ಹಿಂದೂಗಳ ಜನಸಂಖ್ಯೆ ಕುಸಿತ, ಮುಸ್ಲಿಮರ ಸಂಖ್ಯೆ ಏರಿಕೆ: ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿ ವರದಿ

Date:

ಹಿಂದೂಗಳ ಜನಸಂಖ್ಯೆಯ ಪಾಲು 1950 ರಿಂದ 2015ರ ಅವಧಿಯಲ್ಲಿ ಶೇ.7.82 ಕುಸಿದಿದ್ದರೆ, ಮುಸ್ಲಿಮರ ಜನಸಂಖ್ಯೆ ಶೇ. 43.15 ರಷ್ಟು ಏರಿಕೆಯಾಗಿದೆ. ಇದು ಭಾರತದಲ್ಲಿ ವೈವಿದ್ಯತೆಯ ವಾತಾವರಣವಿದೆ ಎಂಬುದನ್ನು ಸೂಚಿಸುತ್ತದೆ ಎಂದು ಪ್ರಧಾನಮಂತ್ರಿಯ ಆರ್ಥಿಕ ಸಲಹಾ ಮಂಡಳಿಯ(ಇಎಸಿ-ಪಿಎಂ) ಇತ್ತೀಚಿನ ವರದಿಯೊಂದು ತಿಳಿಸಿದೆ.

ಧಾರ್ಮಿಕ ಅಲ್ಪಸಂಖ್ಯಾತರ ಪಾಲು – ದೇಶಾದ್ಯಂತ ವಿಶ್ಲೇಷಣೆ’(1950-2015) ವರದಿಯಲ್ಲಿ ತಿಳಿಸಲಾಗಿದೆ. ಜೈನರ ಜನಸಂಖ್ಯೆಯು ಭಾರತದಲ್ಲಿ 1950-2015ರವರೆಗೂ ಶೇ. 0.45 ರಿಂದ ಶೇ. 0.36 ಕ್ಕೆ ಕಡಿಮೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹಿಂದೂಗಳ ಸಂಖ್ಯೆ 1950 ರಿಂದ 2015ರವರೆಗೆ ಶೇ. 84.68 ರಿಂದ ಶೇ. 78.06ರವರೆಗೆ ಕಡಿಮೆಯಾಗಿದೆ. ಇದೇ ಅವಧಿಯಲ್ಲಿ ಮುಸ್ಲಿಮರ ಜನಸಂಖ್ಯೆ ಶೇ. 9.84 ರಿಂದ ಶೇ. 14.09ರವರೆಗೆ ಏರಿಕೆಯಾಗಿದೆ. ಭಾಗಾಂಶದಲ್ಲಿ ಹಿಂದೂಗಳ ಸಂಖ್ಯೆ ಶೇ.7.82 ಇಳಿಕೆಯಾಗಿದ್ದರೆ, ಮುಸ್ಲಿಮರ ಪಾಲು ಶೇ.43.15 ರಷ್ಟು ಏರಿಕೆಯಾಗಿದೆ ಎಂದು ವರದಿಯನ್ನು ಸಿದ್ಧಪಡಿಸಿದ ಇಎಸಿ-ಪಿಎಂ ಮಂಡಳಿಯ ಮುಖ್ಯಸ್ಥರಾದ ಶಮಿಕ ರವಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿಯಲ್ಲಿ 1950 ರಿಂದ 2015ರವರೆಗೆ ಕ್ರೈಸ್ತರ ಜನಸಂಖ್ಯೆ ಶೇ. 2.24 ರಿಂದ ಶೇ. 2.36 ವರೆಗೆ ಏರಿಕೆಯಾಗಿದೆ. ಭಾಗಾಂಶದಲ್ಲಿ ಶೇ.5.38 ರಷ್ಟು ಹೆಚ್ಚಳ ಕಂಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಸಿಖ್ಖರ ಜನಸಂಖ್ಯೆ 1950 ರಿಂದ 2015ರ ಅವಧಿಯಲ್ಲಿ ಶೇ.24 ರಷ್ಟು ಏರಿಕೆಯಾಗಿದೆ. ಭಾಗಾಂಶದಲ್ಲಿ ಶೇ.6.58 ರಷ್ಟು ಹೆಚ್ಚಾಗಿದೆ. ಅದೇ ರೀತಿ ಪಾರ್ಸಿ ಜನಸಂಖ್ಯೆ ಶೇ. 85 ರಷ್ಟು ಕುಸಿತ ಕಂಡಿದೆ. ಶೇಕಡವಾರಿನಲ್ಲಿ 0.03 ರಿಂದ 0.004 ರಷ್ಟು ಹೆಚ್ಚಳಗೊಂಡಿದೆ.

