ಪ್ರಶಸ್ತಿ ವಿತರಣೆಯಲ್ಲಿ ಅನ್ಯಾಯ; ಪ್ರಶ್ನಿಸಿದ ವ್ಯಕ್ತಿಯನ್ನೇ ಹೊಡೆದು ಕೊಂದ ಸಂಘಟಕರು

Date:

ತನ್ನ ಮಗಳ ಎರಡು ಈವೆಂಟ್‌ಗಳಲ್ಲಿ ಗೆದ್ದರೂ ಕೇವಲ ಒಂದು ಬಹುಮಾನ ನೀಡಲಾಗಿದೆ ಎಂದು ಪ್ರಶ್ನಿಸಿದ್ದ 40 ವರ್ಷದ ವ್ಯಕ್ತಿಯನ್ನು ಕಾರ್ಯಕ್ರಮ ಸಂಘಟಕರು ಹೊಡೆದು ಕೊಂದಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಗುಜರಾತ್‌ನ ಬೋರಬಂದರ್‌ನಲ್ಲಿ ಕೃಷ್ಣಾ ಪಾರ್ಕ್‌ ಸೊಸೈಟಿಯು ಸಾಂಪ್ರಾದಾಯಿಕ ನೃತ್ಯ ‘ಗರ್ಬಾ’ಗೆ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದ ಸ್ಪರ್ಧೆಗಳಲ್ಲಿ 11 ವರ್ಷದ ಬಾಲಕಿ ಭಾವಹಿಸಿ ಎರಡು ಸ್ಪರ್ಧೆಗಳಲ್ಲಿ ಗೆದ್ದಿದ್ದಳು. ಆದರೆ, ಆಕೆಗೆ ಒಂದೇ ಒಂದು ಬಹುಮಾನ ನೀಡಲಾಗಿತ್ತು. ಇದನ್ನು ಪ್ರಶ್ನಿಸಿದ್ದ ಆಕೆಯ ತಂದೆ ಸರ್ಮನ್‌ ಒಡೆದಾರ ಅವರ ಮೇಲೆ ಏಳು ಮಂದಿ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಸರ್ಮನ್‌ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಸರ್ಮನ್‌ ಹತ್ಯೆಯಲ್ಲಿ ಭಾಗಿಯಾಗಿರುವ ರಾಜಾ ಕುಚಾಡಿಯಾ, ರಾಜು ಕೇಶ್ವಾಲಾ, ರಾಮ್ಡೆ ಬೊಖಿರಿಯಾ, ಪ್ರತೀಕ್ ಗೊರಾನಿಯಾ  ಹಾಗೂ ಇತರ ಮುವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಬೋರಬಂದರ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ರುತು ರಾಬಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋರಬಂದರ್‌ನ ಉದ್ಯೋಗನಗರ ಪೊಲೀಸ್‌ ಠಾಣೆಯಲ್ಲಿ ಸರ್ಮನ್‌ ಅವರ ಪತ್ನಿ ಮಾಲಿಬೆನ್‌ ಅವರು ದೂರು ದಾಖಳಿಸಿದ್ದಾರೆ. ದೂರಿನಲ್ಲಿ, “ಸೋಮವಾರ ರಾತ್ರಿ ತಮ್ಮ ಮಗಳು ಗಾರ್ಬಾ ನೃತ್ಯ ಮಾಡಿದ ನಂತರ ಮನೆಗೆ ಬಂದು, ‘ತಾನು ಎರಡು ವಿಭಿನ್ನ ಗೆದ್ದಿದ್ದರೂ ತನಗೆ ಒಂದು ಬಹುಮಾನ ಮಾತ್ರ ನೀಡಿದ್ದಾರೆ’ ಎಂದು ಹೇಳಿದ್ದರು. ಮಗಳೊಂದಿಗೆ ನಾನು (ಮಾಲಿಬೆನ್) ಸಂಘಟಕರ ಬಳಿ ಹೋಗಿ ಪ್ರಶ್ನಿಸಿದಾಗ, ಆರೋಪಿ ಕೇಶ್ವಾಲಾ ಎಂಬಾತ ನಾವು ಕೊಟ್ಟಿರುವ ತೀರ್ಪನ್ನು ಒಪ್ಪಿಕೊಳ್ಳಬೇಕೆಂದು ಅಸಭ್ಯವಾಗಿ ಹೇಳಿದ್ದಾನೆ. ಆ ವೇಳೆ, ಕುಚಾಡಿಯಾ ಮತ್ತು ಬೊಖಿರಿಯಾ ಕೂಡ ಸ್ಥಳಕ್ಕೆ ಬಂದು ‘ಇಲ್ಲಿಂದ ಹೋಗದಿದ್ದರೆ ಕೊಲೆ ಮಾಡುತ್ತೇವೆ’ ಎಂದು ಬೆದರಿಕೆ ಹಾಕಿದರು” ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮೈತ್ರಿ ಇದ್ದರೂ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲ್ಲ ಎಂದ ಮಿಝೋರಾಂ ಮುಖ್ಯಮಂತ್ರಿ

ಅದಾದ ಒಂದು ಗಂಟೆಯ ನಂತರ, ಮಾಲಿಬೆನ್ ಮತ್ತು ಸರ್ಮನ್ ತಮ್ಮ ಮನೆಯ ಹೊರಗೆ ಕುಳಿತಿದ್ದಾಗ, ಅಲ್ಲಿಗೆ ಬಂದ ನಾಲ್ವರು ಪ್ರಮುಖ ಆರೋಪಿಗಳು ಮತ್ತು ಅವರ ಮೂವರು ಸಹಚರರು ದೊಣ್ಣೆ ಮತ್ತು ಮರದ ಕಟ್ಟಿಗೆಗಳಿಂದ ಹೊಡೆಯಲಾರಂಭಿಸಿದರು. ಸರ್ಮನ್‌ ಅವರನ್ನು ರಕ್ಷಿಸಲು ಹೋದಾಗ ಮಾಲಿಬೆನ್‌ ಅವರನ್ನು ದೂಡಿದ್ದಾರೆ. ಬಳಿಕ, ಸರ್ಮನ್‌ ಅವರನ್ನು ತಮ್ಮ ಬೈಕ್‌ಗಳಲ್ಲಿ ಗಾರ್ಬಾ ಸ್ಥಳಕ್ಕೆ ಎಳೆದೊಯ್ದು ಥಳಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸರ್ಮನ್‌ ಅವರನ್ನು ಪೊಲೀಸರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅದರೆ, ಚಿಕಿತ್ಸೆ ಫಲಿಸಂದೆ ಅವರು ಸಾವನ್ನಪ್ಪಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...