ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸತ್ಯಕಿ ಸಾವರ್ಕರ್‌

Date:

  • ಪುಣೆಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸತ್ಯಕಿ ಸಾವರ್ಕರ್
  • ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದ ಸಾವರ್ಕರ್‌ ವಿಚಾರ ಲಂಡನ್‌ನಲ್ಲಿ ಪ್ರಸ್ತಾಪಿಸಿದ್ದ ರಾಹುಲ್

ವಿನಾಯಕ ದಾಮೋದರ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್, ರಾಹುಲ್ ಗಾಂಧಿ ವಿರುದ್ಧ ಪುಣೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 

ರಾಹುಲ್ ಗಾಂಧಿ ತಮ್ಮ ಲಂಡನ್ ಭಾಷಣದಲ್ಲಿ ಸಾವರ್ಕರ್ ವಿರುದ್ಧ ತಪ್ಪಾಗಿ ಆರೋಪಿಸಿದ್ದಕ್ಕೆ ಈ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವರ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಹಾಗೂ 500ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

“ನಾನು ನ್ಯಾಯಾಲಯದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ನ್ಯಾಯಾಲಯದ ಅಧಿಕಾರಿ ಗೈರು ಹಾಜರಾಗಿದ್ದ ಕಾರಣ ಪ್ರಕರಣದ ಸಂಖ್ಯೆ ಪಡೆಯಲು ಶನಿವಾರ ಆಗಮಿಸುವಂತೆ ಸೂಚಿಸಲಾಗಿದೆ. ಇನ್ನೂ ಪ್ರಕರಣ ಸಂಖ್ಯೆ ದೊರಕಿಲ್ಲ” ಎಂದು ಸಾವರ್ಕರ್ ಹೇಳಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

40 ವರ್ಷ ವಯಸ್ಸಿನ ಸತ್ಯಕಿ ಅವರು ವಿ ಡಿ ಸಾವರ್ಕರ್‌ ಅವರ ಸಹೋದರ, ನಾರಾಯಣ ದಾಮೋದರ್‌ ಸಾವರ್ಕರ್‌ ಅವರ ಮೊಮ್ಮಗ.

ಲಂಡನ್‌ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಸಾವರ್ಕರ್ ವಿಷಯವನ್ನು ಪ್ರಸ್ತಾಪಿಸಿದ್ದರು. “ತಾವು ಹಾಗೂ ತಮ್ಮ ಐದಾರು ಮಂದಿ ಸ್ನೇಹಿತರು ಸೇರಿ ಓರ್ವ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದೆವು. ಆಗ ತಮಗೆ ಸಂತೋಷವಾಗಿತ್ತು” ಎಂದು ಸಾವರ್ಕರ್ ತಮ್ಮ ಪುಸ್ತಕದಲ್ಲಿ ಬರೆದಿರುವುದಾಗಿ ರಾಹುಲ್ ಗಾಂಧಿ ಸಭೆಗೆ ತಿಳಿಸಿದ್ದರು.

ಈ ಘಟನೆಯನ್ನು ಉಲ್ಲೇಖಿಸಿದ್ದ ರಾಹುಲ್ ಗಾಂಧಿ, ಇದು ಹೇಡಿತನವಲ್ಲವೇ ಎಂದು ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಉಲ್ಲೇಖಿಸಿದ್ದ ಈ ಪ್ರಕರಣ ಕಲ್ಪಿತವಾದದ್ದು, ಸಾವರ್ಕರ್ ಜೀವನದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಸಾವರ್ಕರ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವರು. ಮುಸ್ಲಿಮರಿಗೆ ವೈಜ್ಞಾನಿಕ ವಿಧಾನ ಅಳವಡಿಸಿಕೊಳ್ಳುವಂತೆ ಸಾವರ್ಕರ್ ಸಲಹೆ ನೀಡುತ್ತಿದ್ದರು ಎಂದು ಸತ್ಯಕಿ ಹೇಳಿದ್ದಾರೆ. 

ಮೋದಿ ಉಪನಾಮದ ಮಾನನಷ್ಟ ಪ್ರಕರಣ

ಪ್ರಧಾನಿ ಮೋದಿ ಉಪನಾಮದ ಕುರಿತ ಹೇಳಿಕೆ ಸಂಬಂಧ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಏಪ್ರಿಲ್ 3ರಂದು ಶಿಕ್ಷೆ ಆದೇಶ ಪ್ರಶ್ನಿಸಿ ಸೂರತ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಮಾನಹಾನಿ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ರಾಹುಲ್ ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ನೀಡಿರುವ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಮನವಿ ಮಾಡಿದ್ದಾರೆ.

ಮಾನಹಾನಿ ಮೊಕದ್ದಮೆಯಲ್ಲಿ ಮಾರ್ಚ್ 23ರಂದು ಸೂರತ್‌ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಲ್ಲದೆ ನ್ಯಾಯಾಲಯ ಪ್ರಕರಣದಲ್ಲಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಅವರಿಗೆ ಜಾಮೀನು ನೀಡಿ 30 ದಿನಗಳವರೆಗೆ ಕಾಲಾವಕಾಶ ಒದಗಿಸಿತು. ಮಾರ್ಚ್‌ 24 ರಂದು ರಾಹುಲ್‌ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಸಂಸದ ಸ್ಥಾನದಿಂದ ರಾಹುಲ್ ಅವರನ್ನು ಅನರ್ಹಗೊಳಿಸಿದ ಕೆಲವು ದಿನಗಳ ನಂತರ, ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ದೆಹಲಿ ಬಂಗಲೆಯನ್ನು ತೆರವು ಮಾಡುವಂತೆ ಲೋಕಸಭೆ ನೋಟಿಸ್ ನೀಡಿದೆ.

2004ರಲ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಾಗ ಅವರಿಗೆ ನವದೆಹಲಿಯ ಲುಧಿಯಾನ ಏರಿಯಾದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ಸರಕಾರದ ವತಿಯಿಂದ ನೀಡಲಾಗಿತ್ತು. ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾರಣ ಏಪ್ರಿಲ್‌ 22ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಲೋಕಸಭಾ ವಸತಿ ಸಮಿತಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...