ಹತ್ರಾಸ್ ಕಾಲ್ತುಳಿತ ದುರಂತ | ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವು!

Date:

ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸದ್ಯ 121ಕ್ಕೆ ಏರಿಕೆಯಾಗಿದೆ. ಈ ನಡುವೆ ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಟಾಹ್ ಜಿಲ್ಲೆಯ ಅವಘರ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಕಾನ್‌ಸ್ಟೆಬಲ್ ರವಿ ಹತ್ರಾಸ್ ಸತ್ಸಂಗದಲ್ಲಿ ಕಾಲ್ತುಳಿತದಿಂದ ಸಾವನ್ನಪ್ಪಿದ ಜನರ ಮೃತದೇಹಗಳನ್ನು ನೋಡಿದ ಬಳಿಕ ಹೃದಯಾಘಾತಕ್ಕೆ ಒಳಗಾಗಿದ್ದು ಇಟಾಹ್ ವೈದ್ಯಕೀಯ ಕಾಲೇಜಿನಲ್ಲಿ ನಿಧನರಾದರು ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

ರವಿ ಒಂದು ತಿಂಗಳಿನಿಂದ ತನ್ನ ಸಹೋದ್ಯೋಗಿ ಶೇಖರ್ ಪ್ರೇಮಿಯೊಂದಿಗೆ ಕ್ಯೂಆರ್‌ಟಿ ಕರ್ತವ್ಯದ ಮೇರೆಗೆ ಇಟಾಹ್ ನಗರದಲ್ಲಿ ನೆಲೆಸಿದ್ದರು. ಹತ್ರಾಸ್ ಘಟನೆಯ ಬಳಿಕ ತ್ವರಿತವಾಗಿ ಇಟಾಹ್ ವೈದ್ಯಕೀಯ ಕಾಲೇಜಿಗೆ ಹೋಗುವಂತೆ ರವಿ ಅವರಿಗೆ ಸೂಚಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಹತ್ರಾಸ್ ಕಾಲ್ತುಳಿತ ದುರಂತ| ಮೃತರ ಸಂಖ್ಯೆ 121ಕ್ಕೆ ಏರಿಕೆ, ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

ಇಟಾಹ್ ವೈದ್ಯಕೀಯ ಕಾಲೇಜಿಗೆ ಬಂದ ರವಿ ಅವರು ಮೃತ ದೇಹಗಳನ್ನು ನೋಡಿ ತಲೆ ತಿರುಗಿ ಬಿದ್ದಿದ್ದಾರೆ. ಅವರನ್ನು ಬಿಸಿಲಿನ ಧಗೆಗೆ ತಲೆ ತಿರುಗಿರಬಹುದು ಎಂದು ಹವಾನಿಯಂತ್ರಿತ ಕೊಠಡಿಗೆ ಕರೆದೊಯ್ಯುತ್ತಿದ್ದಂತೆ ರವಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮೃತ ಮತ್ತು ಪ್ರಜ್ಞಾಹೀನರಾದ ಸಂತ್ರಸ್ತರನ್ನು ಟ್ರಕ್‌ಗಳು ಮತ್ತು ಟೆಂಪೋಗಳಲ್ಲಿ ಸಿಕಂದರಾವ್ ಟ್ರಾಮಾ ಸೆಂಟರ್‌ಗೆ ಕರೆತರಲಾಗಿತ್ತು. ಆರೋಗ್ಯ ಕೇಂದ್ರದ ಹೊರಗೆ ಜನರು ಜಮಾಯಿಸಿದ್ದ ಕಾರಣ ಮೃತದೇಹಗಳನ್ನು ಎಲ್ಲೆಂದರಲ್ಲಿ ಇರಿಸಲಾಗಿದೆ. ಮಂಜಿನ ಗೆಡ್ಡೆಯ ಮೇಲೆ ಮಲಗಿಸಲಾಗಿದೆ.

ಇನ್ನು ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಈವರೆಗೆ 121ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಅಧಿಕ ಮಂದಿ ಮಹಿಳೆಯರಾಗಿದ್ದು ಮಕ್ಕಳು ಕೂಡ ಸಾವನ್ನಪ್ಪಿದ್ದಾರೆ. ಭೋಲೆ ಬಾಬಾ ಎಂದು ಕರೆಯಲ್ಪಡುವ ಬೋಧಕನ ನೇತೃತ್ವದಲ್ಲಿ ನಡೆಸಿದ ಸತ್ಸಂಗದ ಬಳಿಕ ಈ ಕಾಲ್ತುಳಿತ ಉಂಟಾಗಿದ್ದು ಸದ್ಯ ಬಾಬಾ ನಾಪತ್ತೆಯಾಗಿದ್ದಾರೆ. ಜನರು ಭೋಲೆ ಬಾಬಾ ಪೋಸ್ಟರ್‌ಗಳಿಗೆ ಕಲ್ಲೆಸೆದು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...