ಗುಜರಾತ್‌ ಕಡಲ ತೀರದಲ್ಲಿ ಹೆಚ್ಚಿದ ʼಬಿಪೊರ್‌ಜಾಯ್‌ʼ ಅಬ್ಬರ

Date:

  • ರಾಜ್ಯದ ಕರಾವಳಿಗೂ ತಟ್ಟಲಿದೆ ಚಂಡಮಾರುತದ ಪರಿಣಾಮ
  • ಪೋರ್‌ಬಂದರ್‌ನಲ್ಲಿ ಬಿರುಗಾಳಿ ಸಹಿತ ಮಳೆಗೆ ವ್ಯಕ್ತಿ ಬಲಿ

ಬಿಪೊರ್‌ಜಾಯ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಜೂನ್‌ 15ರ ಹೊತ್ತಿಗೆ ಗುಜರಾತ್‌ನ ಕಚ್‌ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆ ಕರಾವಳಿ ತೀರಕ್ಕೆ ಹೊಂದಿಕೊಂಡಿರುವ ಕಚ್‌ ಜಿಲ್ಲೆ ಮತ್ತ ಸೌರಾಷ್ಟ್ರ ಪ್ರದೇಶಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಪೋರ್‌ಬಂದರ್‌ ಸೇರಿದಂತೆ ಕಚ್‌ ಜಿಲ್ಲೆಯ ಹಲವೆಡೆ ಈಗಾಗಲೇ ಗಾಳಿ ಸಹಿತ ಮಳೆ ಶುರುವಾಗಿದೆ. ಕೆಲವೆಡೆ ದೈತ್ಯ ಮರಗಳು ಧರೆಗುರುಳಿದ್ದು, ಪೋರ್‌ಬಂದರ್‌ನಲ್ಲಿ ಬಿರುಗಾಳಿ-ಮಳೆಗೆ ಮನೆಯ ಗೋಡೆ ಕುಸಿದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆ ಪರಿಸ್ಥಿತಿ ಅವಲೋಕಿಸುವ ಸಲವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಗುಜರಾತ್‌ನ ಮುಖ್ಯಮಂತ್ರಿ ಭೂಪೇಂದ್ರಭಾಯ್‌ ಪಟೇಲ್‌ ಮತ್ತು ಕರಾವಳಿ ತೀರದ ಜಿಲ್ಲೆಗಳ ಸಂಸದರ ಜೊತೆಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಜೊತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಕಚ್‌ ಜಿಲ್ಲೆಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕಚ್‌ ಕಡಲ ತೀರದುದ್ದಕ್ಕೂ ವಾಸಿಸುತ್ತಿರುವ 8 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದ ಕರಾವಳಿಯಲ್ಲೂ ಬಿಪರ್‌ಜಾಯ್‌ ಅಬ್ಬರ

karnataka costal

ರಾಜ್ಯದ ಕರಾವಳಿ ತೀರದಲ್ಲೂ ಬಿಪೊರ್‌ಜಾಯ್‌ ಚಂಡಮಾರುತದ ಭೀತಿ ಹೆಚ್ಚಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಚಂಡಮಾರುತದ ಪರಿಣಾಮ ತಟ್ಟುವ ಸಾಧ್ಯತೆ ಇದೆ. ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸ್ಥಳೀಯ ಆಡಳಿತ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರ ತೀರದಲ್ಲಿ ಕಲ್ಲು ಹಾಕುವ ತುರ್ತು ಕಾಮಗಾರಿಯನ್ನು ಆರಂಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...