ಹಿಜಾಬ್ ವಿವಾದ | ಕೇರಳದ ಶಾಲೆಗೆ ಎರಡು ದಿನ ರಜೆ ಘೋಷಣೆ

Date:

ತರಗತಿಯಲ್ಲಿ ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರು ಅನುಮತಿ ಕೆಳಿದ್ದರಿಂದ ವಿವಾದ ಸೃಷ್ಟಿಯಾಗಿದೆ ಎಂದು ಹೇಳಿಕೊಂಡಿರುವ ಕೇರಳದ ಶಾಲೆಯೊಂದು ಎರಡು ದಿನ ರಜೆ ಘೋಷಿಸಿದೆ. ಶಿಕ್ಷಕರು ಮತ್ತು ಸಿಬ್ಬಂದಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿ ರಜೆ ತೆಗೆದುಕೊಂಡಿದ್ದಾರೆ. ಆದ್ದರಿಂದ, ಇಡೀ ಶಾಲೆಗೆ ಘೋಷಿಸಲಾಗಿದೆ ಎಂದು ಶಾಲೆಯ ಆಡಳಿತ ಮಂಡಳಿ ಹೇಳಿಕೊಂಡಿದೆ.

ಘಟನೆಯು ಕೇರಳದ ಎರ್ನಾಕುಲಂ ಜಿಲ್ಲೆಯ ಪಲ್ಲೂರುತಿನಲ್ಲಿರುವ ಸೇಂಟ್ ರೀಟಾ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ. ಈ ಶಾಲೆ ಲ್ಯಾಟಿನ್ ಕ್ಯಾಥೋಲಿಕ್ ಚರ್ಚ್ ಆಡಳಿತದಲ್ಲಿದೆ. ಸಿಬಿಎಸ್‌ಇ ಮಾನ್ಯತೆಯನ್ನೂ ಪಡೆದಿದೆ.

ಶಾಲೆಯಿಂದ ಅನುಮತಿಸಲಾಗದ ಉಡುಪಿನಲ್ಲಿ ವಿದ್ಯಾರ್ಥಿಯರು ಶಾಲೆಗೆ ಬಂದಿದ್ದರಿಂದ ವಿವಾದ ಸೃಷ್ಟಿಯಾಗಿದೆ. ವಿವಾದ ಪರಿಸ್ಥಿತಿಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇವೆಂದು ಶಿಕ್ಷಕರು ಮತ್ತು ಸಿಬ್ಬಂದಿಗಳು ರಜೆ ತೆತೆದುಕೊಂಡಿದ್ದಾರೆ. ಹೀಗಾಗಿ, ಪರಿಸ್ಥಿತಿ ತಿಳಿಗೊಂಡು, ಎಲ್ಲರೂ ಶಾಲೆಗೆ ಮರಳಬೇಕು. ಆದ್ದರಿಂದ, ಎರಡು ದಿನಗಳ ಕಾಲ ಶಾಲೆಗೆ ರಜೆ ನೀಡಲಾಗಿದೆ ಎಂದು ಶಾಲೆಯ ಪ್ರಾಂಶುಪಾಲೆ ಸಿಸ್ಟರ್ ಹೆಲೀನಾ ಆಲ್ಬಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲಗಳ ಪ್ರಕಾರ, ಓರ್ವ ವಿದ್ಯಾರ್ಥಿನಿಯ ಪೋಷಕರು ತಮ್ಮ ಮಗಳಿಗೆ ಹಿಜಾಬ್ ಧರಿಸಲು ಅನುಮತಿಸುವಂತೆ ಶಾಲೆಯ ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಆದರೆ, ತನ್ನ ಸಮವಸ್ತ್ರ ನೀತಿಯಲ್ಲಿ ಯಾವುದೇ ಧಾರ್ಮಿಕ ಉಡುಪು ಅಥವಾ ಚಿಹ್ನೆಗಳನ್ನು ಅನುಮತಿಸುವುದಿಲ್ಲ ಎಂದು ಶಾಲೆ ಸ್ಪಷ್ಟಪಡಿಸಿತ್ತು. ಶಾಲೆಯ ನಿರಾಕರಣೆಯಿಂದಾಗಿ ವಿದ್ಯಾಥಿನಿಯ ತಂದೆ ಮತ್ತು ಇತರ 6 ಮಂದಿ ಶಾಲೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಪಲ್ಲೂರುತಿ ಪೊಲೀಸರಿಗೆ ದೂರು ಸಲ್ಲಿಸಿದ್ದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ವಿದ್ಯಾರ್ಥಿನಿಯ ಪೋಷಕರ ನಡೆ ಪ್ರಚೋದನಕಾರಿ ಮತ್ತು ಅಪಾಯಕಾರಿ ಸ್ವರೂಪದ್ದಾಗಿತ್ತು ಎಂದು ಶಾಲೆಯ ಶಿಕ್ಷಕರು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ‘ಅನ್ನಭಾಗ್ಯ’ ಯೋಜನೆಯಲ್ಲಿ ‘ಇಂದಿರಾ ಕಿಟ್‌’; ಪೌಷ್ಠಿಕ ಆಹಾರ ಪೂರೈಕೆಗೆ ಹೊಸ ಮೈಲಿಗಲ್ಲು

