ದನ ಕಳ್ಳಸಾಗಣೆ ಆರೋಪ: ತರಕಾರಿ ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಹತ್ಯೆಗೈದ ಹಿಂದುತ್ವ ಗೂಂಡಾಗಳು

Date:

ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ ಆಮಿರ್ (28) ಎಂಬ ಮುಸ್ಲಿಂ ಚಾಲಕನನ್ನು ಹಿಂದುತ್ವ ಕೋಮುವಾದಿ ಗೂಂಡಾಗಳು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಪುಂಡರು ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಆತನ ಕುಟುಂಬ ಆರೋಪಿಸಿದೆ.

ಆಮಿರ್ ಟ್ರಕ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಹಸುಗಳ ವ್ಯವಹಾರದಲ್ಲಿ ಅವನಿಗೆ ಯಾವುದೇ ಪಾತ್ರವಿರಲಿಲ್ಲ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಮೃತರ ಚಿಕ್ಕಪ್ಪ ಜುಬೈರ್ ಮಾತನಾಡಿ, ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಆಮಿರ್ ಅವರ ಟ್ರಕ್‌ಗೆ ತಮ್ಮ ಕಾರನ್ನು ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಿದ್ದಾರೆ. ಟ್ರಕ್ ನಿಂತ ತಕ್ಷಣ, ಯಾವುದೇ ಮಾತುಕತೆ ನಡೆಸದೆ ಅವರು ಅವರ ತಲೆಗೆ ಗುಂಡು ಹಾರಿಸಿದರು ಮತ್ತು ಇನ್ನೊಬ್ಬ ವ್ಯಕ್ತಿ ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ.

“ಮಾರ್ಚ್ 2 ರ ಬೆಳಿಗ್ಗೆ ಆಮಿರ್ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಮೊದಲು ನನಗೆ ಮಾಹಿತಿ ಬಂದಿತು. ಆದರೆ, ಅಮಿರ್ ಬದುಕುತ್ತಿದ್ದಾರೆಂದು ಪದೇ ಪದೇ ತಪ್ಪು ಮಾಹಿತಿ ನೀಡಲಾಗಿತ್ತು., ಒಂದು ಗಂಟೆಯ ನಂತರ, ಇಬ್ಬರು ಯುವಕರನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ಸ್ಥಳೀಯರೊಬ್ಬರು ನನಗೆ ತಿಳಿಸಿದರು” ಎಂದು ಜುಬೈರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ)ಭರವಸೆ ನೀಡಿದ್ದಾರೆ. ಅದರೆ, ಪೊಲೀಸ್ ಅಧಿಕಾರಿಗಳು ತಮ್ಮ ನಿರೂಪಣೆಯನ್ನು ಎರಡು ಬಾರಿ ಬದಲಾಯಿಸಿದ್ದಾರೆ. ಮೊದಲು, ಆಮಿರ್ ಮೇಲೆ ಕಲ್ಲು ತೂರಾಟ ನಡೆದಿದೆ ಎಂದಿದ್ದರು. ನಂತರ, ಈ ವಿಷಯ ತನಿಖೆಯಲ್ಲಿದೆ ಎಂದರು” ಎಂದು ಜುಬೈರ್ ಆರೋಪಿಸಿದ್ದಾರೆ.

“ಆಮಿರ್ ದನಗಳಲ್ಲ, ಹಣ್ಣು- ತರಕಾರಿ ತುಂಅಬಿದ ಟ್ರಕ್ ಓಡಿಸುತ್ತಿದ್ದ. ಅವನಿಗೆ ಹಸು ಕಳ್ಳಸಾಗಣೆಯಲ್ಲಿ ಯಾವುದೇ ಸಂಬಂಧವಿರಲಿಲ್ಲ” ಎಂದು ಜುಬೈರ್ ಹೇಳಿದ್ದಾರೆ.

ಆದರೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ, ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 103(1) ( ಕೊಲೆಗೆ ಶಿಕ್ಷೆ), 352 (ಉದ್ದೇಶಪೂರ್ವಕವಾಗಿ ಅಪರಾಧ ಮಾಡುವುದು ) ಮತ್ತು 125 ( ಮಾನವ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...