ರಾಜಕಾರಣದಲ್ಲಿ ಧರ್ಮ ಬಳಕೆ ನಿಲ್ಲಿಸಿದರೆ ದ್ವೇಷ ಭಾಷಣಗಳು ಕಡಿಮೆಯಾಗುತ್ತವೆ: ಸುಪ್ರೀಂ ಕೋರ್ಟ್

Date:

  • ಜನರು ಏಕೆ ಈ ವಿಚಾರದಲ್ಲಿ ತಮ್ಮನ್ನು ತಾವು ನಿಗ್ರಹಿಸಿಕೊಳ್ಳಬಾರದು ಎಂದ ನ್ಯಾಯಪೀಠ
  • ಮಾಜಿ ಪ್ರಧಾನಿಗಳ ಸೌಹಾರ್ದಯುತ ಭಾಷಣಗಳ ಬಗ್ಗೆ ತಿಳಿಸಿದ ನ್ಯಾಯಾಲಯ

ರಾಜಕೀಯ ಮತ್ತು ಧರ್ಮಗಳನ್ನು ಬೇರ್ಪಡಿಸಿದರೆ ಮತ್ತು ರಾಜಕಾರಣಿಗಳು ರಾಜಕೀಯದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳು ಕಡಿಮೆಯಾಗುತ್ತವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠವು, ದ್ವೇಷ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ವಿಫಲವಾಗಿರುವ ವಿವಿಧ ರಾಜ್ಯಗಳ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

“ರಾಜಕೀಯ ಮತ್ತು ಧರ್ಮವನ್ನು ಪ್ರತ್ಯೇಕಿಸಿದ ಕ್ಷಣ, ದ್ವೇಷ ಕೊನೆಗೊಳ್ಳುತ್ತದೆ. ರಾಜಕಾರಣಿಗಳು ಧರ್ಮವನ್ನು ಬಳಸುವುದನ್ನು ನಿಲ್ಲಿಸಿದಾಗ, ಇದೆಲ್ಲವೂ ನಿಲ್ಲುತ್ತದೆ ”ಎಂದು ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರು ಏಕೆ ಈ ವಿಚಾರದಲ್ಲಿ ತಮ್ಮನ್ನು ತಾವು ನಿಗ್ರಹಿಸಿಕೊಳ್ಳಬಾರದು. ರಾಜಕಾರಣಿಗಳು ಪ್ರತಿದಿನ ಇತರರನ್ನು ನಿಂದಿಸಲು ಟಿವಿ ಮತ್ತು ಸಾರ್ವಜನಿಕ ವೇದಿಕೆ ಸೇರಿದಂತೆ ಭಾಷಣಗಳನ್ನು ಮಾಡುತ್ತಿರುತ್ತಾರೆ. ಇತರ ನಾಗರಿಕರು ಅಥವಾ ಸಮುದಾಯಗಳನ್ನು ನಿಂದಿಸುವುದಿಲ್ಲ ಎಂದು ಭಾರತದ ಜನರು ಏಕೆ ಪ್ರತಿಜ್ಞೆ ತೆಗೆದುಕೊಳ್ಳಬಾರದು” ಎಂದು ನ್ಯಾಯಪೀಠದ ನೇತೃತ್ವದ ವಹಿಸಿದ್ದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಿರಣ್‌ ರಿಜಿಜು ಹೇಳಿಕೆ ವಿರುದ್ಧ ಸುಪ್ರೀಂಕೋರ್ಟ್‌, ಹೈಕೋರ್ಟ್ ವಕೀಲರಿಂದ ಖಂಡನೆ

ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನೂ ಉಲ್ಲೇಖಿಸಿದ ನ್ಯಾಯಪೀಠ, ಇವರ ಭಾಷಣಗಳನ್ನು ಕೇಳಲು ಜನರು ದೂರದ ಊರುಗಳಿಂದ ಬರುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕೆಂಡಕಾರುವಂತಹ ಭಾಷಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿತು.

ಕೆಲವರು ದ್ವೇಷ ಭಾಷಣಗಳನ್ನು ಮಾಡುವ ಮೂಲಕ ಸಮಾಜದ ಶಾಂತಿ- ಸೌಹಾರ್ದತೆ ಕದಡಲು ಪ್ರಯತ್ನಿಸುತ್ತಿದ್ದಾರೆ. ಜನರು ಇಂಥವುಗಳಿಂದ ತಮ್ಮನ್ನು ತಾವು ನಿಗ್ರಹಿಸಬೇಕು ಎಂದು ನ್ಯಾಯಪೀಠ ಹೇಳಿದೆ.

ಏತನ್ಮಧ್ಯೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಿರ್ದಿಷ್ಟ ಸಮುದಾಯದ ವಿರುದ್ಧ ಕೇರಳದಲ್ಲಿ ಮಾಡಿದ ಅವಹೇಳನಕಾರಿ ಭಾಷಣವನ್ನು ಪ್ರಸ್ತಾಪಿಸಿದರು. ಅರ್ಜಿದಾರರಾದ ಶಾಹೀನ್‌ ಅಬ್ದುಲ್ಲಾ ದ್ವೇಷ ಭಾಷಣಗಳ ಆಯ್ದ ಘಟನೆಗಳನ್ನು ನ್ಯಾಯಾಲಯಕ್ಕೆ ತೋರಿಸಿದ್ದಾರೆ ಎಂದು ತಮ್ಮ ವಾದವನ್ನು ಮಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...