ವಿಚಿತ್ರ ಸಂಗತಿ | ತಪ್ಪಾದ ಅಕ್ಷರ ಬರೆದಿದ್ದಕ್ಕೆ ಶಿಕ್ಷಕನ ಅಮಾನತು: ಆದೇಶ ಪ್ರತಿಯಲ್ಲೂ ತಪ್ಪು ಅಕ್ಷರ ಬರೆದ ಅಧಿಕಾರಿಗಳು!

Date:

ಬ್ಯಾಂಕ್ ಚೆಕ್ ಪ್ರತಿಯನ್ನು ಬರೆಯುವಾಗ ಕಾಗುಣಿತ ತಪ್ಪಾಗಿ ಬರೆದ ಕಾರಣಕ್ಕೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ರೊನ್ಹತ್‌ನಲ್ಲಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ. ಆದರೆ ಈ ಅಮಾನತು ಆದೇಶ ಪ್ರತಿಯಲ್ಲೂ ಹಲವು ತಪ್ಪು ಅಕ್ಕರಗಳಿದ್ದು ಸದ್ಯ ಈ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಶಿಕ್ಷಕರೊಬ್ಬರು 7,616 ರೂ.ಗಳ ಚೆಕ್ ಬರೆಯುವಾಗ ಇಂಗ್ಲೀಷ್‌ನಲ್ಲಿ ತಪ್ಪಾಗಿ ಬರೆದಿದ್ದಾರೆ. seven thousand six hundred sixteen ಎಂದು ಬರೆಯುವ ಬದಲಾಗಿ Saven Thursday Six Harendra Sixty ಎಂದು ಬರೆದಿದ್ದಾರೆ. ಸೆಪ್ಟೆಂಬರ್ 25ರ ಈ ತಪ್ಪು ಅಕ್ಷರಗಳಿಂದ ಕೂಡಿದ ಚೆಕ್‌ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.

ಇದನ್ನು ಓದಿದ್ದೀರಾ? ಮಾಯಾವತಿ ವಿಚಿತ್ರ ನಿರ್ಧಾರಗಳು: ಆಕಾಶ್ ಪದಚ್ಯುತಿ, ಅಧೋಗತಿಯತ್ತ ಬಿಎಸ್‌ಪಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಾದ ಬಳಿಕ ಶಿಕ್ಷಕರನ್ನು ಅಮಾನತುಗೊಳಿಸಲಾಗಿದ್ದು ಅಕ್ಟೋಬರ್ 4ರಂದು ಅಮಾನತು ಆದೇಶ ಪ್ರತಿಯನ್ನು ನೀಡಲಾಗಿದೆ. ಅಮಾನತು ಆದೇಶವನ್ನು ಹೊರಡಿಸಿದ ಶಾಲಾ ಶಿಕ್ಷಣ (ಪ್ರಾಥಮಿಕ) ಉಪನಿರ್ದೇಶಕ ರಾಜೀವ್ ಠಾಕೂರ್ ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯೆ ನೀಡಿದ್ದು, “ಕಾಗುಣಿತ ದೋಷಗಳನ್ನು ಸಾಮಾನ್ಯವಾಗಿ ನಿರ್ಲಕ್ಷಿಸಲಾಗುತ್ತದೆ, ಎಚ್ಚರಿಕೆ ನೀಡಲಾಗುತ್ತದೆ. ಆದರೆ ಈ ಬಾರಿ ಪದಗಳನ್ನೇ ಬದಲಾಯಿಸಿರುವುದು ಕಂಡುಬಂದಿದೆ. ಸಾವಿರ(thousand) ಎಂದು ಬರೆಯುವ ಬದಲು ಗುರುವಾರ(Thursday) ಎಂದು ಬರೆಯಲಾಗಿದೆ. ನೂರು(hundred) ಎಂದು ಬರೆಯುವ ಬದಲು ಹರೇಂದ್ರ(Harendra) ಎಂದು ಬರೆಯಲಾಗಿದೆ. ಆದ್ದರಿಂದಾಗಿ ಅಮಾನತು ಕ್ರಮವನ್ನು ಕೈಗೊಂಡಿದ್ದೇವೆ” ಎಂದು ಹೇಳಿದ್ದಾರೆ.

ಆದರೆ ವಿಚಿತ್ರವೆಂದರೆ ಈ ಅಮಾನತು ಪ್ರತಿಯಲ್ಲಿಯೇ ಹಲವು ಕಾಗುಣಿತ ತಪ್ಪುಗಳು ಕಂಡುಬಂದಿದ್ದು, ಟ್ರೋಲಿಗರಿಗೆ ವಿಷಯವಸ್ತುವಾಗಿದೆ. Principal(ಪ್ರಾಂಶುಪಾಲರು) ಎಂದು ಬರೆಯುವ ಬದಲಾಗಿ princpal ಎಂದು ತಪ್ಪಾಗಿ ಬರೆಯಲಾಗಿದೆ. Sirmaur(ಸಿರ್ಮೌರ್) ಎಂದು ಬರೆಯುವ ಬದಲಾಗಿ Sirmour ಎಂದು ಉಲ್ಲೇಖಿಸಲಾಗಿದೆ. spellings(ಅಕ್ಷರಗಳು) ಬರೆಯಬೇಕಾದಲ್ಲಿ spelling ಎಂದು ಬರೆಯಲಾಗಿದೆ. education(ಶಿಕ್ಷಣ) ಬರೆಯುವಲ್ಲಿ educatioin ಎಂದು ತಪ್ಪು ಅಕ್ಷರವಿದೆ.

ಈ ಬಗ್ಗೆಯೂ ಮಾಧ್ಯಮಕ್ಕೆ ಅಧಿಕಾರಿ ಠಾಕೂರ್ ಪ್ರತಿಕ್ರಿಯೆ ನೀಡಿದ್ದಾರೆ. “ಸಮಯ ಕಡಿಮೆಯಿತ್ತು, ನಾವು ಆತುರದಿಂದ ನೋಟಿಸ್ ನೀಡಿದ್ದೇವೆ. ತಪ್ಪುಗಳು ಇರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಇವು ಕಾಗುಣಿತ ಮತ್ತು ಟೈಪಿಂಗ್ ದೋಷಗಳಾಗಿವೆ. ಈ ತಪ್ಪುಗಳು ಹೇಗಾಯಿತು ಎಂಬುದನ್ನು ನಾನು ಪರಿಶೀಲಿಸುತ್ತೇನೆ” ಎಂದು ಹೇಳಿದ್ದಾರೆ.

ಈ ವರ್ಷದ ಸೆಪ್ಟೆಂಬರ್ 8ರಂದು ಅಂತಾರಾಷ್ಟ್ರೀಯ ಸಾಕ್ಷರತಾ ದಿನದಂದು ಹಿಮಾಚಲ ಪ್ರದೇಶವನ್ನು ಸಂಪೂರ್ಣ ಸಾಕ್ಷರತಾ ರಾಜ್ಯವೆಂದು ಘೋಷಿಸಲಾಗಿದೆ. ಆದರೆ ಈ ರಾಜ್ಯದ ಶಾಲಾ ಶಿಕ್ಷಕರು ಮತ್ತು ಅಧಿಕಾರಿಗಳೇ ತಪ್ಪಾಗಿ ಬರೆಯುವುದನ್ನು ನೆಟ್ಟಿಗರು ವ್ಯಂಗ್ಯ ಮಾಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...