ಇಶಾ ಫೌಂಡೇಶನ್ ಅಕ್ರಮಗಳ ತನಿಖೆಗೆ ಹೈಕೋರ್ಟ್‌ ಆದೇಶ

Date:

ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಕೊಯಮತ್ತೂರಿನಲ್ಲಿ ಕ್ಯಾಂಪಸ್‌ ನಿರ್ಮಾಣ ಮಾಡಲು ಅಗತ್ಯ ಅನುಮತಿಗಳನ್ನು ಪಡೆದಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸಬೇಕು. ಅಕ್ರಮಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ಮದ್ರಾಸ್ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಬುಡಕಟ್ಟು ಸಂಘಟನೆಯೊಂದು ಆರು ವರ್ಷಗಳ ಹಿಂದೆ ಇಶಾ ಫೌಂಡೇಶನ್‌ ಕ್ಯಾಂಪಸ್‌ ನಿರ್ಮಾಣದ ವಿರುದ್ಧ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿರುವ ಮದ್ರಾಸ್‌ ಹೈಕೋರ್ಟ್‌ ಇದೀಗ ತನಿಖೆಗೆ ಆದೇಶ ನೀಡಿದೆ.

ಕೊಯಮತ್ತೂರಿನ ಇಕ್ಕರೈ ಬೊಳುವಂಪಟ್ಟಿಯಲ್ಲಿ ಇಶಾ ಫೌಂಡೇಶನ್‌ನ 150 ಎಕರೆ ಕ್ಯಾಂಪಸ್ ನಿರ್ಮಾಣ ಮಾಡಿತ್ತು. ಅಲ್ಲದೆ, 112 ಅಡಿ ಆದಿಯೋಗಿ ಪ್ರತಿಮೆಯನ್ನೂ ನಿರ್ಮಿಸಿತ್ತು. ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈ ನಿರ್ಮಾಣ ಕೆಲಸಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯ ಉಪ ನಿರ್ದೇಶಕ ಆರ್ ಸೆಲ್ವರಾಜ್ ಅವರು ತಮ್ಮ ಇಲಾಖೆಯ ಅನುಮೋದನೆಯಿಲ್ಲದೆ ಕ್ಯಾಂಪಸ್ ನಿರ್ಮಿಸಲಾಗಿದೆ ಎಂದು ಖಚಿತಪಡಿಸಿದ್ದರು.

ಇಶಾ ಫೌಂಡೇಶನ್‌ ಬಳಿ ಇಲ್ಲ ಯಾವುದೇ ಎನ್‌ಒಸಿ ದಾಖಲೆ

ಪಟ್ಟಣ ಮತ್ತು ಗ್ರಾಮಾಂತರ ಯೋಜನೆಯ ಜಂಟಿ ನಿರ್ದೇಶಕ ತಿರು ಆರ್ ರಾಜಗುರು ಅವರು ಸಲ್ಲಿಸಿದ ವರದಿಯನ್ನು ಆಗಸ್ಟ್‌ 18ರಂದು ಮದ್ರಾಸ್ ಹೈಕೋರ್ಟ್ ಗಮನಿಸಿದೆ. ಇಶಾ ಫೌಂಡೇಶನ್ ಕ್ಯಾಂಪಸ್‌ ನಿರ್ಮಾಣಕ್ಕೆ ಅನುಮತಿ ಕೋರಿಲ್ಲ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರವನ್ನೂ ಪಡೆದಿಲ್ಲ ಎಂದು ವರದಿ ತಿಳಿಸಿದೆ. ನಂತರ ಮುಖ್ಯ ನ್ಯಾಯಮೂರ್ತಿ ಎಸ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿ ಡಿ ಆದಿಕೇಶವುಲು ಅವರ ಪೀಠ ತನಿಖೆಗೆ ಆದೇಶಿಸಿದೆ.

ವರದಿಯಲ್ಲಿ 15.53 ಎಕರೆ ನಂಜೈ ಭೂಮಿ (ಜೌಗು ಪ್ರದೇಶ) ಮತ್ತು 5.275 ಹೆಕ್ಟೇರ್ ಪುಂಜೈ (ಒಣ ಭೂಮಿ) ಸೇರಿದಂತೆ 20.805 ಹೆಕ್ಟೇರ್ ಭೂಮಿ ಇಶಾ ಫೌಡೇಷನ್ ವಶದಲ್ಲಿದೆ ಎಂದು ಉಲ್ಲೇಖಿಸಲಾಗಿದೆ. “ಇಲ್ಲಿ ಧಾರ್ಮಿಕ ಕಟ್ಟಡಕ್ಕೆ ನಿರ್ಮಾಣ ಕೆಲಸಗಳನ್ನು ಮಾಡಲು ಜಿಲ್ಲಾಧಿಕಾರಿಯಿಂದ ಎನ್‌ಒಸಿ ಪಡೆದಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ಎನ್‌ಒಸಿ, ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರ ಎನ್‌ಒಸಿ, ಅಗ್ನಿಶಾಮಕ ಇಲಾಖೆ ಎನ್‌ಒಸಿ ನೀಡಿಲ್ಲ. ಅಲ್ಲದೆ, ಇಕ್ಕರೈ ಬೊಳುವಂಪಟ್ಟಿ ಪಂಚಾಯಿತಿಯಲ್ಲಿಯೂ ದಾಖಲೆ ಪರಿಶೀಲಿಸಿದಾಗ, ಪಂಚಾಯಿತಿ ಅಧ್ಯಕ್ಷರಿಂದಲೂ ಯಾವುದೇ ಅನುಮತಿ ಪಡೆಯಲಾಗಿಲ್ಲ ಎಂಬುದು ತಿಳಿದುಬಂದಿದೆ” ಎಂದು ವರದಿ ವಿವರಿಸಿದೆ.

