‘ಆತ ನನ್ನ ಮಗನೇ ಇರಬಹುದು, ಆತನನ್ನು ಗಲ್ಲಿಗೇರಿಸಿ’: ಅತ್ಯಾಚಾರ ಆರೋಪಿಯ ತಂದೆ

Date:

ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು ಉಜ್ಜಯಿನಿಯಲ್ಲಿ ಬಾಲಕಿಯ ಅತ್ಯಾಚಾರ ಆರೋಪಿಯ ತಂದೆ ಹೇಳಿದ್ದಾರೆ. ಅಲ್ಲದೆ, ತನ್ನ ಮಗನ ಪರವಾಗಿ ನ್ಯಾಯಾಲಯದಲ್ಲಿ ಯಾರೂ ವಾದಿಸಬಾರದು ಎಂದು ಸ್ಥಳೀಯ ವಕೀಲರ ಸಂಘಕ್ಕೆ ಮನವಿ ಮಾಡಿದ್ದಾರೆ.

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯ ಅತ್ಯಾಚಾರ ಎಸಗಿದ ಅಮಾನವೀಯ ಕೃತ್ಯ ನಡೆದಿತ್ತು. ಸಂತ್ರಸ್ತ ಬಾಲಕಿ ಅರೆಬೆತ್ತಲೆಯಾಗಿ ಬೀದಿ-ಬೀದಿಯಲ್ಲಿ ನೆರವು ಕೇಳುತ್ತಿದ್ದಳು. ಆ ಘಟನೆಯು ದೇಶದ ಮನಕಲಕಿತ್ತು. ಆಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆಟೋ ರಿಕ್ಷಾ ಚಾಲಕ ಭರತ್ ಸೋನಿ ಎಂಬಾತನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಭರತ್ ಸೋನಿಯೇ ಅಪರಾಧಿ ಎಂದಿರುವ ಆತನ ತಂದೆ, ‘ತನ್ನ ಮಗನಿಗೆ ಮರಣದಂಡನೆ ವಿಧಿಸಬೇಕು’ ಎಂದಿದ್ದಾರೆ.

“ಇದು ನಾಚಿಕೆಗೇಡಿನ ಕೃತ್ಯ. ನಾನು ಆತನನ್ನು ಭೇಟಿ ಮಾಡಲು ಆಸ್ಪತ್ರೆಗೆ ಹೋಗಿಲ್ಲ. ನಾನು ಪೊಲೀಸ್ ಠಾಣೆ ಅಥವಾ ನ್ಯಾಯಾಲಯಕ್ಕೆ ಹೋಗುವುದಿಲ್ಲ. ನನ್ನ ಮಗ ಅಪರಾಧ ಮಾಡಿದ್ದಾನೆ. ಆದ್ದರಿಂದ ಅವನನ್ನು ಗಲ್ಲಿಗೇರಿಸಬೇಕು” ಎಂದು ಆರೋಪಿ ಭರತ್ ಸೋನಿ ತಂದೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಜ್ಜಯಿನಿ ಬಾರ್ ಕೌನ್ಸಿಲ್ ಅಧ್ಯಕ್ಷ ಅಶೋಕ್ ಯಾದವ್ ಮಾತನಾಡಿ, “ಈ ಘಟನೆಯಿಂದ ದೇವಸ್ಥಾನ ನಗರಿಯ ಪ್ರತಿಷ್ಠೆಗೆ ಧಕ್ಕೆಯಾಗಿದೆ. ಆರೋಪಿ ಪರವಾಗಿ ಪ್ರಕರಣವನ್ನು ಕೈಗೆತ್ತಿಕೊಳ್ಳದಂತೆ ನಮ್ಮ ಸದಸ್ಯರಿಗೆ ಮನವಿ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ತನಿಖೆಗಾಗಿ ಅಪರಾಧ ನಡೆದ ಸ್ಥಳಕ್ಕೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಭರತ್ ಸೋನಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯನ್ನು ಇಂದೋರ್‌ನ ಸರ್ಕಾರಿ ಮಹಾರಾಜ ತುಕೋಜಿರಾವ್ ಹೋಳ್ಕರ್ ಮಹಿಳಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಆಕೆಯನ್ನು ಸಮಾಲೋಚಕರೊಬ್ಬರು ಕೌನ್ಸಲಿಂಗ್ ಮಾಡಿದ್ದು, ಆಕೆ ಸತ್ನಾ ಜಿಲ್ಲೆ ಮೂಲದವಳು ಎಂದು ಗೊತ್ತಾಗಿದೆ. ಆದರೆ, ಆಕೆ ತನ್ನ ಹೆಸರು ಮತ್ತು ವಿಳಾಸವನ್ನು ಸರಿಯಾಗಿ ತಿಳಿಸಿಲ್ಲ ಎಂದು ವರದಿಯಾಗಿದೆ.

ಸತ್ನಾದಲ್ಲಿ ಅದೇ ವಯಸ್ಸಿನ ಬಾಲಕಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಆದರೆ, ಸಂತ್ರಸ್ತೆ ಅದೇ ಹುಡುಗಿಯೇ ಎಂದು ದೃಢಪಡಿಸಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಏತನ್ಮಧ್ಯೆ, ಪ್ರತಿಪಕ್ಷ ಕಾಂಗ್ರೆಸ್ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ‘ಮೌನ’ವನ್ನು ಪ್ರಶ್ನಿಸಿದೆ. “ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಧ್ಯಪ್ರದೇಶ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟಂಬಕ್ಕೊಂದು ಉದ್ಯೋಗ ಎಂದ ಸಿಎಂ ಚೌಹಾಣ್; ಕುತೂಹಲಕಾರಿ ಸಂಗತಿ ಏನು ಗೊತ್ತೇ?

“ಮಧ್ಯಪ್ರದೇಶದಲ್ಲಿ ಮಹಿಳೆಯರು ದಲಿತ, ಬುಡಕಟ್ಟು ಸಮುದಾಯದಲ್ಲಿ ಹುಟ್ಟುವುದೇ ಪಾಪವಾಗಿದೆ. ಅಪ್ರಾಪ್ತರ ಮೇಲಿನ ಅತ್ಯಾಚಾರದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದೆ. ಅವರ (ಚೌಹಾಣ್) ಆಡಳಿತದ 18 ವರ್ಷಗಳಲ್ಲಿ 58,000 ಅತ್ಯಾಚಾರ ಪ್ರಕರಣಗಳು ಮತ್ತು 68,000 ಅಪಹರಣ ಪ್ರಕರಣಗಳು ವರದಿಯಾಗಿವೆ. ಆದರೆ ದೇಶದ ಪ್ರಧಾನಿ, ಗೃಹ ಸಚಿವರು ಮತ್ತು ಬಿಜೆಪಿಯ ಎಲ್ಲಾ ನಾಯಕರು ಸುಮ್ಮನೆ ಕುಳಿತಿದ್ದಾರೆ,” ಎಂದು ಸುಪ್ರಿಯಾ ಕಿಡಿಕಾರಿದ್ದಾರೆ.

ಘಟನೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಮತ್ತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಮೌನವಾಗಿರುವುದನ್ನು ಸುಪ್ರಿಯಾ ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...