ಘಟನೆಯು ವಿವಾದಕ್ಕೆ ತಿರುಗಿದ್ದರಿಂದ, ಶಾಲೆಯ ಆಡಳಿತ ಮಂಡಳಿಯು ಹೈಕೋರ್ಟ್‌ ಮೆಟ್ಟಿಲೇರಿತ್ತು. ತುರ್ತು ವಿಚಾರಣೆ ನಡೆಸಿರುವ ನ್ಯಾಯಾಲಯವು, ‘ಶಾಲೆಗೆ ಪೊಲೀಸ್ ರಕ್ಷಣೆ ನೀಡಬೇಕು’ ಎಂದು ಆದೇಶಿಸಿದೆ.

ಘಟನೆಯ ವಿವರ

ಇತ್ತೀಚೆಗೆ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ತರಗಿತಿಯಲ್ಲಿ ಹಿಜಾಬ್ ಧರಿಸಲು ಪ್ರಾರಂಭಿಸಿದ್ದರು. ವಿದ್ಯಾರ್ಥಿನಿಯ ವಸ್ತ್ರವು ಶಾಲೆಯ ಡೈರಿಯಲ್ಲಿರುವ 30ರಿಂದ 33ನೇ ವಿಧಿಯ ಪ್ರಕಾರ ಸಮವಸ್ತ್ರ ನೀತಿ ಉಲ್ಲಂಘನೆ ಎಂದು ಪರಿಗಣಿಸಿತ್ತು. ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿತ್ತು. ಅಲ್ಲದೆ, ವಿದ್ಯಾರ್ಥಿನಿಯ ಪೋಷಕರಿಂದ ಶಾಲೆಯು ವಿವರಣೆ ಕೇಳಿತ್ತು.

ಶಾಲೆಯ ನಡೆಗೆ ವಿರೋಧ ವ್ಯಕ್ತಪಡಿಸಿದ ಪೋಷಕರು, ಅಕ್ಟೋಬರ್ 10 ರಂದು ಕೆಲವರನ್ನು ಶಾಲೆಗೆ ಕರೆದುಕೊಂಡು ಬಂದಿದ್ದರು. ಅಲ್ಲದೆ, ಶಾಲೆಯ ವಿರುದ್ಧ ಶಾಲೆಯ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದ್ದರು ಎಂದು ಆರೋಪಿಸಲಾಗಿದೆ.

ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯ ಪೋಷಕರು ಇತರ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರನ್ನು ಸಂಪರ್ಕಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಒತ್ತಾಯಿಸಿದ್ದಾರೆ ಎಂದು ಶಾಲೆಯು ಆರೋಪಿಸಿದೆ. ಪ್ರತಿಭಟನೆಗಳು, ವಿವಾದಗಳಿಂದಾಗಿ ಮುಂಜಾಗ್ರತೆ ಕ್ರಮವಾಗಿ ಶಾಲೆಗೆ ಎರಡು ದಿನ ರಜೆ ಘೋಷಿಸಿರುವುದಾಗಿ ಆಡಳಿತ ಮಂಡಳಿ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...