ಕಾಂಗ್ರೆಸ್ ಕಾರ್ಯಕರ್ತೆ ಕೊಲೆ ಪ್ರಕರಣ: ಓರ್ವ ಆರೋಪಿಯ ಬಂಧನ

Date:

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಕೊಲೆಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿರುವುದಾಗಿ ಸೋಮವಾರ ತಿಳಿಸಿದ್ದಾರೆ.

ಶನಿವಾರ ನರ್ವಾಲ್ ಅವರ ಮೃತದೇಹವು ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಮೃತ ಮಹಿಳೆಯ ಗುರುತು ಪತ್ತೆಯಾಗಿರಲಿಲ್ಲ. ಆದರೆ ಕಾಂಗ್ರೆಸ್ ನಾಯಕರುಗಳು ಮಹಿಳೆಯು ಕಾಂಗ್ರೆಸ್ ಕಾರ್ಯಕರ್ತೆ ಎಂದು ತಿಳಿಸಿದ್ದರು. ಅದಾದ ಬಳಿಕ ಪೊಲೀಸರು ಗುರುತು ದೃಢಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಹರಿಯಾಣ ಪೊಲೀಸ್ ಅಧಿಕಾರಿಯೋರ್ವರು, “ಸದ್ಯ ನಾವು ಓರ್ವ ಆರೋಪಿಯನ್ನು ಬಂಧಿಸಿದ್ದೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನು ನರ್ವಾಲ್ ಅವರ ಕುಟುಂಬಸ್ಥರು ಆರೋಪಿಗಳ ಬಂಧನವಾಗುವವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ ಎಂದು ವರದಿಯಾಗಿದೆ. ನರ್ವಾಲ್ ರೋಹ್ಟಕ್‌ನ ವಿಜಯ ನಗರದ ನಿವಾಸಿಯಾಗಿದ್ದರು ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಹರಿಯಾಣ, ಮಹಾರಾಷ್ಟ್ರ ಮತದಾರರ ಪಟ್ಟಿ ಬಿಡುಗಡೆ ಕೋರಿ ಕಾಂಗ್ರೆಸ್ ಅರ್ಜಿ: 3 ತಿಂಗಳಲ್ಲಿ ಇತ್ಯರ್ಥವೆಂದ ಇಸಿಐ

ನರ್ವಾಲ್ ಬಗ್ಗೆ ಮಾಹಿತಿ ನೀಡಿರುವ ಹರಿಯಾಣ ಕಾಂಗ್ರೆಸ್ ನಾಯಕರು, “ನರ್ವಾಲ್ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿಯೂ ಭಾಗಿಯಾಗಿದ್ದರು. ಕಾನೂನು ಪದವಿ ಪಡೆಯುತ್ತಿದ್ದರು” ಎಂದು ತಿಳಿಸಿದ್ದಾರೆ.

ಈ ನಡುವೆ ನರ್ವಾಲ್ ರಾಜಕೀಯ ಪ್ರಗತಿಯನ್ನು ನೋಡಿ ಕಾಂಗ್ರೆಸ್‌ನ ಕೆಲವು ನಾಯಕರಿಗೆ ಇರಿಸುಮುರಿಸು ಇತ್ತು ಎಂದು ತಾಯಿ ಸವಿತಾ ಆರೋಪಿಸಿದ್ದಾರೆ. “ನನ್ನ ಮಗಳು ಶೀಘ್ರವಾಗಿ ರಾಜಕೀಯ ಪ್ರಗತಿ ಕಾಣುತ್ತಿರುವುದನ್ನು ನೋಡಿ ಅಸೂಯೆ ಪಡುತ್ತಿದ್ದ ಪಕ್ಷದೊಳಗಿನ ಯಾವುದೇ ನಾಯಕರು ಈ ಕೃತ್ಯ ಎಸಗಿರಬಹುದು. ನಮಗೆ ನ್ಯಾಯ ಸಿಗುವವರೆಗೂ ನಾವು ಅಂತ್ಯಸಂಸ್ಕಾರ ಮಾಡುವುದಿಲ್ಲ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...