‘ನಿಮ್ಮ ಪೊಲೀಸ್ ವ್ಯವಸ್ಥೆ ಇಷ್ಟೊಂದು ಸಂವೇದನಾಶೂನ್ಯವೇ?’ ಪೊಲೀಸರ ವಿರುದ್ಧ ಸಿಜೆಐ ಆಕ್ರೋಶ

Date:

ಮೂರು ವರ್ಷದ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಆರೋಪಿಗಳ ಎದುರಿಗೇ ನಿಲ್ಲಿಸಿ, ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡ ಗುರುಗ್ರಾಮ್ ಮ್ಯಾಜಿಸ್ಟ್ರೇಟ್ ನಡವಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ‘ಇದು ಅತ್ಯಂತ ಆತಂಕಕಾರಿ ವಿಷಯ. ಪೊಲೀಸ್‌ ವ್ಯವಸ್ಥೆ ಇಷ್ಟೊಂದು ಸಂವೇದನಾಶೂನ್ಯವಾಗಿದೆಯೇ’ ಎಂದು ಪ್ರಶ್ನಿಸಿದೆ.

ಮ್ಯಾಜಿಸ್ಟ್ರೇಟ್ ನಡವಳಿಕೆ ಕುರಿತು ಬಾಲಕಿಯ ತಂದೆ ಸಲ್ಲಿಸಿದ ಅಫಿಡವಿಟ್ಅನ್ನು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿದೆ. ಮ್ಯಾಜಿಸ್ಟ್ರೇಟ್ ಅವರಿಂದ ವಿವರಣೆ ಪಡೆದು ವರದಿ ಸಲ್ಲಿಸುವಂತೆ ಗುರುಗ್ರಾಮ್ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಸೂಚನೆ ನೀಡಿದೆ.

ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, “ಎಫ್‌ಐಆರ್ ದಾಖಲಾಗಿ ನಾಲ್ಕು ವಾರಗಳಾದರೂ ಯಾವುದೇ ಬಂಧನವಾಗಿಲ್ಲ, ಪೋಷಕರು ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ. ತನಿಖೆಯನ್ನು ಸಿಬಿಐ ಅಥವಾ ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ಎಸ್‌ಐಟಿಗೆ ವಹಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಒಂದೂವರೆ ತಿಂಗಳಿನಿಂದ ಈ ಮೂರು ವರ್ಷದ ಮಗುವನ್ನು ಹೇಳಿಕೆ ದಾಖಲಿಸಲು ಪೊಲೀಸ್ ಠಾಣೆ ಮತ್ತು ಮಕ್ಕಳ ಕಲ್ಯಾಣ ಸಮಿತಿ (CWC) ಕಚೇರಿಗೆ ಅಲೆದಾಡಿಸಲಾಗುತ್ತಿದೆ. ನಿಯಮದ ಪ್ರಕಾರ ಸಿಡಬ್ಲ್ಯೂಸಿಯೇ ಬಾಲಕಿಯ ಮನೆಗೆ ಬರಬೇಕಿತ್ತು. ಇನ್ನು, ಮ್ಯಾಜಿಸ್ಟ್ರೇಟ್ ಅವರು ಮಗುವಿಗೆ ‘ನಿನಗೆ ಪ್ರಮಾಣ ವಚನ ಅರ್ಥವಾಗುವುದಿಲ್ಲ, ನಿಜ ಹೇಳು’ ಎಂದು ಕೇಳುತ್ತಿದ್ದಾರೆ. ಹೇಳಿಕೆ ದಾಖಲಿಸುವ ಅದೇ ಕೊಠಡಿಯಲ್ಲಿ ಮೂವರು ಆರೋಪಿಗಳೂ ಇದ್ದರು. ಮಗು ಈಗಾಗಲೇ ಆಘಾತದಲ್ಲಿದೆ. ಮಗುವಿನ ಪೋಷಕರಿಲ್ಲದೆ ಸಿಡಬ್ಲ್ಯೂಸಿ 30 ನಿಮಿಷಗಳ ಕಾಲ ಮಗುವನ್ನು ಮುಚ್ಚಿದ ಕೋಣೆಯಲ್ಲಿ ಅಪರಿಚಿತ ಮಹಿಳೆಯರೊಂದಿಗೆ ಇರಿಸಿತ್ತು. ಈ ಪ್ರಕರಣದ ಮೊದಲ ತನಿಖಾಧಿಕಾರಿ (IO) ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಲಂಚ ಪಡೆದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ” ಎಂದು ವಿವರಿಸಿದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಿಜೆಐ ಸೂರ್ಯಕಾಂತ್, “ನಿಮ್ಮ ಪೊಲೀಸರು ಎಷ್ಟೊಂದು ಸಂವೇದನಾಶೂನ್ಯರಾಗಿದ್ದಾರೆ? ಈ ಹಿಂದೆ ಕೂಡ ನೀವು ಅಂತಹ ದೊಡ್ಡ ಸಾಧನೆಯನ್ನೇನೂ ಮಾಡಿಲ್ಲ. ಇಂತಹ ಘಟನೆಯನ್ನು ನಾವು ನಿರೀಕ್ಷಿಸಿರಲಿಲ್ಲ. ಅದು ಕೂಡ ಮೆಟ್ರೋಪಾಲಿಟನ್ ನಗರವೆಂದು ಕರೆಸಿಕೊಳ್ಳುವ ಕಡೆ ಈ ರೀತಿಯಲ್ಲಿ ನಡೆಯುತ್ತಿದೆ” ಎಂದು ಕಿಡಿಕಾರಿದರು.

