ಜ್ಞಾನವಾಪಿ | ಬೇರೆ ನ್ಯಾಯಾಲಯಕ್ಕೆ 1991ರ ಮೊಕದ್ದಮೆ ವರ್ಗಾವಣೆ ಕೋರಿದ್ದ ಅರ್ಜಿ ವಜಾ: ವಾರಣಾಸಿ ಕೋರ್ಟ್‌

Date:

ಜ್ಞಾನವಾಪಿ ಮಸೀದಿಯನ್ನು ವಿವಾದಗೊಳಿಸಿ, ಮಸೀದಿ ವಿರುದ್ಧ 1991ರಲ್ಲಿ ದಾಖಲಿಸಲಾಗಿದ್ದ ಮೂಲ ಮೊಕದ್ದಮೆಯನ್ನು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಿಂದ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.

ಜ್ಞಾನವಾಪಿ ಮಸೀದಿ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು. ಮಸೀದಿ ಜಾಗವು ಕಾಶಿ ವಿಶ್ವನಾಥ ದೇವಾಲಯಕ್ಕೆ ಸೇರಿದ್ದೆಂದು ವಿವಾದ ಸೃಷ್ಟಿಸಲಾಗಿದೆ. ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಕರಣದ ದಾವೆದಾರರ ಪರವಾಗಿ ವಕೀಲ ವಿಜಯ್ ಶಂಕರ್ ರಸ್ತೋಗಿ ಅವರು ಮೂಲ ಮೊಕದ್ದಮೆಯ ವರ್ಗಾವಣೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿರುವ ಜಿಲ್ಲಾ ನ್ಯಾಯಾಧೀಶ ಜಯ ಪ್ರಕಾಶ್ ತಿವಾರಿ ಅವರು ಅರ್ಜಿಯನ್ನು ತಿರಸ್ಕರಿಸಿದ್ದಾರೆ. “ಅರ್ಜಿದಾರರು ಮೂಲ ಮೊಕದ್ದಮೆಯಲ್ಲಿ ದಾವೆದಾರ/ವಾದಿಗಳಲ್ಲ. ಆದ್ದರಿಂದ, ಅವರು ಮೊಕದ್ದಮೆಯ ವರ್ಗಾವಣೆ ಕೋರಲು ಕಾನೂನಿನಲ್ಲಿ ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬ್ರಿಟನ್ ಮತ್ತು ಫ್ರಾನ್ಸ್ ಮಧ್ಯಪ್ರಾಚ್ಯವನ್ನು ಹೇಗೆ ವಸಾಹತುಗೊಳಿಸಿದವು

ಪ್ರಕರಣದಲ್ಲಿ ವಾದಿಗಳಾಗಿರುವ ಮಣಿಕುಂಟಲ ತಿವಾರಿ, ನೀಲಿಮಾ ಮಿಶ್ರಾ ಹಾಗೂ ರೇಣು ಪಾಂಡೆ ಅವರು ಅರ್ಜಿ ಸಲ್ಲಿಸಿದ್ದಾರೆ. ಈ ಮೂವರೂ ಮೂಲ ಮೊಕದ್ದಮೆಯ ದಾವೆದಾರರಲ್ಲಿ ಒಬ್ಬರಾದ ದಿ. ಹರಿಹರ ಪಾಂಡೆ ಅವರ ಪುತ್ರಿಯರು.

1991ರಿಂದ ಮೂಲ ಮೊಕದ್ದಮೆ ಬಾಕಿ ಉಳಿದಿದೆ. ಸಿವಿಲ್ ನ್ಯಾಯಾಧೀಶರು (ಹಿರಿಯ ವಿಭಾಗ) ತ್ವರಿತಗತಿಯ ನ್ಯಾಯಾಲಯದ ಮುಂದೆ ದಾವೆದಾರರು ವಾದ ಮಂಡಿಸಲು ಸಾಕಷ್ಟು ಸಮಯ ನೀಡುತ್ತಿಲ್ಲ. ಹೀಗಾಗಿ, ಮೊಕದ್ದಮೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಕೋರಲಾಗಿದೆ ಎಂದು ವಕೀಲ ರಸ್ತೋಗಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...