ಅವರು ತಮ್ಮ ಪತ್ನಿ, ತುಂಬುಗರ್ಭಿಣಿ ವಂದನಾ ಅವರನ್ನು ಪರೀಕ್ಷೆಗೆಂದು ಆಸ್ಪತ್ರೆಗೆ ಕರೆದೊಯ್ದರು. ವೈದ್ಯರು ತಕ್ಷಣವೇ ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದರು. ಅವರಿಗೆ ಸಿಸೇರಿಯನ್ ಮಾಡಲಾಯಿತು. ವಂದನಾ ಠಾಕೂರ್ ಅವರಿಗೆ ಅಕ್ಟೋಬರ್ 23 ರಂದು ಸಂಜೆ 7. 50 ರ ಸುಮಾರಿಗೆ ಗಂಡು ಮಗು ಜನಿಸಿತು.

ಆದರೆ, ಹುಟ್ಟಿದ ಮಗು ಸಹಜವಾಗಿರಲಿಲ್ಲ. ಮಗುವಿಗೆ ಸಾಮಾನ್ಯ ಹೃದಯ ಬಡಿತದ 15% ಮಾತ್ರ ಇತ್ತು ಮತ್ತು ಅದು ಸರಿಯಾಗಿ ಉಸಿರಾಡುತ್ತಿರಲಿಲ್ಲ. ಮಗು ಹುಟ್ಟಿದಾಗ ಅಳಲಿಲ್ಲ ಮತ್ತು ಅದರ ದೇಹದಲ್ಲಿ ಯಾವುದೇ ಚಲನೆಯೂ ಇರಲಿಲ್ಲ. 48 ಗಂಟೆಗಳ ವೀಕ್ಷಣೆಯ ನಂತರ, ವೈದ್ಯರು ಮಗುವಿನ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನುಪ್ ಮತ್ತು ವಂದನಾ ಠಾಕೂರ್ ಕ್ಲಿಷ್ಟಕರ ಸಂದರ್ಭದಲ್ಲಿ ಅಸಾಧಾರಣವಾದ ನಿರ್ಧಾರವನ್ನು ಕೈಗೊಂಡರು. ತಮ್ಮ ಮಗನ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದ ನಂತರ ಅವರು ಮಗನ ಅಂಗಗಳನ್ನು ದಾನ ಮಾಡಲು ನಿರ್ಧರಿಸಿದರು. ಹಸುಗೂಸಿನ ಮೂತ್ರಪಿಂಡಗಳು, ಕಾರ್ನಿಯಾ ಮತ್ತು ಗುಲ್ಮ ಸೇರಿದಂತೆ ಹಲವು ಅಂಗಗಳನ್ನು ಶುಕ್ರವಾರ ರಾತ್ರಿ ಹಸುಗೂಸಿನ ದೇಹದಿಂದ ತೆಗೆದು ನಾಲ್ವರು ರೋಗಿಗಳಿಗೆ ಅಳವಡಿಸಲಾಯತು.

ಹುಟ್ಟಿ ಕೇವಲ 100 ಗಂಟೆ ಬದುಕಿದ್ದ ಹಸುಗೂಸೊಂದು ನಾಲ್ವರಿಗೆ ಜೀವ ದಾನ ಮಾಡಿದ್ದು ಒಂದು ಅಸಾಧಾರಣ ಘಟನೆಯೇ ಸರಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...