ದ್ವೇಷ ಭಾಷಣ | ಎಫ್‌ಐಆರ್ ದಾಖಲಾಗಿ ನಾಲ್ಕು ದಿನ ಕಳೆದರೂ ಪತ್ತೆಯಾಗದ ಕಾಜಲ್ ಹಿಂದೂಸ್ಥಾನಿ

Date:

  • ಕಳೆದ ವರ್ಷ ಕರ್ನಾಟಕದಲ್ಲಿ ಪ್ರಕರಣ ದಾಖಲು
  • ನಾವು ಕಾರ್ಯಕ್ರಮಕ್ಕೆ ಕರೆದಿಲ್ಲ ಎಂದ ವಿಎಚ್‌ಪಿ

ಗುಜರಾತಿನ ಉನಾ ಪಟ್ಟಣದಲ್ಲಿ ಗಲಭೆಗೆ ಪ್ರಚೋದಿಸಿದ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ಥಾನಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ನಾಲ್ಕು ದಿನಗಳು ಕಳೆದಿವೆ. ಆದರೆ, ಇನ್ನೂ ಅವರ ಬಂಧನವಾಗಿಲ್ಲ.

ಮಾರ್ಚ್ 30ರಂದು ರಾಮ ನವಮಿಯಂದು ನಡೆದ ವಿಶ್ವ ಹಿಂದೂ ಪರಿಷತ್ ರ‍್ಯಾಲಿಯಲ್ಲಿ ಕಾಜಲ್ ಹಿಂದೂಸ್ಥಾನಿ ದ್ವೇಷ ಭಾಷಣ ಮಾಡಿದ್ದರು. ಇದರ ಪರಿಣಾಮ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿತ್ತು.

ಈ ಹಿನ್ನೆಲೆಯಲ್ಲಿ ಏಪ್ರಿಲ್ 1ರಂದು ಉನಾ ಪೊಲೀಸರು ಸುಮಾರು 75 ಗಲಭೆಕೋರರ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಿದ್ದರು. ಏಪ್ರಿಲ್‌ 2ರಂದು ಕಾಜಲ್ ಹಿಂದೂಸ್ತಾನಿ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉನಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎನ್‌ಕೆ ಗೋಸ್ವಾಮಿ, “ಕೋಮು ಹಿಂಸಾಚಾರ ಮತ್ತು ಗಲಭೆಗೆ ಪ್ರಚೋದಿಸಿದ ಆರೋಪದ ಮೇಲೆ ಕಾಜಲ್ ಹಿಂದೂಸ್ಥಾನಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕಾಜಲ್ ಹಿಂದೂಸ್ಥಾನಿ ಅವರು ಇನ್ನೂ ಪತ್ತೆಯಾಗಿಲ್ಲ. ಆಕೆಯ ನಿವಾಸದಲ್ಲೂ ಹುಡುಕಾಟ ನಡೆಸಿದ್ದೇವೆ” ಎಂದು ಗಿರ್ ಸೋಮನಾಥ್ ಜಿಲ್ಲಾ ಉಸ್ತುವಾರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಪಾಲ್ ಶೇಷ್ಮಾ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮ; ಜನರನ್ನು ಕರೆತರಲು ₹3.90 ಕೋಟಿ ಖರ್ಚು!

“ಭಾನುವಾರ ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಿದಾಗ ದೆಹಲಿ ಇಲ್ಲವೇ ನೋಯ್ಡಾದಲ್ಲಿದ್ದರು. ನಾವು ಅವರನ್ನು ಹುಡುಕಲು ಜಾಮ್‌ನಗರದ ನಿವಾಸಕ್ಕೆ ಹೋಗಿದ್ದೆವು” ಎಂದು ತಿಳಿಸಿದ್ದಾರೆ.

ಕಾಜಲ್ ಹಿಂದೂಸ್ಥಾನಿ ರಾಜಸ್ಥಾನದ ಮೂಲದವರು, ಅವರ ಮೊದಲ ಹೆಸರು ಕಾಜಲ್ ತ್ರಿವೇದಿ. ಅವರು ಎರಡು ದಶಕಗಳ ಹಿಂದೆ ಜಾಮ್‌ನಗರದ ಉದ್ಯಮಿ ಜ್ವಲಂತ್ ಶಿಂಗಾಲ ಅವರನ್ನು ವಿವಾಹವಾಗಿದ್ದರು. ಕಾಜಲ್ ಅವರು ಇತ್ತೀಚಿನ ಕೆಲ ವರ್ಷಗಳಿಂದ ಬಲಪಂಥೀಯ ಕಾರ್ಯಕರ್ತರೆಂದು ಗುರುತಿಸಿಕೊಂಡಿದ್ದರು.

2015-16 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಕಾಜಲ್ ಹಿಂದೂಸ್ಥಾನಿ ಯೂಟ್ಯೂಬ್ ಇತ್ಯಾದಿಗಳಲ್ಲಿ ತಮ್ಮ ವಿಡಿಯೋ ವೀಕ್ಷಣೆಗಳನ್ನು ಹೆಚ್ಚಿಸಿಕೊಂಡಿದ್ದರು. ಕ್ರಮೇಣ, ವಿಎಚ್‌ಪಿ ತನ್ನ ಕಾರ್ಯಕ್ರಮಗಳಿಗೆ ಕಾಜಲ್‌ ಅವರನ್ನು ಆಹ್ವಾನಿಸಿದೆ.

ಕಾಜಲ್ ಹಿಂದೂಸ್ಥಾನಿ ಅವರ ವಿರುದ್ಧ ಎಫ್ಐಆರ್‌ ದಾಖಲಾದ ಬಳಿಕ ವಿಎಚ್‌ಪಿ ಅವರಿಂದ ದೂರ ಸರಿದಿದೆ. ರಾಜ್ಯ ವಕ್ತಾರ ಹಿತೇಂದ್ರ ರಜಪೂತ್ ಮಾತನಾಡಿ, “ರಾಮನವಮಿ ಸಭೆಗೆ ಸಂಘಟನೆಯಿಂದ ಆಹ್ವಾನಿಸಿಲ್ಲ” ಎಂದು ಹೇಳಿದ್ದಾರೆ.

ಕಾಜಲ್ ಹಿಂದೂಸ್ಥಾನಿ ವಿರುದ್ಧ ಇಂತಹದ್ದೇ ಪ್ರಕರಣ 2022ರಲ್ಲಿ ಕರ್ನಾಟಕದ ಉಡುಪಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಆಪಾದಿತ ಗಲಭೆಕೋರರ ವಿರುದ್ಧ ಐಪಿಸಿ ಸೆಕ್ಷನ್ 323, 427, 143, 147, 148 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...