‘ಹಾಥರಸ್ ಕಾಲ್ತುಳಿತ ಆಕಸ್ಮಿಕವಲ್ಲ ಪಿತೂರಿ’ ಎಂದ ಭೋಲೆ ಬಾಬಾ ಪರ ವಕೀಲ!

Date:

ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಸತ್ಸಂಗದಲ್ಲಿ ನಡೆದ ಹಾಥರಸ್ ಕಾಲ್ತುಳಿತ ಪ್ರಕರಣವು ಆಕಸ್ಮಿಕವಲ್ಲ ಪಿತೂರಿಯಾಗಿದೆ ಎಂದು ಭೋಲೆ ಬಾಬಾ ಪರ ವಕೀಲ ಎಪಿ ಸಿಂಗ್ ಹೇಳಿದ್ದಾರೆ.

ಭಾನುವಾರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಎಪಿ ಸಿಂಗ್, “ಜುಲೈ 2ರಂದು ಸತ್ಸಂಗದಲ್ಲಿ 121 ಜನರು ಸಾವಿಗೆ ಕಾರಣವಾದ ಕಾಲ್ತುಳಿತ ಸಂದರ್ಭದಲ್ಲಿ ಕನಿಷ್ಠ 15-16 ಜನರು ತಮ್ಮ ಮುಖವನ್ನು ಮುಚ್ಚಿಕೊಂಡಿದ್ದರು. ಈ ಜನರು ಗುಂಪಿನೆಡೆ ವಿಷಕಾರಿ ಅನಿಲ ಎರಚಿದ್ದಾರೆ. ಬಳಿಕ ಕಾರಿನಲ್ಲಿ ಪರಾರಿಯಾಗಿದ್ದಾರೆ” ಎಂದು ತಿಳಿಸಿದರು.

“ಭೋಲೆ ಬಾಬಾ ಅವರ ಬಂಧನ ಮಾಡಿಸಲು ಪಿತೂರಿ ನಡೆದಿದೆ” ಎಂದ ಎಪಿ ಸಿಂಗ್ ಪೊಲೀಸ್, ಅಗ್ನಿಶಾಮಕ ಮತ್ತು ಸಂಚಾರ ಇಲಾಖೆಗಳಿಂದ ತೆಗೆದುಕೊಂಡ ಅನುಮತಿಯ ರಸೀದಿಗಳನ್ನು ತೋರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಳ್ಳುವಂತೆ ಎಪಿ ಸಿಂಗ್ ಪೊಲೀಸರ ಬಳಿ ಮನವಿ ಮಾಡಿದ್ದು, “ಸಿಸಿಟಿವಿ ದೃಶ್ಯಾವಳಿ ಅಪರಾಧಿಗಳನ್ನು ಬಂಧಿಸುವಲ್ಲಿ ಪ್ರಮುಖ ಅಸ್ತ್ರವಾಗಿದೆ. ಇದು ಆಕಸ್ಮಿಕವಾಗಿ ನಡೆದಿರುವುದಲ್ಲ, ಇದು ಕೊಲೆ” ಎಂದರು.

ಇದನ್ನು ಓದಿದ್ದೀರಾ?   ಹಾಥರಸ್ ಕಾಲ್ತುಳಿತ | ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಯೋಗಿ ಆದಿತ್ಯನಾಥ್‌ಗೆ ರಾಹುಲ್ ಗಾಂಧಿ ಪತ್ರ

ಇದುವರೆಗೆ ಉತ್ತರ ಪ್ರದೇಶ ಪೊಲೀಸರು ಇಬ್ಬರು ಮಹಿಳೆಯರು ಮತ್ತು ಮೂವರು ಹಿರಿಯ ನಾಗರಿಕರು ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಇವರಲ್ಲಿ, ಹಾಥರಸ್ ಸತ್ಸಂಗದ ಪ್ರಮುಖ ಸಂಘಟಕ ದೇವ್ ಪ್ರಕಾಶ್ ಮಧುಕರ್ ಸೇರಿದಂತೆ ಸತ್ಸಂಗದ ಹಲವಾರು ಸೇವಾದಾರರನ್ನು (ಸ್ವಯಂಸೇವಕರು) ಆರೋಪಿಗಳೆಂದು ಉಲ್ಲೇಖಿಸಲಾಗಿದೆ.

ಪೊಲೀಸರ ಪ್ರಕಾರ ಮಧುಕರ್ ಅವರು ನಾರಾಯಣ ಸಾಕರ್‌ ಹರಿ ಕಾರ್ಯಕ್ರಮಗಳಿಗೆ ನಿಧಿಸಂಗ್ರಹಗಾರರಾಗಿ ಕೆಲಸ ಮಾಡಿದ್ದರು, ದೇಣಿಗೆ ಸಂಗ್ರಹಿಸಿದ್ದರು. ಮಧುಕರ್ ಸ್ವತಃ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಎಪಿ ಸಿಂಗ್ ಹೇಳಿದ್ದಾರೆ. ಇನ್ನು ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಕರ್ ಹರಿ ನಾಪತ್ತೆಯಾಗಿದ್ದು, ಎಫ್‌ಐಆರ್‌ನಲ್ಲಿ ಹೆಸರು ಆರೋಪಿ ಎಂದು ಉಲ್ಲೇಖಿಸಿಲ್ಲ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...