ವೆಲ್ಲಿಯಂಗಿರಿ ಹಿಲ್ಸ್ ಟ್ರೈಬಲ್ ಪ್ರೊಟೆಕ್ಷನ್ ಸೊಸೈಟಿಯ ಪರವಾಗಿ ವಾದ ಮಂಡಿಸಿದ ವಕೀಲ ಎಂ ಪುರಶೋತ್ತಮನ್, “2010ರ ಗಜ ವರದಿ (ಆನೆ ಕಾರ್ಯ ಸಮಿತಿ ವರದಿ) ಪ್ರಕಾರ ಇಕ್ಕರೈ ಬೊಳುವಂಪಟ್ಟಿಯು ಆನೆಗಳ ಆವಾಸಸ್ಥಾನವಾಗಿತ್ತು. ಅಲ್ಲಿ ಗಿರಿ ಜನರು ವಾಸಿಸುತ್ತಿದ್ದರು. ಅದು ನೊಯ್ಯಲ್ ನದಿಯ ಜಲಾನಯನ ಪ್ರದೇಶವೂ ಹೌದು. ಈ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಇಶಾ ಫೌಡೇಂಶನ್‌ ಭೂಮಿಯ ಸ್ವರೂಪವನ್ನೇ ಪರಿವರ್ತಿಸಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣ ಕೆಲಸಗಳನ್ನು ಮಾಡಿದೆ. ಇದು ಕಾನೂನುಬಾಹಿರವಾಗಿದೆ” ಎಂದು ಹೇಳಿದ್ದಾರೆ.

ವರದಿ ಮತ್ತು ವಾದವನ್ನು ಆಲಿಸಿದ ನ್ಯಾಯಾಲಯ, “ಪಟ್ಟಣ ಮತ್ತು ಗ್ರಾಮ ಯೋಜನೆಯ ಜಿಲ್ಲಾ ಜಂಟಿ ನಿರ್ದೇಶಕರು, ಅರ್ಜಿದಾರರು ಇಶಾ ಫೌಂಡೇಶನ್‌ ಸಲ್ಲಿಸಬಹುದಾದ ದಾಖಲೆಗಳು, ಅನುಮತಿ ದಾಖಲೆಗಳನ್ನು ಪರಿಶೀಲಿಸಬೇಕು. ಅವುಗಳು ಕ್ರಮ ಬದ್ದವಾಗಿಲ್ಲದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಬೇಕು” ಎಂದು ನಿರ್ದೇಶಿಸಿದೆ.

ಇಶಾ ಫೌಂಡೇಶನ್‌ನ ಕ್ಯಾಂಪಸ್‌ ವಿರುದ್ಧ ವೆಲ್ಲಿಯಂಗಿರಿ ಹಿಲ್ ಟ್ರೈಬಲ್ ಪ್ರೊಟೆಕ್ಷನ್ ಸೊಸೈಟಿಯ ಪಿ ಮುತ್ತಮ್ಮಾಳ್ ಅವರು 2017ರಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. “ಅರ್ಜಿ ಸಲ್ಲಿಸಿದ್ದಕ್ಕಾಗಿ ನಮಗೆ ಕೆಲವರು ಕಿರುಕುಳ ನೀಡಿದ್ದಾರೆ” ಎಂದು ಮುತ್ತಮ್ಮಾಳ್ ಹೇಳಿಕೊಂಡಿದ್ದಾರೆ. ಅಲ್ಲದೆ, ಅರ್ಜಿ ಸಲ್ಲಿಸಿದ ಬಳಿಕ ಅವರು ಇಕ್ಕರೈ ಬೊಳುವಂಪಟ್ಟಿಯ ಮುತ್ತತ್ತು ಅಯಾಲ್‌ನಲ್ಲಿದ್ದ ತಮ್ಮ ನಿವಾಸವನ್ನು ತೊರೆದು ಬೇರೆಡೆ ಬದುಕುತ್ತಿದ್ದಾರೆ.

“ಕ್ರಮ ಕೈಗೊಳ್ಳುವುದು ಸರ್ಕಾರದ ಕೆಲಸ. ಸರ್ಕಾರವು ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕು. ಅರಣ್ಯ, ವನ್ಯಜೀವಿ ಮತ್ತು ಬುಡಕಟ್ಟು ಜನರಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು ಮುತ್ತಮ್ಮಾಳ್ ಆಗ್ರಹಸಿದ್ದಾರೆ ಎಂದು ನ್ಯೂಸ್‌ಲ್ಯಾಂಡ್ರಿ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...