ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮುಖ್ಯ ಶಿಕ್ಷಕನ ವಿಕೃತಿ

Date:

ಶಾಲೆಯ ಶೌಚಾಲಯದಲ್ಲಿ ರಕತದ ಕಲೆ ಕಾಣಿಸಿದ ಕಾರಣಕ್ಕೆ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ವಿಕೃತಿ ಮರೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಯಾರು ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ಶಿಕ್ಷಕ ಈ ಕೃತ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಮುಖ್ಯಶಿಕ್ಷಕ ಮತ್ತು ಓರ್ವ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರದಲ್ಲಿರುವ ಖಾಸಗಿ ಶಾಲೆಯಲ್ಲಿ ಮಂಗಳವಾರ ಘಟನೆ ನಡೆದಿದೆ. ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಾಣಿಸಿದ್ದ ಕಾರಣಕ್ಕೆ, ಯಾವ ವಿದ್ಯಾರ್ಥಿನಿ ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿದ್ದಾರೆ. ಮುಟ್ಟಾದವರು ಮತ್ತು ಮುಟ್ಟಾಗದವರನ್ನು ಎರಡು ಗುಂಪುಗಳಾಗಿ ವಿಂಗಡಿಸಿದ್ದರೆ ಎಂದು ಆರೋಪಿಸಲಾಗಿದೆ.

10 ರಿಂದ 12 ವರ್ಷದೊಳಗಿನ ವಿದ್ಯಾರ್ಥಿನಿಯರನ್ನು ಬಟ್ಟೆ ಬಿಚ್ಚಿಸಿ ಪರೀಕ್ಷಿಸುವಂತೆ ಮಹಿಳಾ ಸಿಬ್ಬಂದಿಗೆ ಮುಖ್ಯ ಶಿಕ್ಷಕ ಸೂಚಿಸಿದ್ದರು. ಯಾರು ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ಮಹಿಳಾ ಸಿಬ್ಬಂದಿ ವಿದ್ಯಾರ್ಥಿನಿಯರ ಒಳ ಉಡುಪನ್ನು ಮುಟ್ಟಿ ಪರೀಕ್ಷಿಸಿದ್ದಾರೆ. ಈ ವೇಳೆ, ಓರ್ವ ವಿದ್ಯಾರ್ಥಿನಿ ಸ್ಯಾನಿಟರಿ ಪ್ಯಾಡ್ ಧರಿಸಿದ್ದರು. ಆಕೆಯನ್ನು ಶಿಕ್ಷಕರು ಮತ್ತು ಕೆಲವು ವಿದ್ಯಾರ್ಥಿಗಳು ಅಪಮಾನಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?; ಪತ್ರಕರ್ತನ ಪಯಣ | ಕನ್ನಡ ಪತ್ರಿಕೋದ್ಯಮದ ಅರೆಶತಮಾನದ ನಿಷ್ಠುರ ಕಥನ

ಪ್ರಕರಣ ಸಂಬಂಧ ಮುಖ್ಯಶಿಕ್ಷಕ, ಇಬ್ಬರು ಸಹಾಯಕ ಶಿಕ್ಷಕರು, ಮಹಿಳಾ ಸಿಬ್ಬಂದಿ ಹಾಗೂ ಇಬ್ಬರು ಟ್ರಸ್ಟಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಖ್ಯಶಿಕ್ಷಕ ಮತ್ತು ಮಹಿಳಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ತಿನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಮನಿಸಿ: ಮುಟ್ಟು ಒಂದು ಸಹಜ ಜೈವಿಕ ಪ್ರಕ್ರಿಯೆಯಾಗಿದ್ದರೂ, ಭಾರತದಲ್ಲಿ ಇದನ್ನು ಅಪವಿತ್ರವೆಂದು ಪರಿಗಣಿಸಿ, ಮುಟ್ಟಾದವರನ್ನು ಶೋಷಣೆಗೆ ಒಳಪಡಿಸುವ ಅನಿಷ್ಠ ಆಚರಣೆಗಳು ಇನ್ನೂ ಭಾರತದಲ್ಲಿ ಗಾಢವಾಗಿವೆ. ಈ ಮೂಢನಂಬಿಕೆಗಳಿಂದಾಗಿ ಮಹಿಳೆಯರನ್ನು ಮನೆಯಿಂದ ದೂರವಿಡುವುದು, ದೇವಸ್ಥಾನಕ್ಕೆ ಪ್ರವೇಶ ನಿಷೇಧಿಸುವುದು, ಅಥವಾ ಸಾಮಾಜಿಕ ಕಾರ್ಯಕ್ರಮಗಳಿಂದ ಹೊರಗಿಡುವಂತಹ ತಾರತಮ್ಯದ ನಡವಳಿಕೆಗಳು ನಡೆಯುತ್ತವೆ. ಇದು ಮಹಿಳೆಯರ ಆತ್ಮಗೌರವ, ಶಿಕ್ಷಣ, ಮತ್ತು ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ.ಋತುಸ್ರಾವವನ್ನು ಅಪವಿತ್ರವೆಂದು ಕಾಣದೆ, ಇದನ್ನು ಮಹಿಳೆಯ ಆರೋಗ್ಯ ಮತ್ತು ಶಕ್ತಿಯ ಸಂಕೇತವಾಗಿ ಗೌರವಿಸುವ ಮನೋಭಾವ ಬೆಳೆಸಿದಾಗ ಮಾತ್ರ ಸಮಾಜದಲ್ಲಿ ಸಬಲೀಕರಣ ಸಾಧ್ಯವಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...