ಜ್ಞಾನೇಶ್ ಕುಮಾರ್, ಸುಖ್‌ಬೀರ್ ಸಂಧು ಕೇಂದ್ರ ಚುನಾವಣಾ ಆಯುಕ್ತರಾಗಿ ನೇಮಕ

Date:

ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯುಕ್ತರಾಗಿ ಮಾಜಿ ನಾಗರಿಕ ಸೇವಾ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಹಾಗೂ ಸುಖ್‌ಬೀರ್‌ ಸಂಧು ಅವರನ್ನು ನೇಮಕ ಮಾಡಲಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷ ನಾಯಕ ಅಧೀರ್ ರಂಜನ್‌ ಚೌಧರಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅಧಿಕೃತ ಪ್ರಕಟಣೆ ಮಾತ್ರ ಬಾಕಿಯಿದೆ.

ಚುನಾವಣಾ ಆಯುಕ್ತರ ಆಯ್ಕೆಗಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮೂವರು ಸದಸ್ಯರ ಉನ್ನತ ಮಟ್ಟದ ಸಭೆಯ ನಂತರ ತಿಳಿಸಿದ್ದಾರೆ. ಚೌಧರಿ ಅವರು ಚುನಾವಣಾ ಅಧಿಕಾರಿ ನೇಮಕ ಮಾಡುವ ಸಭೆಯ ಮೂವರು ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿದ್ದಾರೆ.

ಆದಾಗ್ಯೂ ಚೌಧರಿ ಅವರು ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯನ್ನು ವಿರೋಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ರಾತ್ರಿ 212 ಮಂದಿಯ ಹೆಸರುಗಳನ್ನು ನನಗೆ ಕಳಿಸಲಾಯಿತು. ಆ ಪಟ್ಟಿಯೊಂದಿಗೆ ನಾನು ಇಂದು ಬೆಳಿಗ್ಗೆ ಪ್ರಧಾನಿ ನಿವಾಸಕ್ಕೆ ತೆರಳಿದೆ. ಮಧ್ಯಾಹ್ನ 12 ಗಂಟೆಯಲ್ಲಿ ಸಭೆ ಆಯೋಜನೆಗೊಂಡ ಕಾರಣ ಸಣ್ಣ ಸಮಯದಲ್ಲಿ ನಾನು ಏನನ್ನು ನಿರ್ಧರಿಸುವುದಕ್ಕೆ ಸಾಧ್ಯವಾಗಲಿಲ್ಲ. ಆರು ಸದಸ್ಯರ ಕಿರು ಪಟ್ಟಿಯಲ್ಲಿ ಜ್ಞಾನೇಶ್ ಕುಮಾರ್ ಹಾಗೂ ಸುಖ್‌ಬೀರ್‌ ಸಂಧು ಅವರನ್ನು ಚುನಾವಣಾ ಆಯುಕ್ತರನ್ನಾಗಿ ಕೆಲವೇ ನಿಮಿಷಗಳಲ್ಲಿ ನೇಮಕ ಮಾಡಲಾಯಿತು” ಎಂದು ಅಧೀರ್ ರಂಜನ್‌ ಚೌಧರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾರ್ಚ್ ನಲ್ಲೇ ನೀರಿಗಾಗಿ ಹಾಹಾಕಾರ, ಮಿತ ಬಳಕೆಯ ಪಾಠ ಕಲಿಯಲು ಇದು ಸಕಾಲ

ಕೆಲವು ದಿನಗಳ ಹಿಂದೆ ಚುನಾವಣಾ ಆಯುಕ್ತರಾದ ಅರುಣ್ ಗೋಯಲ್‌ ರಾಜೀನಾಮೆ ಹಾಗೂ ಕಳೆದ ತಿಂಗಳು ಅನೂಪ್‌ ಚಂದ್ರ ಪಾಂಡೆ ನಿವೃತ್ತಿ ಹೊಂದಿದರು.

ಲೋಕಸಭಾ ಚುನಾವಣಾ ದಿನಾಂಕಗಳನ್ನು ಮಾ.15 ಅಥವಾ ಮಾ.16ರಂದು ಘೋಷಿಸುವ ಸಾಧ್ಯತೆಯಿದೆ.

ಈ ನಡುವೆ ಮಧ್ಯ ಪ್ರದೇಶದ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಚುನಾವಣಾ ಆಯುಕ್ತರ ನೇಮಕ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಸೇರಿಸದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...