ಗುಜರಾತ್‌ನಲ್ಲಿ ಭಾರಿ ಮಳೆ | ತುಂಬಿದ ಒಂಬತ್ತು ಅಣೆಕಟ್ಟುಗಳು: 1,000ಕ್ಕೂ ಹೆಚ್ಚು ಜನರ ಸ್ಥಳಾಂತರ

Date:

ಗುಜರಾತ್‌ನಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಒಂಬತ್ತು ಅಣೆಕಟ್ಟುಗಳು ತುಂಬಿದೆ. 27 ಜಿಲ್ಲೆಗಳ 160 ತಾಲೂಕುಗಳಲ್ಲಿ ಸರಾಸರಿ 21.24 ಮಿಮೀ ಮಳೆಯಾಗಿದೆ. ಆದರೆ 91 ತಾಲೂಕುಗಳು ಸಂಪೂರ್ಣವಾಗಿ ಬತ್ತಿಹೋಗಿವೆ. ಅಣೆಕಟ್ಟುಗಳಲ್ಲಿ ಅಪಾಯಕಾರಿಯಾಗಿ ನೀರಿನ ಮಟ್ಟ ಏರುತ್ತಿರುವ ಕಾರಣ 15 ಅಣೆಕಟ್ಟುಗಳ ಸಮೀಪ ಹೈ ಅಲರ್ಟ್‌ ಘೋಷಿಸಲಾಗಿದೆ. ಈಗಾಗಲೇ 22ಕ್ಕೂ ಅಧಿಕ ಮಂದಿ ಭಾರಿ ಮಳೆಗೆ ಬಲಿಯಾಗಿದ್ದಾರೆ.

ಮುನ್ನೆಚ್ಚರಿಕೆಯಾಗಿ, 1,060 ಜನರನ್ನು ಸ್ಥಳಾಂತರಿಸಲಾಗಿದೆ. ಭಾವನಗರದಲ್ಲಿ 729, ಸುರೇಂದ್ರನಗರದಲ್ಲಿ 134, ಬೋಟಾಡ್‌ನಲ್ಲಿ 117 ಮತ್ತು ಅಮ್ರೇಲಿಯಲ್ಲಿ 80 ಜನರನ್ನು ಸ್ಥಳಾಂತರಿಸಲಾಗಿದೆ. ಬೋಟಾಡ್‌ನಲ್ಲಿ 24, ಭಾವನಗರದಲ್ಲಿ 89 ಮತ್ತು ಅಮ್ರೇಲಿಯಲ್ಲಿ 69- ಹೀಗೆ ವಿಪತ್ತು ನಿರ್ವಹಣಾ ತಂಡಗಳು 182 ಜನರನ್ನು ರಕ್ಷಿಸಿವೆ. ಎನ್‌ಡಿಆರ್‌ಎಫ್‌ನ 13 ಮತ್ತು ಎಸ್‌ಡಿಆರ್‌ಎಫ್‌ನ 20 ಸೇರಿದಂತೆ 33 ತಂಡಗಳನ್ನು ನಿಯೋಜಿಸಿದೆ.

ಇದನ್ನು ಓದಿದ್ದೀರಾ? ಗುಜರಾತ್ | ಭಾರೀ ಮಳೆ; ಚಂಡಮಾರುತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ತೀವ್ರ ಮುಂಗಾರು ಮಳೆಯಾಗಿದ್ದು ಪ್ರವಾಹದ ಎಚ್ಚರಿಕೆ ನೀಡಲಾಗಿದೆ. 206 ಅಣೆಕಟ್ಟುಗಳಲ್ಲಿ, ಒಂಬತ್ತು ಅಣೆಕಟ್ಟುಗಳು ತುಂಬಿವೆ. 15 ಅಣೆಕಟ್ಟುಗಳು ಹೈ ಅಲರ್ಟ್‌ನಲ್ಲಿದೆ. ಸರ್ದಾರ್ ಸರೋವರ್ ಅಣೆಕಟ್ಟು ನಿರಂತರವಾಗಿ ತುಂಬುತ್ತಿದೆ. ಗಂಟೆಗೆ 16,914 ಕ್ಯೂಸೆಕ್ ನೀರಿನ ಒಳಹರಿವು ಇದ್ದು, ನರ್ಮದಾ ಕಾಲುವೆಗೆ 23,844 ಕ್ಯೂಸೆಕ್‌ಗಳನ್ನು ಬಿಡಲಾಗುತ್ತಿದೆ. ಪ್ರಸ್ತುತ ನೀರಿನ ಮಟ್ಟವು 392.22 ಅಡಿಗಳಷ್ಟಿದೆ.

ಜೊತೆಗೆ ವಿದ್ಯುತ್ ಸಮಸ್ಯೆಯೂ ಎದುರಾಗಿದೆ. 13,285 ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆಯಾಗಿದ್ದು, ಈ ಪೈಕಿ 13,209 ಗ್ರಾಮಗಳಲ್ಲಿ ಸಮಸ್ಯೆ ಪರಿಹರಿಸಲಾಗಿದೆ. 17,005 ಹಾನಿಗೊಳಗಾದ ವಿದ್ಯುತ್ ಕಂಬಗಳಲ್ಲಿ 16,031 ದುರಸ್ತಿ ಮಾಡಲಾಗಿದೆ. ಆದರೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೇ ಇಲ್ಲದಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...