ಗುರುಗ್ರಾಮ: ಮಸೀದಿ, ತೆರೆದ ಸ್ಥಳಗಳಲ್ಲಿ ಶುಕ್ರವಾರದ ನಮಾಜ್ ಸಲ್ಲಿಸದಂತೆ ಮುಸ್ಲಿಂ ಕೌನ್ಸಿಲ್‌ ಮನವಿ

Date:

ಶುಕ್ರವಾರದ ನಮಾಜ್‌ (ಜುಮಾ) ಅನ್ನು ಮಸೀದಿಗಳು ಅಥವಾ ತೆರೆದ ಸ್ಥಳಗಳಲ್ಲಿ ಸಲ್ಲಿಸದಂತೆ ಗುರುಗ್ರಾಮದ ಮುಸ್ಲಿಂ ಕೌನ್ಸಿಲ್‌ ತನ್ನ ಸಮುದಾಯದ ಸದಸ್ಯರಿಗೆ ವಿನಂತಿಸಿದೆ.

ನೂಹ್‌ ಹಿಂಸಾಚಾರ ಹಿನ್ನೆಲೆಯಲ್ಲಿ ಮತ್ತೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಇರಲು ಈ ವಿನಂತಿ ಮಾಡಲಾಗಿದೆ. ಆದರೆ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಗುರುಗ್ರಾಮದಾದ್ಯಂತ ಇರುವ ಎಲ್ಲ ಮಸೀದಿಗಳಲ್ಲಿ ಭದ್ರತೆಗೆ ಏರ್ಪಾಟು ಮಾಡಿದೆ.

ಗುರುಗ್ರಾಮದಲ್ಲಿ ಹಿಂದೆಯೂ ತೆರೆದ ಸ್ಥಳದಲ್ಲಿ ನಮಾಜ್‌ ಸಲ್ಲಿಕೆಗೆ ವಿರೋಧವಿತ್ತು. ಈಗ ನೂಹ್‌ ಹಿಂಸಾಚಾರ ಹಿನ್ನೆಲೆಯಲ್ಲಿ ಇಂದು ಯಾರೂ ತೆರೆದ ಸ್ಥಳಗಳಲ್ಲಿ ನಮಾಝ್ ಸಲ್ಲಿಸದಂತೆ ಕೋರಲಾಗಿದೆ ಎಂದು ಮುಸ್ಲಿಂ ಏಕ್ತಾ ಮಂಚ್‌ ಅಧ್ಯಕ್ಷ ಹಾಜಿ ಸಜ್ಜದ್‌ ಖಾನ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘I.N.D.I.A’ ಹೆಸರು ಬಳಕೆ: ಕೇಂದ್ರ, ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನೋಟಿಸ್

ಗುರುವಾರ ನಗರದ ಮುಸ್ಲಿಂ ಸಮುದಾಯ ಜಿಲ್ಲಾಧಿಕಾರಿ ನಿಶಾಂತ್‌ ಕುಮಾರ್‌ ಯಾದವ್ ಅವರನ್ನು ಭೇಟಿಯಾಗಿ ಮತ್ತೆ ಹಿಂಸಾಚಾರ ನಡೆಯದಂತೆ ಕ್ರಮಕೈಗೊಳ್ಳುವಂತೆ ವಿನಂತಿಸಿದೆ.‌

ಎಲ್ಲ ಮಸೀದಿಗಳಿಗೆ ರಕ್ಷಣೆ ಒದಗಿಸಲಾಗಿದೆ, ಜನರು ಮಸೀದಿಯಲ್ಲಿ ನಮಾಜ್‌ ಸಲ್ಲಿಸಲು ಬಯಸಿದರೂ ಯಾವುದೇ ಸಮಸ್ಯೆಯಾಗದಂತೆ ನಮಾಜ್‌ ಸಲ್ಲಿಸಲು ಏರ್ಪಾಟು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...