ಅಫಿಡವಿಟ್‌ನಲ್ಲಿರುವ ಮಾಹಿತಿಯನ್ನು ಉಲ್ಲೇಖಿಸಿದ ಸಿಜೆಐ, “ಪೊಲೀಸ್ ಅಧಿಕಾರಿ ಮಗುವಿನ ಪೋಷಕರಿಗೆ ‘ನಿಮಗೇನು ಬೇಕು?’ ಎಂದು ಕೇಳುತ್ತಿದ್ದಾರೆ. ಇಂತಹ ಗಂಭೀರ ಪ್ರಕರಣಗಳಲ್ಲಿ ಪೋಷಕರು ದೂರು ನೀಡದಿದ್ದರೂ ಎಫ್‌ಐಆರ್ ದಾಖಲಿಸುವುದು ಪೊಲೀಸರ ಕರ್ತವ್ಯವಲ್ಲವೇ? ಅವರಿಗೆ ಕನಿಷ್ಠ ಕಾನೂನಿನ ಅರಿವಿದೆಯೇ” ಎಂದು ಖಾರವಾಗಿ ಪ್ರಶ್ನಿಸಿದರು.

ನ್ಯಾಯಮೂರ್ತಿ ಬಾಗ್ಚಿ, “ಇಂತಹ ಸಂದರ್ಭಗಳಲ್ಲಿ ಛಾಯಾಚಿತ್ರಗಳ ಮೂಲಕ ಆರೋಪಿಗಳನ್ನು ಗುರುತಿಸಬೇಕೇ ಹೊರತು ಮಗುವನ್ನು ಆರೋಪಿಗಳ ಮುಂದೆ ತರಬಾರದು” ಎಂದರು.

ಪೀಠವು ಮಾರ್ಚ್ 25ರಂದು ಸಂಪೂರ್ಣ ತನಿಖಾ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗುವಂತೆ ಗುರುಗ್ರಾಮ್ ಪೊಲೀಸ್ ಕಮಿಷನರ್ ಮತ್ತು ತನಿಖಾಧಿಕಾರಿಗೆ (IO) ಆದೇಶಿಸಿದೆ.

ಈ ಲೇಖನ ಓದಿದ್ದೀರಾ?: ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಪೊಲೀಸರ ಪರವಾಗಿ ವಾದ ಮಂಡಿಸಿದ ವಕೀಲರು, ”ಕಳೆದ ಶನಿವಾರವಷ್ಟೇ ಗುರುಗ್ರಾಮ್ ಪೊಲೀಸರು ಇಬ್ಬರು ಮಹಿಳಾ ಮನೆಗೆಲಸದವರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ” ಎಂದು ತಿಳಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ, “ಆರೋಪಿಗಳನ್ನು ನಿನ್ನೆಯಷ್ಟೇ ಬಂಧಿಸಲಾಗಿದೆ ಎಂದು ಪತ್ರಿಕೆಗಳಲ್ಲಿ ಓದಿದೆವು. ಇಲ್ಲಿಯವರೆಗೆ ಪೊಲೀಸರು ಏನು ಮಾಡುತ್ತಿದ್ದರು” ಎಂದು ಪ್ರಶ್ನಿಸಿದರು.

ಆರೋಪಿಗಳನ್ನು ಮತ್ತೆ ಗುರುತಿಸಲು ಮಗುವಿನೊಂದಿಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುವಂತೆ ಸೋಮವಾರ ಬೆಳಿಗ್ಗೆ ಪೋಷಕರಿಗೆ ಕರೆ ಬಂದಿದೆ ಎಂದು ರೋಹಟಗಿ ತಿಳಿಸಿದಾಗ, “ಹಾಜರಾಗಬೇಡಿ. ತಂದೆಗೆ ಇಷ್ಟವಿಲ್ಲದಿದ್ದರೆ ಹೋಗುವ ಅಗತ್ಯವಿಲ್ಲ” ಎಂದು ಸಿಜೆಐ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...