ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆ: 16 ಸಾವು, ವಿಪತ್ತು ಪೀಡಿತ ರಾಜ್ಯ ಎಂದು ಘೋಷಣೆ

Date:

ಹಿಮಾಚಲ ಪ್ರದೇಶ ರಾಜ್ಯಾದಾದ್ಯಂತ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಹಾಗೂ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 16 ಜನರು ಮೃತಪಟ್ಟಿರುವ ವರದಿಯಾಗಿದೆ.

ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಹಿಮಾಚಲ ಪ್ರದೇಶದ ಎಲ್ಲ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಹಾನಿಯಿಂದಾಗಿ 3,056 ಕೋಟಿ ರೂಪಾಯಿಯಷ್ಟು ಆಸ್ತಿ ನಷ್ಟ ಉಂಟಾಗಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶವನ್ನು ವಿಪತ್ತು ಪೀಡಿತ ರಾಜ್ಯವೆಂದು ಘೋಷಿಸಿದ್ದಾರೆ.

ಮೇಘಸ್ಫೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತಗಳಿಂದ ಉಂಟಾದ ವಿನಾಶದ ಪ್ರಮಾಣವನ್ನು ಉಲ್ಲೇಖಿಸಿ ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮುಂದಿನ 2 ದಿನಗಳವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರಾ, ಮಂಡಿ, ಸಿರಮೌರ್ ಮತ್ತು ಕಿರ್ ಜಿಲ್ಲೆಗಳಲ್ಲಿ ಬುಧವಾರ (ಇಂದು) ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉನಾ ಮತ್ತು ಬಿಲಾಸ್ಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದೆ.

ಹಿಮಾಚಲ ಪ್ರದೇಶದಲ್ಲಿ 76 ವರ್ಷಗಳಲ್ಲೇ ಈ ಬಾರಿ ಅಧಿಕ ಮಳೆಯಾಗಿದೆ. ಆಗಸ್ಟ್‌ನಲ್ಲಿ 431.3 ಮಿಲಿ ಮೀಟರ್ ಮಳೆಯಾಗಿದೆ ಎಂದು ಶಿಮ್ಲಾ ಹವಾಮಾನ ಇಲಾಖೆ ಹೇಳಿದೆ. ಸಾಮಾನ್ಯವಾಗಿ ಪ್ರತಿವರ್ಷ 256.8 ಮಿ.ಮೀಟರ್ ಮಳೆಯಾಗುತ್ತಿತ್ತು. ಈ ಬಾರಿ 431.3 ಮಿ.ಮೀಟರ್ ಮಳೆಯಾಗಿದ್ದು ಶೇ 68ರಷ್ಟು ಹೆಚ್ಚು ಮಳೆಯಾದಂತಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Himachal Pradesh Flood 3 1

4 ರಾಷ್ಟ್ರೀಯ ಹೆದ್ದಾರಿ ಸೇರಿ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತ

4 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಅವುಗಳಲ್ಲಿ ಮಂಡಿಯಲ್ಲಿ-282, ಶಿಮ್ಲಾದಲ್ಲಿ-255 ,ಚಂಬಾದಲ್ಲಿ 239, ಕುಲ್ಲು 205 ಮತ್ತು ಸಿರಮೌರ್ ಜಿಲ್ಲೆಯ 140 ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 3 (ಮಂಡಿ-ಧರಂಪುರ್ ರಸ್ತೆ), ರಾಷ್ಟ್ರೀಯ ಹೆದ್ದಾರಿ 305 (ಆಸ್ಟ್-ಸೈಂಜ್), ರಾಷ್ಟ್ರೀಯ ಹೆದ್ದಾರಿ 5 (ಹಳೆಯ ಹಿಂದೂಸ್ತಾನ್-ಟಿಬೆಟ್ ರಸ್ತೆ) ಮತ್ತು ರಾಷ್ಟ್ರೀಯ ಹೆದ್ದಾರಿ 707 (ಹಟ್ಟೋಟಿ-ಪೋಂಟಾ) ಗಳಲ್ಲಿಯೂ ಸಂಚಾರ ಸ್ಥಗಿತಗೊಂಡಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ತಿಳಿಸಿದೆ.

ಹಿಮಾಚಲ ಪ್ರದೇಶದಲ್ಲಿ ಜೂನ್ 20 ರಂದು ಮಾನ್ಸೂನ್ ಆರಂಭವಾಗಿದ್ದು, ಅಲ್ಲಿಂದ ಈವರೆಗೆ ರಾಜ್ಯದಲ್ಲಿ 95 ಹಠಾತ್ ಪ್ರವಾಹ, 45 ಮೇಘಸ್ಫೋಟ ಮತ್ತು 121 ಭೂಕುಸಿತ ಸಂಭವಿಸಿವೆ. ಮಳೆ ಸಂಬಂಧಿತ ಅವಘಡ ಹಾಗೂ ರಸ್ತೆ ಅಪಘಾತಗಳಲ್ಲಿ ಕನಿಷ್ಠ 340 ಜನ ಮೃತಪಟ್ಟಿದ್ದಾರೆ. 41 ಮಂದಿ ನಾಪತ್ತೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...