ರಾಷ್ಟ್ರಗೀತೆ ಮತ್ತು ಠಾಗೋರ್ ಬಗ್ಗೆ ಹಿಂದುತ್ವವಾದಿ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆ

Date:

ಹಿಂದುತ್ವದ ಅಮಲಿನಲ್ಲಿರುವ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಸುದ್ದಿಯಾಗುತ್ತಿದ್ದಾರೆ. ಇತ್ತೀಚೆಗೆ ಪ್ರವಾದಿ ಮೊಹಮದ್‌ ಬಗ್ಗೆ ಅವಹೇಳನಾಕಾರಿ ಕೇಳಿ ನೀಡಿ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದ ರಾಮಗಿರಿ ಮಹಾರಾಜ್, ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾರತದ ರಾಷ್ಟ್ರಗೀತೆ ಮತ್ತು ಕವಿ ರವೀಂದ್ರನಾಥ ಠಾಗೋರ್ ಅವರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರದ ಸಂಭಾಜಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರಾಮಗಿರಿ ಮಹಾರಾಜ್, “ಜನ, ಗಣ, ಮನ ಬದಲು ವಂದೇ ಮಾತರಂ ನಮ್ಮ ರಾಷ್ಟ್ರಗೀತೆ ಆಗಬೇಕು. ಭವಿಷ್ಯದಲ್ಲಿ ವಂದೇ ಮಾತರಂಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಲು ಹೋರಾಟ ಮಾಡಬೇಕು” ಎಂದು ಹೇಳಿದ್ದಾರೆ.

“ನಾವು ರಾಷ್ಟ್ರಗೀತೆಯನ್ನು ಕೇಳುತ್ತೇವೆ. ಆದರೆ, ನಮ್ಮ ರಾಷ್ಟ್ರಗೀತೆಯ ಇತಿಹಾಸ ಎಷ್ಟು ಜನರಿಗೆ ತಿಳಿದಿದೆ ಎಂಬುದು ಗೊತ್ತಿಲ್ಲ. ಆದರೆ ಇಂದು ನಾನು ಸತ್ಯ ಹೇಳುತ್ತಿದ್ದೇನೆ, ರವೀಂದ್ರನಾಥ ಠಾಗೋರ್ ಅವರು 1911ರಲ್ಲಿ ಕೋಲ್ಕತ್ತಾದಲ್ಲಿ ಜಾರ್ಜ್ ವಿ ಅವರನ್ನು ಬೆಂಬಲಿಸಿ ಈ ಹಾಡನ್ನು ಹಾಡಿದ್ದರು. ಅಂದು ಭಾರತವು ಸ್ವತಂತ್ರ ರಾಷ್ಟ್ರವಾಗಿರಲಿಲ್ಲ” ಎಂದು ಠಾಗೋರ್ ಅವರನ್ನು ನಿಂದಿಸಿ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾರ್ಜ್ ವಿ ಯಾರು? ಆತ ಬ್ರಿಟಿಷ್ ದೊರೆ. ಆತ ಭಾರತೀಯರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದ. ಆತನನ್ನು ಬೆಂಬಲಿಸಿ ಹಾಡಿದ್ದ ‘ಜನ, ಗಣ, ಮನ’ ಭಾರತದ ಜನರಿಗಾಗಿ ಬರೆದದ್ದಲ್ಲ. ಆದ್ದರಿಂದ, ವಂದೇ ಮಾತರಂ ನಮ್ಮ ರಾಷ್ಟ್ರಗೀತೆಯಾಗಬೇಕು. ಅದಕ್ಕಾಗಿ, ನಾವು ಹೋರಾಟ ಮಾಡಬೇಕು” ಎಂದು ಹೇಳಿದ್ದು, ವಿವಾದ ಸೃಷ್ಟಿಸಿದ್ದಾರೆ.

ಅಂದಹಾಗೆ, ‘ಜನ ಗಣ ಮನ’ ಗೀತೆಯನ್ನು ರವೀಂದ್ರನಾಥ ಠಾಗೋರ್ ಬರೆದದ್ದು 1911ರ ಡಿಸೆಂಬರ್ 11ರಂದು. ಈ ಗೀತೆಗೆ ಅವರು ಇಟ್ಟಿದ್ದ ಹೆಸರು ‘ಭಾರತೊ ಭಾಗ್ಯೊ ಬಿಧಾತ’. ಈ ಗೀತೆಯನ್ನು ಠಾಗೋರರು ಮೊದಲು ಹಾಡಿದ್ದು, 1911ರ ಡಿಸೆಂಬರ್ 27ರಂದು ಕೋಲ್ಕತಾದಲ್ಲಿ ನಡೆದ ಕಾಂಗ್ರೆಸ್ ಸಮ್ಮೇಳನದಲ್ಲಿ. ಈ ಗೀತೆಗೆ ಸಮ್ಮೇಳನದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಆ ನಂತರ, 1919ರ ಫೆಬ್ರವರಿ 28ರಂದು ಠಾಗೋರ್‌ ಅವರು ಬೆಸೆಂಟ್ ಥಿಯೊಸೊಫಿಕಲ್ ಕಾಲೇಜಿನಲ್ಲಿ ಹಾಡಿದ್ದರು. ಈ ಹಾಡು ಹಲವಾರು ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿತ್ತು. ಭಾರತ ಸ್ವಾತಂತ್ರ್ಯಗೊಂಡ ನಂತರ, ಈ ಗೀತೆಯನ್ನು ಭಾರತದ ಸಂವಿಧಾನ ರಚನಾಸಭೆಯು 1950 ಜನವರಿ 24ರಂದು ರಾಷ್ಟ್ರಗೀತೆಯೆಂದು ಘೋಷಿಸಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...