ಮೂರನೇ ಬಾರಿಗೆ ಹಾಗೂ ಜಾರ್ಖಂಡ್ನ 13ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಂಚಿಯ ರಾಜಭವನದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೇನ್ ಅವರಿಗೆ ಪ್ರಮಾಣ ವಚನ ಬೊಧಿಸಿದರು.
ಹೇಮಂತ್ ಸೊರೇನ್ ತಂದೆ ಶಿಬು ಸೊರೇನ್, ಅವರ ತಾಯಿ ರೂಪಿ ಸೊರೇನ್, ಪತ್ನಿ ಕಲ್ಪನಾ ಸೊರೇನ್ ಹಾಗೂ ಜೆಎಂಎಂನ ಹಿರಿಯ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಚಂಪೈ ಸೊರೇನ್ ಅವರು ಕೂಡ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಮಳೆ ಹೊಯ್ಯುತಿದೆ, ಡೆಂಘೀ ಹರಡುತಿದೆ- ಆರೋಗ್ಯ ಇಲಾಖೆ ಏನು ಮಾಡುತ್ತಿದೆ?
ಭೂ ಹಗರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಐದು ತಿಂಗಳ ಹಿಂದಷ್ಟೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಚಂಪೈ ಸೊರೇನ್, ಹೇಮಂತ್ ಸೊರೇನ್ ಅವರಿಗೆ ಸಿಎಂ ಆಗಲು ಪುನಃ ಅವಕಾಶ ನೀಡಿದ್ದಾರೆ.
ಭೂ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಜನವರಿಯಲ್ಲಿ ಬಂಧನಕ್ಕೊಳಗಾಗಿದ್ದರು. ಬಂಧನಕ್ಕೊಳಗಾಗುವ ಮುನ್ನ ಸಿಎಂ ಹುದ್ದೆಗೆ ಹೇಮಂತ್ ರಾಜೀನಾಮೆ ನೀಡಿದ್ದರು. ಜಾರ್ಖಂಡ್ ಹೈಕೋರ್ಟ್ ಜೂನ್ 28 ರಂದು ಹೇಮಂತ್ ಸೊರೇನ್ ಅವರಿಗೆ ಜಾಮೀನು ನೀಡಿತ್ತು.
ಪ್ರಕರಣದ ಒಟ್ಟಾರೆ ದೃಷ್ಟಿಕೋನದಲ್ಲಿ ನಿರ್ದಿಷ್ಟವಾಗಿ ಅಥವಾ ಪರೋಕ್ಷವಾಗಿ ಆರೋಪಿಯಾಗಿರುವವರು ಭೂಹಗರಣದಲ್ಲಿ ಭಾಗಿಯಾಗಿರುವಂತೆ ಕಂಡುಬಂದಿಲ್ಲ ಎಂದು ನ್ಯಾಯಾಧೀಶರು ಜಾಮೀನು ನೀಡುವ ಸಂದರ್ಭದಲ್ಲಿ ತಿಳಿಸಿದ್ದರು.





