4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಹೇಮಂತ್ ಪ್ರಮಾಣವಚನ; ಯಾರು ಈ ಸೊರೇನ್?

Date:

ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜಾರ್ಖಂಡ್‌ನಲ್ಲಿ ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಿಜೆಪಿಯ ದಬ್ಬಾಳಿಕೆ, ಬಂಧನ, ಜೈಲಿಗೆ ಬಗ್ಗದೆ, ಎಲ್ಲವನ್ನೂ ಮೆಟ್ಟಿನಿಂತ ನಾಯಕನಾಗಿ ದೇಶದ ಚಿತ್ತ ಸೆಳೆದಿದ್ದಾರೆ.

ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಬಲಿಷ್ಠ ನಾಯಕನಾಗಿರುವ ಸೊರೇನ್ ತಮ್ಮ ರಾಜಕೀಯ ಆರಂಭಿಸಿದ್ದು 2009ರಲ್ಲಿ. ಆ ವರ್ಷದ ಜೂನ್‌ನಲ್ಲಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ಸೊರೇನ್, 2010ರ ಜನವರಿಯಲ್ಲಿ ಜಾರ್ಖಂಡ್‌ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ವಿಧಾನಸಭೆ ಪ್ರವೇಶಿಸಿದರು. ವಿಧಾನಸಭೆ ಪ್ರವೇಶಿಸುತ್ತಿದ್ದಂತೆಯೇ, ಬಿಜೆಪಿ-ಜೆಎಂಎಂ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಂಡರು. ಆದರೆ, 2013ರಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ತೊರೆದರು. ಯಾವುದೇ ಪಕ್ಷಕ್ಕೆ ಬಹುಮತವಿಲ್ಲದ ಕಾರಣ ರಾಷ್ಟ್ರಪತಿ ಆಳ್ವಿಕೆ ಹೇರಲಾಯಿತು.

ಅಂತಿಮವಾಗಿ, 2013ರ ಜುಲೈನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ಜೊತೆ ಮೈತ್ರಿ ಮಾಡಿಕೊಂಡ ಸೊರೇನ್ ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಗೇರಿದರು. ಆದಾಗ್ಯೂ, 2024ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಿತು. ಆಗ ವಿರೋಧ ಪಕ್ಷದ ನಾಯಕನಾಗಿ ವಿಪಕ್ಷಗಳನ್ನು ಸೊರೇನ್ ಮುನ್ನಡೆಸಿದರು. 2019ರಲ್ಲಿ ಬಿಜೆಪಿಯನ್ನು ಮಣಿಸಿ, ಜೆಎಂಎಂ ಮೈತ್ರಿಯನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಮನಾರ್ಹವಾಗಿ, ಇದೇ ವರ್ಷದ ಫೆಬ್ರವರಿ 1ರಂದು ಸೊರೇನ್ ಅವರನ್ನು ಭೂಹಗರಣ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತು. ಸೊರೇನ್ ಮುಖ್ಯಮಂತ್ರಿ ಸ್ಥಾನಕ್ಕೆ ಜನವರಿ 31ರಂದು ರಾಜೀನಾಮೆಯನ್ನೂ ನೀಡಿದ್ದರು. ಅದಾದ ಮೂರೇ ತಿಂಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನೂ ಇಡಿ ಬಂಧಿಸಿತು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿಪಕ್ಷಗಳ ಪ್ರಬಲ ನಾಯಕರನ್ನು ಹಣಿಯುವ ಉದ್ದೇಶದಿಂದಲೇ ಸೊರೇನ್ ಮತ್ತು ಕೇಜ್ರಿವಾಲ್‌ ಅವರನ್ನು ಬಂಧಿಸಿದೆ ಎಂಬ ಆಕ್ರೋಶ, ಆರೋಪಗಳು ವ್ಯಕ್ತವಾದವು.

ಇದೆಲ್ಲದರ ನಡುವೆ, ಜೂನ್ 28ರಂದು ಜಾಮೀನು ಪಡೆದ ಹೊರಬಂದ ಹೇಮತ್ ಸೊರೇನ್, ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ತಮ್ಮ ವಿರುದ್ಧ ಹೊಂಚು ಹಾಕಿದ್ದ, ತಂತ್ರಗಳನ್ನು ಹೆಣೆದು ಜೈಲಿಗೆ ಕಳಿಸಿದ ಬಿಜೆಪಿಯನ್ನು 2024ರ ಚುನಾವಣೆಯಲ್ಲಿಯೂ ಅಧಿಕಾರದಿಂದ ದೂರವಿಟ್ಟು, ತಮ್ಮ ಮೈತ್ರಿಕೂಟವನ್ನು ಅಧಿಕಾರದಲ್ಲಿ ಮುಂದುವರೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯೂ ಆಗಿದ್ದಾರೆ.

ಸೊರೇನ್ ರಾಜಕೀಯ ಹೆಜ್ಜೆಗುರುತು

2009 – ರಾಜ್ಯಸಭಾ ಸದಸ್ಯರಾಗಿ ರಾಜಕೀಯ ಪಾದಾರ್ಪಣೆ (2009ರ ಜೂನ್ 24ರಿಂದ 2010ರ ಜನವರಿ 4ವರೆಗೆ ರಾಜ್ಯಸಭಾ ಸದಸ್ಯ)

2010 – ಶಾಸಕರಾಗಿ ಆಯ್ಕೆಯಾಗಿ ಜಾರ್ಖಂಡ್‌ ವಿಧಾನಸಭೆ ಪ್ರವೇಶ. 2010ರ ಸೆಪ್ಟೆಂಬರ್‌ನಿಂದ 2013ರ ಜನವರಿ 8ರವೆಗೆ ಉಪಮುಖ್ಯಮಂತ್ರಿ

2013- ಜೆಎಂಎಂ-ಆರ್‌ಜೆಡಿ-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ

2014- ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ – ದುಮ್ಕಾ ಕ್ಷೇತ್ರದಲ್ಲಿ ಸೋಲು, ಬರ್ಹೈತ್‌ ಕ್ಷೇತ್ರದಲ್ಲಿ ಗೆಲುವು. ವಿಪಕ್ಷ ನಾಯಕನಾಗಿ ಆಯ್ಕೆ

2019- ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ದುಮ್ಕಾ ಮತ್ತು ಬರ್ಹೈತ್ ಎರಡೂ ಕ್ಷೇತ್ರಗಳಲ್ಲೂ ಸೊರೇನ್ ಗೆಲುವು. ಕಾಂಗ್ರೆಸ್‌-ಜೆಎಂಎಂ-ಆರ್‌ಜೆಡಿ ಮೈತ್ರಿ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ

2024- ಭೂ ಹಗರಣ ಆರೋಪದಲ್ಲಿ ಇಡಿಯಿಂದ ಬಂಧನ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ, 147 ದಿನಗಳ ಜೈಲುವಾಸ. ಜಾಮೀನು ಮೇಲೆ ಬಿಡುಗಡೆ, 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.

2024ರ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ ಮೈತ್ರಿಗೆ ಬಹುಮತ – ನಾಲ್ಕನೇ ಬಾರಿಗೆ ಸೊರೇನ್ ಮುಖ್ಯಮಂತ್ರಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...