ಮರ್ಯಾದೆಗೇಡು ಹತ್ಯೆ| ಹರಿಯಾಣದ ನವ ವಿವಾಹಿತ ದಂಪತಿಗೆ ಗುಂಡಿಕ್ಕಿ ಕೊಲೆ

Date:

ಹರಿಯಾಣದ ಹಿಸಾರ್ ಜಿಲ್ಲೆಯ ಹನ್ಸಿ ಪಟ್ಟಣದಲ್ಲಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಸೋಮವಾರ ಹಾಡಹಗಲಲ್ಲೇ ನವ ವಿವಾಹಿತ ದಂಪತಿಯನ್ನು ಗುಂಡಿಕ್ಕಿ ಕೊಂದಿದ್ದು ಮರ್ಯಾದೆಗೇಡು ಹತ್ಯೆ ಎಂದು ಶಂಕಿಸಲಾಗಿದೆ.

ಮೃತರನ್ನು ನಾರ್ನಾಂಡ್‌ನ ಬಡಾಲಾ ಗ್ರಾಮದ ನಿವಾಸಿ ತೇಜ್‌ವೀರ್ ಸಿಂಗ್ (ಪತಿ) ಮತ್ತು ಹಂಸಿಯ ಸುಲ್ತಾನ್‌ಪುರ ಗ್ರಾಮದ ಮೀನಾ (ಪತ್ನಿ) ಎಂದು ಪೊಲೀಸರು ಗುರುತಿಸಿದ್ದಾರೆ. ಎರಡು ತಿಂಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರು.

ದಂಪತಿಗಳು ಬೆಳಿಗ್ಗೆ ಲಾಲಾ ಹುಕಂಚಂದ್ ಜೈನ್ ಪಾರ್ಕ್‌ಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಉದ್ಯಾನವನಕ್ಕೆ ಬಂದಿದ್ದು, ಇಬ್ಬರ ಮೇಲೆ ಮನಬಂದಂತೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಂಡಿನ ಸದ್ದು ಕೇಳಿ ಪಾರ್ಕ್‌ನಲ್ಲಿದ್ದ ಜನರು ಭಯಭೀತರಾಗಿ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಇದನ್ನು ಓದಿದ್ದೀರಾ?  ವಿಜಯಪುರ | ಮರ್ಯಾದೆಗೇಡು ಹತ್ಯೆ: ಗರ್ಭಿಣಿಯನ್ನು ಕೊಂದಿದ್ದ ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಮೂಲಗಳ ಪ್ರಕಾರ, ಇವರಿಬ್ಬರು ಜಾಟ್ ಸಮುದಾಯಕ್ಕೆ ಸೇರಿದವರಾಗಿದ್ದು, ಎರಡು ವರ್ಷಗಳಿಂದ ಸಂಬಂಧ ಹೊಂದಿದ್ದರು. ಎರಡು ತಿಂಗಳ ಹಿಂದೆ ಮನೆ ಬಿಟ್ಟು ಬಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ವಿವಾಹವಾಗಿದ್ದರು. ತೇಜ್‌ವೀರ್ ಸಿಂಗ್ ನೋಯ್ಡಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ತೇಜ್‌ವೀರ್ ಸಿಂಗ್ ದೂರದ ಸಂಬಂಧಿಕ ಆಗಿದ್ದರಿಂದ ಮೀನಾ ಮನೆಯವರು ಈ ಸಂಬಂಧಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆಕೆ ತನ್ನ ಪತಿಯ ಮಾವನ ಸೋದರ ಮಾವನ ಮಗಳು ಎಂದು ವರದಿಯಾಗಿದ್ದು, ಇಬ್ಬರೂ ಪ್ರತ್ಯೇಕ ಗ್ರಾಮಗಳಿಗೆ ಸೇರಿದವರು.

ಇದನ್ನು ಓದಿದ್ದೀರಾ?  ಮರ್ಯಾದೆಗೇಡು ಹತ್ಯೆ | ತಂಗಿಯನ್ನೇ ಕೆರೆಗೆ ತಳ್ಳಿ ಹತ್ಯೆಗೈದ ಕೋಮುವಾದಿ ಸಹೋದರ

ವಧುವಿನ ತಂದೆ, ಚಿಕ್ಕಪ್ಪ ಮತ್ತು ಸಹೋದರ ಸೇರಿದಂತೆ ವಧುವಿನ ಕುಟುಂಬದ 11 ಸದಸ್ಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಖಾಲಿ ಗಾಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹನ್ಸಿ ಮಕ್ಸೂದ್ ಅಹ್ಮದ್ ತಿಳಿಸಿದ್ದಾರೆ. ಹತ್ಯೆಯ ನಿಜವಾದ ಕಾರಣವನ್ನು ತಿಳಿಯಲು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಪಿ ಹೇಳಿದ್ದಾರೆ.

ಸ್ಥಳದಲ್ಲಿಯೇ ದ್ವಿಚಕ್ರವಾಹನದ ಕೀಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅದರ ಮಾಲೀಕರ ಶೋಧ ಕಾರ್ಯಾಚರಣೆ ಆರಂಭವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...