ಅಂಕಿಅಂಶಗಳು ಭಾರತದಲ್ಲಿ ವೈವಿದ್ಯತೆಯನ್ನು ಬೆಳಸಲು ಉತ್ತಮ ವಾತಾವರಣವಿದೆ ಎಂಬುದನ್ನು ಸೂಚಿಸುತ್ತದೆ. ತಳಮಟ್ಟದ ವಿಧಾನದ ಮೂಲಕ ಪೌಷ್ಟಿಕ ವಾತಾರಣ ಹಾಗೂ ಸಾಮಾಜಿಕ ಬೆಂಬಲ ಒದಗಿಸದೆ ಅನುಕೂಲ ವಂಚಿತ ಸಮಾಜಗಳ ಉತ್ತಮ ಜೀವನ ಮಟ್ಟವನ್ನು ಉತ್ತೇಜಿಸಲು ಸಾಧ್ಯವಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹಿಂದೂಗಳ ಜನಸಂಖ್ಯೆಯ ಇಳಿಕೆ ಹಾಗೂ ಅಲ್ಪಸಂಖ್ಯಾತರ ಗಮನಾರ್ಹ ಏರಿಕೆಗೆ ನೀತಿ ನಿರೂಪಣೆಗಳು, ರಾಜಕೀಯ ನಿರ್ಧಾರಗಳು ಹಾಗೂ ಸಾಮಾಜಿಕ ಪ್ರಕ್ರಿಯೆಗಳು ಪ್ರಮುಖ ಕಾರಣ ಎಂದು ತಿಳಿಸಲಾಗಿದೆ.

ಮಾಲ್ಡೀವ್ಸ್‌ ಹೊರತುಪಡಿಸಿ ಉಳಿದ ದಕ್ಷಿಣ ಏಷ್ಯಾದ ಮುಸ್ಲಿಂ ಬಾಹುಳ್ಯ ದೇಶಗಳಲ್ಲಿ ಅಲ್ಲಿನ ಪ್ರಮುಖ ಧಾರ್ಮಿಕ ಜನಸಂಖ್ಯೆ ಏರಿಕೆಗೊಂಡಿದೆ. ಅದೇ ರೀತಿ ಹಿಂದೂಗಳು ಹೆಚ್ಚಿರುವ ಭೂತಾನ್‌ ಹಾಗೂ ಬೌದ್ಧರ ಪ್ರಾಬಲ್ಯದ ಶ್ರೀಲಂಕಾದಲ್ಲಿ ಪ್ರಮುಖ ಧಾರ್ಮಿಕ ಜನಸಂಖ್ಯೆ ಏರಿಕೆ ಕಂಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬಾಂಗ್ಲಾದೇಶದಲ್ಲಿ ಶೇ.18, ಪಾಕಿಸ್ತಾನದಲ್ಲಿ ಶೇ.3.75 ಹಾಗೂ ಬಾಂಗ್ಲಾದೇಶದಲ್ಲಿ ಶೇ. 10 ರಷ್ಟು ಮುಸ್ಲಿಮರ ಜನಸಂಖ್ಯೆ ಏರಿಕೆಗೊಂಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...