ಕೋರ್ಟ್‌ನಲ್ಲಿ ನ್ಯಾಯಾಧೀಶೆಯನ್ನು ನಿಂದಿಸಿದ ನ್ಯಾಯಾಧೀಶ; 2 ದಿನಗಳ ಬಳಿಕ ಕ್ಷಮೆಯಾಚಿಸಿದ ಜಡ್ಜ್‌

Date:

ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯವಿದ್ದ ಕಾರಣ ಹಿರಿಯ ನ್ಯಾಯಾಧೀಶರೊಬ್ಬರು ತಮ್ಮ ಸಹೋದ್ಯೋಗಿ ನ್ಯಾಯಾಧೀಶೆಯನ್ನು ನಿಂದಿಸಿರುವ ಘಟನೆ ಗುಜರಾತ್‌ ಹೈಕೋರ್ಟ್‌ನಲ್ಲಿ ನಡೆದಿದೆ. ನಿಂದನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಎರಡು ದಿನಗಳ ಬಳಿಕ ಕ್ಷಮೆಯಾಚಿಸಿದ್ದಾರೆ.

ಹೈಕೋರ್ಟ್‌ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರು ತಮ್ಮ ಸಹೋದ್ಯೋಗಿಯನ್ನು ಸೋಮವಾರ ನ್ಯಾಯಾಲಯದಲ್ಲಿ ನಿಂದಿಸಿದ್ದರು. ಘಟನೆ ಸಂಬಂಧ ಬುಧವಾರ ವಿಷಾಧ ವ್ಯಕ್ತಪಡಿಸಿದ್ದು, ನ್ಯಾಯಾಧೀಶೆ ಬಳಿ ಕ್ಷಮೆ ಕೇಳಿದ್ದಾರೆ. (ದಸರಾ ನಿಮಿತ್ತ ಮಂಗಳವಾರ ರಜೆ ಇತ್ತು)

ಸೋಮವಾರ ಪ್ರಕರಣವೊಂದರ ಸಂಬಂಧ ನ್ಯಾಯಮೂರ್ತಿ ವೈಷ್ಣವ್ ಅವರು ನ್ಯಾಯಾಧೀಶೆ ಮೌನಾ ಭಟ್ ಅವರೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದ್ದರು. ಪ್ರಕರಣದ ಆದೇಶ ನೀಡುವಾಗ ಭಟ್ ಅವರು ವೈಷ್ಣವ್ ಅವರ ನಿಲುವನ್ನು ಒಪ್ಪಿರಲಿಲ್ಲ. ಆ ಕಾರಣಕ್ಕೆ ಅವರ ಮೇಲೆ ನಿಂದನಾತ್ಮಕವಾಗಿ ಮಾತನಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೋಮವಾರ ನಡೆದದ್ದು ಆಗಬಾರದಿತ್ತು. ನಾನು ತಪ್ಪು ಮಾಡಿದೆ. ಅದಕ್ಕಾಗಿ ಕ್ಷಮಿಸಿ.  ನಾವು ಹೊಸ ವಿಚಾರಣೆಗಳನ್ನು ಪ್ರಾರಂಭಿಸೋಣ” ಎಂದು ನ್ಯಾಯಮೂರ್ತಿ ವೈಷ್ಣವ್ ಅವರು ನ್ಯಾಯಮೂರ್ತಿ ಮೌನ ಭಟ್ ಅವರ ಎದುರು ಕ್ಷಮೆ ಕೇಳಿದ್ದಾರೆ.

ನ್ಯಾಯಮೂರ್ತಿಗಳಾದ ವೈಷ್ಣವ್ ಮತ್ತು ಭಟ್ ಅವರ ನಡುವಿನ ಮಾತಿನ ಚಕಮಕಿ ನಡೆದಿದ್ದ ವಿಡಿಯೋವನ್ನು ಗುಜರಾತ್ ಹೈಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಿಂದ ತೆಗೆದುಹಾಕಲಾಗಿದೆ, ಘಟನೆಗೆ ಸಂಬಂಧಿಸಿದ ವೈರಲ್‌ ವಿಡಿಯೋದಲ್ಲಿ ನ್ಯಾಯಮೂರ್ತಿ ಭಟ್ ಅವರು ನ್ಯಾಯಮೂರ್ತಿ ವೈಷ್ಣವ್‌ಗೆ ಏನೋ ಹೇಳುತ್ತಿರುವುದು ಕಾಣಿಸುತ್ತದೆ.

ಈ ವೇಳೆ ನ್ಯಾಯಮೂರ್ತಿ ವೈಷ್ಣವ್, “ಹಾಗಾದರೆ ನೀವು ಭಿನ್ನಾಭಿಪ್ರಾಯ ಹೊಂದಿದ್ದೀರಿ… ನಾವು ಒಂದು ವಿಚಾರದಲ್ಲಿ ಭಿನ್ನವಾಗಿದ್ದೇವೆ ಇನ್ನೊಂದರಲ್ಲಿಯೂ ಭಿನ್ನವಾಗಿರಬಹುದು” ಎಂದು ಸಿಟ್ಟಿನಿಂದ ಹೇಳಿದ್ದಾರೆ. ಆಗ ನ್ಯಾಯಮೂರ್ತಿ ಭಟ್, ‘ಇದು ಭಿನ್ನಾಭಿಪ್ರಾಯದ ಪ್ರಶ್ನೆಯಲ್ಲ’ ಎಂದರು. ಇದಕ್ಕೆ ನ್ಯಾಯಮೂರ್ತಿ ವೈಷ್ಣವ್, “ಹಾಗಾದರೆ ಗೊಣಗಬೇಡಿ, ನೀವು ಪ್ರತ್ಯೇಕ ಆದೇಶ ನೀಡಿ, ನಾವು ಬೇರೆ ವಿಷಯಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಹೇಳಿರುವುದು ಕಂಡುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...