ಗುಜರಾತ್ ವಿಮಾನ ದುರಂತ | ವೈದ್ಯರು ಸೇರಿ ಒಂಬತ್ತು ಮಂದಿ ಸಾವು; ಹಾಸ್ಟೆಲ್ ತೆರವು

Date:

ಗುಜರಾತ್ ವಿಮಾನ ದುರಂತದಲ್ಲಿ ಹಾಸ್ಟೆಲ್‌ನಲ್ಲಿ ಊಟ ಮಾಡುತ್ತಿದ್ದ ಒಂಬತ್ತು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಾಸ್ಟೆಲ್ ತೆರವುಗೊಳಿಸಲಾಗಿದೆ. ಗುರುವಾರ ಮಧ್ಯಾಹ್ನ ಬಿಜೆ ವೈದ್ಯಕೀಯ ಕಾಲೇಜಿನ ಮೆಸ್ ಕಟ್ಟಡಕ್ಕೆ ಏರ್ ಇಂಡಿಯಾ ವಿಮಾನ ಅಪ್ಪಳಿಸಿದ್ದು ಐವರು ವೈದ್ಯರು ಮತ್ತು ಅವರ ಕುಟುಂಬದ ನಾಲ್ವರು ಸದಸ್ಯರು ಸಾವನ್ನಪ್ಪಿದ್ದಾರೆ.

ಈ ವಿಮಾನ ದುರಂತದ ವೇಳೆ ಅಡುಗೆಯವರು ಸೇರಿದಂತೆ 60ಕ್ಕೂ ಹೆಚ್ಚು ವೈದ್ಯರು ಮತ್ತು ಮೆಸ್ ಸಿಬ್ಬಂದಿ ಒಳಗೆ ಇದ್ದರು ಎನ್ನಲಾಗಿದೆ. ಊಟದ ಸಮಯವಾಗಿದ್ದ ಕಾರಣ ಅನೇಕ ವೈದ್ಯರು ಊಟಕ್ಕಾಗಿ ಮೆಸ್‌ಗೆ ಬಂದಿದ್ದರು. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಐವರು ಗಂಭೀರವಾಗಿದ್ದಾರೆ.

ಇದನ್ನು ಓದಿದ್ದೀರಾ? ಊಟ ಮಾಡುತ್ತಿದ್ದಾಗಲೇ ಹಾಸ್ಟೆಲ್‌ ಮೇಲೆ ಬಿದ್ದ ವಿಮಾನ; 7 ವೈದ್ಯಕೀಯ ವಿದ್ಯಾರ್ಥಿಗಳ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ದುರಂತದಲ್ಲಿ ಮೃತಪಟ್ಟವರಲ್ಲಿ ಸಿವಿಲ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ. ಪ್ರದೀಪ್ ಸೋಲಂಕಿ ಅವರ ಗರ್ಭಿಣಿ ಪತ್ನಿ ಕೂಡ ಸೇರಿದ್ದಾರೆ. ವಿದ್ಯಾರ್ಥಿ ಡಾ. ನೀಲಕಂಠ್ ಅವರು ತಮ್ಮನ್ನು ಭೇಟಿಯಾಗಲು ಬಂದಿದ್ದ ತಾಯಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಕಳೆದುಕೊಂಡಿದ್ದಾರೆ.

ಒಟ್ಟಾಗಿ ನಾಲ್ಕು ಕಟ್ಟಡಗಳ ಮೇಲೆ ಈ ವಿಮಾನ ಪತನ ಪರಿಣಾಮ ಬೀರಿದೆ. ಇವೆಲ್ಲವುದರ ನಡುವೆ ಇದೀಗ ಸಂಪೂರ್ಣ ಹಾಸ್ಟೆಲ್ ಅನ್ನೇ ತೆರವು ಮಾಡಬೇಕಾಗಿದೆ. ತನಿಖೆ ಪ್ರಾರಂಭಿಸುತ್ತಿದ್ದಂತೆ, ಹಾಸ್ಟೆಲ್ ಕಟ್ಟಡಗಳನ್ನು ಅಸುರಕ್ಷಿತವೆಂದು ಗುರುತಿಸಲಾಗಿದ್ದು, ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿ ಜೆ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮೀನಾಕ್ಷಿ ಪರೇಖ್, “ಸುರಕ್ಷತೆಗಾಗಿ ಸ್ಥಳಾಂತರ ಮಾಡುವುದು ಅಗತ್ಯ. ಹಾಸ್ಟೆಲ್ ಖಾಲಿ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ನಾಲ್ಕು ಕಟ್ಟಡಗಳಲ್ಲಿ ಇರುವವರನ್ನು ತೆರವು ಮಾಡಲಾಗುವುದು” ಎಂದು ತಿಳಿಸಿದ್ದಾರೆ.

“ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಯುಎನ್ ಮೆಹ್ತಾ ಹಾಸ್ಟೆಲ್, ದಂತ ಕಾಲೇಜು ಮತ್ತು ಮಿಥಿಲಾ ಹಾಸ್ಟೆಲ್‌ಗೆ ಸ್ಥಳಾಂತರಿಸಲಾಗಿದೆ. ಜಿಸಿಆರ್‌ಎಸ್ ವೈದ್ಯರು ಕ್ಯಾಂಪಸ್‌ನಲ್ಲಿಯೇ ಇದ್ದಾರೆ. ವಸತಿ ಸಮಸ್ಯೆ ಆಗದಿರಲಿ ಎಂದು ನಾವು ಒಂದು ವರ್ಷಕ್ಕೆ 50 ಕೊಠಡಿಗಳನ್ನು ಬಾಡಿಗೆಗೆ ಪಡೆದಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...