‘ಅವರು ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ವಿಚಿತ್ರವಾಗಿ ವರ್ತಿಸುತ್ತಾರೆ, ಅದಕ್ಕಾಗಿ ಅಮಾನತುಗೊಳಿಸಲಾಗಿದೆ’ ಇದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಮಂಗಳವಾರ ನೂರಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿದ್ದಕ್ಕೆ ನೀಡಿದ ಕಾರಣ.
ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಮಥುರಾ ಕ್ಷೇತ್ರದ ಸಂಸದೆ, ಸಂಸತ್ತನ್ನು ಅಡ್ಡಿಪಡಿಸುವುದು ಮತ್ತು ಮೋದಿ ಸರ್ಕಾರವನ್ನು ಬೇರುಸಹಿತ ಕಿತ್ತೊಗೆಯುವುದು ಪ್ರತಿಪಕ್ಷಗಳ ಏಕೈಕ ಗುರಿಯಾಗಿದೆ ಎಂದು ಹೇಳಿದರು.
“ಅಮಾನತು ಎಂದರೆ ಅವರು ಏನಾದರೂ ತಪ್ಪು ಮಾಡಿದ್ದಾರೆ” ಎಂದು ಮೂರನೇ ಎರಡರಷ್ಟು ಸಂಸದರನ್ನು ಅಮಾನತುಗೊಳಿಸಿರುವುದನ್ನು ಸಮರ್ಥಿಸಿಕೊಂಡರು.
“ಅವರನ್ನು ಅಮಾನತು ಮಾಡಿದ್ದರೆ ಅವರು ತಪ್ಪು ಮಾಡಿದ್ದಾರೆ ಎಂದರ್ಥ. ಸಂಸತ್ತಿನ ನಿಯಮಗಳ ಪ್ರಕಾರ ಕೆಲಸ ಮಾಡಬೇಕು. ಅವರು ಅದನ್ನು ಮಾಡದಿದ್ದ ಕಾರಣ ಅಮಾನತುಗೊಳಿಸಲಾಗಿದೆ. ಅದರಲ್ಲಿ ಯಾವುದೇ ತಪ್ಪಿಲ್ಲ, ಇದು ಸರಿಯಾದ ಕ್ರಮ” ಎಂದು ಹೇಮಾ ಮಾಲಿನಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ
“ಹೇಗಾದರೂ ಮಾಡಿ ಸಂಸತ್ತನ್ನು ಕಾರ್ಯನಿರ್ವಹಿಸದಂತೆ ಮಾಡುವುದು ಪ್ರತಿಪಕ್ಷದವರ ಗುರಿಯಾಗಿದೆ. ಮೋದಿಯವರು ಹಗಲಿರುಳು ಶ್ರಮಿಸುತ್ತಿದ್ದಾರೆ, ಆದರೆ ಅವರನ್ನು ಸೋಲಿಸುವ ವಿಪಕ್ಷಗಳ ಗುರಿ ಯಶಸ್ವಿಯಾಗುವುದಿಲ್ಲ” ಎಂದು ಹೇಮಾ ಮಾಲಿನಿ ಹೇಳಿದರು.
ಲೋಕಸಭೆ ಮತ್ತು ರಾಜ್ಯಸಭೆಯ 141 ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ ನಂತರ ಅವರು ನಟಿ ಕಂ ರಾಜಕಾರಣಿ ಈ ಹೇಳಿಕೆ ನೀಡಿದ್ದಾರೆ.
141 ಸಂಸದರ ಅಮಾನತು ವಿರೋಧಿಸಿ ಇದೇ ಶುಕ್ರವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ವಿಪಕ್ಷಗಳ ಮೈತ್ರಿಕೂಟ ನಿರ್ಧರಿಸಿದೆ.





