ಜಮ್ಮು ಕಾಶ್ಮೀರ, ಹಿಮಾಚಲದಲ್ಲಿ ಭಾರೀ ಮಳೆ; ಪ್ರವಾಹಕ್ಕೆ 55 ಮಂದಿ ಬಲಿ

Date:

ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ, ಮೇಘಸ್ಪೋಟ, ಭೂಕುಸಿತ ಹಾಗೂ ಪ್ರವಾಹಗಳು ಸಂಭವಿಸಿದ್ದು, ಭಯಾನಕ ಹಾನಿಯನ್ನುಂಟುಮಾಡಿವೆ. ಎರಡೂ ರಾಜ್ಯಗಳ ಬಹುತೇಕ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಜಾರಿಗೊಳಿಸಿದೆ. ಈ ಪ್ರದೇಶಗಳಲ್ಲಿ ಕಳೆದೊಂದು ವಾರದಲ್ಲಿಯೇ 300-500 ಮಿಲಿಮೀಟರ್‌ಗೂ ಹೆಚ್ಚು ಮಳೆ ಸುರಿದಿದೆ.

ಜಮ್ಮು ಪ್ರದೇಶದಲ್ಲಿ 296 ಮಿಲಿಮೀಟರ್ ಮಳೆ ಸುರಿದಿದ್ದು, ತಾವಿ, ಚೇನಬ್, ಜೆಲಮ್ ನದಿಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ನದಿಗಳ ಹರಿವು ಹೆಚ್ಚಾಗಿ, ಪ್ರವಾಹಗಳು ಸಂಭವಿಸಿವೆ. ದೊಡ್ಡ, ಕಥುವಾ, ರೀಸಿ, ಸಂಬಾ, ಉಧಂಪುರ್ ಜಿಲ್ಲೆಗಳು ಅತ್ಯಂತ ಹಾನಿಗೊಳಗಾಗಿವೆ.

ಕಳೆದೊಂದು ವಾರದಲ್ಲಿ, ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ, 34 ಮಂದಿ ವೈಶ್ಣೋ ದೇವಿ ಯಾತ್ರೆಗೆ ತೆರಳಿದ್ದವರು. ಯಾತ್ರಾ ಮಾರ್ಗವಾದ ಅಧ್ಕುವಾರಿ ಬಳಿ ಸಂಭವಿಸಿದ ಭೂಕುಸಿತದಲ್ಲಿ ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಅಲ್ಲದೆ, 14 ಮಂದಿ ಗಾಯಗೊಂಡಿದ್ದರೆ, ಹಲವರು ನಾಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ದೊಡ್ಡ ಜಿಲ್ಲೆಯಲ್ಲಿ ಮೇಘಸ್ಪೋಟದಿಂದ 4 ಮಂದಿ ಸಾವನ್ನಪ್ಪಿದ್ದರೆ, ಕಥುವಾ, ಕಿಷ್ಟ್ವಾರ್ ಜಿಲ್ಲೆಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮನೆಗಳು ಹಾನಿಯಾಗಿವೆ.

