ಮೀರತ್‌ ಹೆಲಿಕಾಪ್ಟರ್ ‘ಕಳ್ಳತನ’ ಆರೋಪ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

Date:

ಉತ್ತರ ಪ್ರದೇಶದ ಮೀರತ್‌ನಲ್ಲಿ ಹೆಲಿಕಾಪ್ಟರ್ ‘ಕಳ್ಳತನ’ವಾಗಿದೆ ಎಂಬ ಆರೋಪವು ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದೆ. ಈ ವಿಚಾರದಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಸ್‌ಎಆರ್ ಏವಿಯೇಷನ್ ​​ಸರ್ವಿಸ್ ಪ್ರೈವೇಟ್ ಲಿಮಿಟೆಡ್‌ನ ಪೈಲಟ್ ರವೀಂದ್ರ ಸಿಂಗ್ ತನ್ನ ಸಂಸ್ಥೆಯ ಹೆಲಿಕಾಪ್ಟರ್ ಕಳ್ಳತನವಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೇ ತಿಂಗಳಲ್ಲಿ ಕೆಲವರು ಟ್ರಕ್‌ನಲ್ಲಿ ಹೆಲಿಕಾಪ್ಟರ್ ಅನ್ನು ವಿವಿಧ ಭಾಗಗಳಾಗಿ ವಿಂಗಡಿಸಿ ತೆಗೆದುಕೊಂಡು ಹೋಗಿದ್ದಾರೆ ಎಂದು ಸಿಂಗ್ ದೂರಿದ್ದಾರೆ. ಹಾಗೆಯೇ ತನ್ನ ಮೇಲೆ ಈ ಆರೋಪಿಗಳು ಹಲ್ಲೆ ಮಾಡಿರುವುದಾಗಿಯೂ ತಿಳಿಸಿದ್ದಾರೆ.

ಈ ಪ್ರಕರಣ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್ ಯಾದವ್, “ಇದುವರೆಗೂ ಉತ್ತರ ಪ್ರದೇಶದ ಕ್ರಿಮಿನಲ್‌ಗಳು ಕೊಲೆ, ದರೋಡೆ, ಡಕಾಯಿತಿ ಮತ್ತು ಅತ್ಯಾಚಾರದ ಮೂಲಕ ಬಿಜೆಪಿಯ ಕಾನೂನು ಸುವ್ಯವಸ್ಥೆಯನ್ನು ಪುಡಿ ಪುಡಿ ಮಾಡುತ್ತಿದ್ದರು. ಈಗ ಮೀರತ್‌ನಲ್ಲಿ ಹೆಲಿಕಾಪ್ಟರ್ ಅನ್ನು ಟ್ರಕ್‌ನಲ್ಲಿ ತೆಗೆದುಕೊಂಡು ಹೋದ ಸುದ್ದಿ ಬಂದಿದೆ. ಇದು ವಿಮಾನ ನಿಲ್ದಾಣದ ಭದ್ರತೆಯ ಪ್ರಶ್ನೆಯೂ ಹೌದು. ಅಲ್ಲಿನ ಸೆಕ್ಯುರಿಟಿ ರಜೆಯಲ್ಲಿದ್ದರಾ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರೀ ಮಳೆ | ಪುಣೆಯಲ್ಲಿ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ

ಇನ್ನು ಪೊಲೀಸರು ಶೀಘ್ರವಾಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಹೆಲಿಕಾಪ್ಟರ್ ಅನ್ನು ಎಸ್‌ಎಆರ್ ಏವಿಯೇಷನ್ ​​ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಮತ್ತೊಂದು ಸಂಸ್ಥೆಗೆ ಮಾರಾಟ ಮಾಡಿದೆ. ಈ ವಿಷಯ ತಿಳಿದಿರದ ಕಾರಣ ಕಳ್ಳತನದ ಬಗ್ಗೆ ಸಿಂಗ್ ದೂರು ನೀಡಿದ್ದಾರೆ ಎಂದು ಸರ್ಕಲ್ ಅಧಿಕಾರಿ ಅಂತರಿಕ್ಷ್ ಜೈನ್ ಹೇಳಿಕೊಂಡಿದ್ದಾರೆ.

ಇದು ಕಳ್ಳತನವಲ್ಲ, ಇಬ್ಬರು ಪಾಲುದಾರರ ನಡುವಿನ ವಿವಾದವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಹಾಗೆಯೇ ತನ್ನ ಮೇಲೆ ಹಲ್ಲೆ ನಡೆದಿದೆ ಎಂಬ ಪೈಲಟ್ ರವೀಂದ್ರ ಸಿಂಗ್ ಆರೋಪ ಸಾಬೀತಾಗಿಲ್ಲ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...