ಪ್ರವಾಹದಿಂದಾಗಿ 6,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ನೈಕಿ ತಾವಿ, ಪೀರ್‌ಖೋ, ಮಾರ್ಗಿ ಪ್ರದೇಶಗಳಲ್ಲಿ ಹಲವಾರು ಮನೆಗಳು ಹಾಗೂ ಕೃಷಿ ಬೆಳೆಗಳು ನಾಶವಾಗಿವೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆಯ ಭೀಕರತೆಯಿಂದಾಗಿ ಜಮ್ಮು-ಶ್ರೀನಗರ, ಕಿಷ್ಟ್ವಾರ್-ದೊಡ್ಡ, ಜಮ್ಮು-ಪಠಾಂಕೋಟ್ ರಾಷ್ಟ್ರೀಯ ಹೆದ್ದಾರಿಗಳನ್ನು ಮುಚ್ಚಲಾಗಿದೆ. ಈ ರಸ್ತೆ ಮಾರ್ಗಗಳಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಸೇತುವೆಗಳು ಹಾನಿಯಾಗಿವೆ. 22 ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಜಮ್ಮು ವಿಮಾನ ನಿಲ್ದಾಣವನ್ನೂ ಮುಚ್ಚಲಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ NDRF, SDRF ಹಾಗೂ ಭಾರತೀಯ ಸೇನೆಯ 18 ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಈವರೆಗೆ 5000ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ಹಿಮಾಚಲ ಪ್ರದೇಶದಲ್ಲಿಯೂ ಪರಿಸ್ಥಿತಿ ಗಂಭೀರವಾಗಿದೆ. ಮಳೆ ಅಬ್ಬರಕ್ಕೆ ಮ್ಯಾಂಡಿ, ಕುಲ್ಲು, ಶಿಮ್ಲಾ, ಕಾಂಗ್ರಾ ಜಿಲ್ಲೆಗಳಲ್ಲಿನ ಜನರು ತತ್ತರಿಸಿಹೋಗಿದ್ದಾರೆ. ಕಳೆದ ಒಂದು ವಾರದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಸುಮಾರು 109 ಮಂದಿ ಗಾಯಗೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ಅಂಬಾನಿಯ ವಂತಾರ ಮೃಗಾಲಯದ ಕಾರ್ಯಾಚರಣೆ ತನಿಖೆಗೆ ಎಸ್‌ಐಟಿ ರಚನೆ

ಜೂನ್‌ 20ರಿಂದ ಈವರೆಗೆ ಹಿಮಾಚಲ ಪ್ರದೇಶದಲ್ಲಿ ಮಳೆ ಅನಾಹುತದಿಂದಾಗಿ 310 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಏರುತ್ತಲೇ ಇದೆ. ಪ್ರವಾಸಿಗರ ನೆಚ್ಚಿನ ತಾಣವಾದ ಮನಾಲಿಯಲ್ಲಿ ಬೀಸ್ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕೆಲವರು ಕೊಚ್ಚಿ ಹೋಗಿರುವ ಶಂಕೆ ಇದೆ.

ಮಳೆ ಬಾಧಿತ ಜಿಲ್ಲೆಗಳಲ್ಲಿ ಒಟ್ಟು 1,738 ಮನೆಗಳು ಮತ್ತು 31,000ಕ್ಕೂ ಹೆಚ್ಚು ನಾನಾ ರೀತಿಯ ಕಟ್ಟಡಗಳು ಹಾನಿಗೊಳಗಾಗಿವೆ. 2 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 582 ರಸ್ತೆಗಳಿಗೆ ಭೀಕರ ಹಾನಿಯಾಗಿದೆ. 1,155 ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಗಿತಗೊಳಿಸಲಾಗಿದೆ. 346 ನೀರು ಸರಬರಾಜು ಯೋಜನೆಗಳ ಕೆಲಸಗಳು ನಿಂತುಹೋಗಿವೆ.

ಹಿಮಾಚಲದಲ್ಲಿ ಕಳೆದ ಜೂನ್‌ನಿಂದ ಈವರೆಗೆ 55 ಪ್ರವಾಹಗಳು, 28 ಮೇಘಸ್ಪೋಟಗಳು, 48 ಭೂಕುಸಿತಗಳು ಸಂಭವಿಸಿವೆ. ಪರಿಣಾಮ, 2,450 ಕೋಟಿ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿವೆ. ತ್ವರತಿ ಪರಿಹಾರ ಕ್ರಮಗಳಿಗಾಗಿ 2,000 ಕೋಟಿ ರೂ. ನೆರವಿವಾಗಿ ಕೇಂದ್ರ ಸರ್ಕಾರದ ಬಳಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವೀಂದರ್ ಸಿಂಗ್ ಸುಖು ಅವರು ಬೇಡಿಕೆ ಇಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...